ಬ್ರೇಕಿಂಗ್ ನ್ಯೂಸ್
14-07-24 07:45 pm Mangalore Correspondent ಕ್ರೈಂ
ಮಂಗಳೂರು, ಜುಲೈ 14: ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಮದ್ರಸಾ ಶಿಕ್ಷಕನೊಬ್ಬ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿಬಂದಿದ್ದು ಬಸ್ಸಿನಲ್ಲಿದ್ದ ಮಹಿಳೆಯರೇ ಸೇರಿ ಆತನಿಗೆ ಗೂಸಾ ನೀಡಿದ್ದಾರೆ.
ಮಹಿಳೆಯರಿದ್ದ ಕುಟುಂಬವೊಂದು ಶನಿವಾರ ಸಂಜೆ ಧರ್ಮಸ್ಥಳಕ್ಕೆ ತೆರಳುವುದಕ್ಕಾಗಿ ಬೆಂಗಳೂರಿನಿಂದ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಬಂದಿತ್ತು. ಈ ವೇಳೆ, ಬಸ್ ಹಾಸನ ತಲುಪಿದಾಗ ಉಸ್ತಾದ್ ಬಸ್ ಹತ್ತಿದ್ದು ಬಾಲಕಿ ಬಳಿಯಲ್ಲೇ ಕುಳಿತುಕೊಂಡಿದ್ದ. ಬಸ್ಸು ಸಕಲೇಶಪುರ ಘಾಟ್ ಹೆದ್ದಾರಿಯಲ್ಲಿ ಬರುತ್ತಿದ್ದಾಗ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೈಕೈ ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದಾನೆ. ಇದನ್ನರಿತ ಬಾಲಕಿ ತಾಯಿ ಉಸ್ತಾದ್ ನನ್ನು ಪ್ರಶ್ನೆ ಮಾಡಿದ್ದು ನನ್ನನ್ನು ಮುಟ್ಟಿ ನೋಡು, ಏನಾ ನಿಂಗೆ ಅಂತ ಹಲ್ಲೆಗೆ ಮುಂದಾಗಿದ್ದಾರೆ. ಇದೇ ವೇಳೆ, ಇತರ ಮಹಿಳಾ ಪ್ರಯಾಣಿಕರು ಸೇರಿಕೊಂಡು ಮುಖಕ್ಕೆ ಗುದ್ದಿ ಹಲ್ಲೆ ನಡೆಸಿದ್ದಾರೆ.

ಮಹಿಳೆಯರು ಗೂಸಾ ನೀಡಿದ ಘಟನೆಯ ದೃಶ್ಯ ಮೊಬೈಲಿನಲ್ಲಿ ಸೆರೆಯಾಗಿದೆ. ಬೆಂಗಳೂರಿನಿಂದ ಮಂಗಳೂರು ಬರುತ್ತಿದ್ದ ಬಸ್ಸಿನಲ್ಲಿ ಬಂದಿದ್ದ ಬಾಲಕಿಯ ಕುಟುಂಬ, ಬಸ್ ಗುಂಡ್ಯ ತಲುಪುತ್ತಿದ್ದಂತೆ ಇಳಿದಿದ್ದಾರೆ. ಆ ಕುಟುಂಬವನ್ನು ಬೆಂಬಲಿಸಿದ ಬಂಟ್ವಾಳ ಮತ್ತು ಶಿವಮೊಗ್ಗದ ಯುವಕರನ್ನು ದುರುಗುಟ್ಟಿದ್ದು ಈ ಬಗ್ಗೆ ಯುವಕರು ಉಪ್ಪಿನಂಗಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆದರೆ ಬಸ್ ಉಪ್ಪಿನಂಗಡಿ ತಲುಪುತ್ತಲೇ ಉಸ್ತಾದ್ ಬಸ್ಸಿನಿಂದ ಇಳಿದು ಹೋಗಿದ್ದಾನೆ. ಘಟನೆ ಬಗ್ಗೆ ಪ್ರಕರಣ ದಾಖಲಾಗಿಲ್ಲ. ಆದರೆ ಗೂಸಾ ನೀಡಿದ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ.
Mangalore Puttur Sexual harassment of girl on KSRTC bus Passengers assault accused, video goes viral on social media.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm