ಬ್ರೇಕಿಂಗ್ ನ್ಯೂಸ್
14-07-24 07:45 pm Mangalore Correspondent ಕ್ರೈಂ
ಮಂಗಳೂರು, ಜುಲೈ 14: ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಮದ್ರಸಾ ಶಿಕ್ಷಕನೊಬ್ಬ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿಬಂದಿದ್ದು ಬಸ್ಸಿನಲ್ಲಿದ್ದ ಮಹಿಳೆಯರೇ ಸೇರಿ ಆತನಿಗೆ ಗೂಸಾ ನೀಡಿದ್ದಾರೆ.
ಮಹಿಳೆಯರಿದ್ದ ಕುಟುಂಬವೊಂದು ಶನಿವಾರ ಸಂಜೆ ಧರ್ಮಸ್ಥಳಕ್ಕೆ ತೆರಳುವುದಕ್ಕಾಗಿ ಬೆಂಗಳೂರಿನಿಂದ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಬಂದಿತ್ತು. ಈ ವೇಳೆ, ಬಸ್ ಹಾಸನ ತಲುಪಿದಾಗ ಉಸ್ತಾದ್ ಬಸ್ ಹತ್ತಿದ್ದು ಬಾಲಕಿ ಬಳಿಯಲ್ಲೇ ಕುಳಿತುಕೊಂಡಿದ್ದ. ಬಸ್ಸು ಸಕಲೇಶಪುರ ಘಾಟ್ ಹೆದ್ದಾರಿಯಲ್ಲಿ ಬರುತ್ತಿದ್ದಾಗ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೈಕೈ ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದಾನೆ. ಇದನ್ನರಿತ ಬಾಲಕಿ ತಾಯಿ ಉಸ್ತಾದ್ ನನ್ನು ಪ್ರಶ್ನೆ ಮಾಡಿದ್ದು ನನ್ನನ್ನು ಮುಟ್ಟಿ ನೋಡು, ಏನಾ ನಿಂಗೆ ಅಂತ ಹಲ್ಲೆಗೆ ಮುಂದಾಗಿದ್ದಾರೆ. ಇದೇ ವೇಳೆ, ಇತರ ಮಹಿಳಾ ಪ್ರಯಾಣಿಕರು ಸೇರಿಕೊಂಡು ಮುಖಕ್ಕೆ ಗುದ್ದಿ ಹಲ್ಲೆ ನಡೆಸಿದ್ದಾರೆ.

ಮಹಿಳೆಯರು ಗೂಸಾ ನೀಡಿದ ಘಟನೆಯ ದೃಶ್ಯ ಮೊಬೈಲಿನಲ್ಲಿ ಸೆರೆಯಾಗಿದೆ. ಬೆಂಗಳೂರಿನಿಂದ ಮಂಗಳೂರು ಬರುತ್ತಿದ್ದ ಬಸ್ಸಿನಲ್ಲಿ ಬಂದಿದ್ದ ಬಾಲಕಿಯ ಕುಟುಂಬ, ಬಸ್ ಗುಂಡ್ಯ ತಲುಪುತ್ತಿದ್ದಂತೆ ಇಳಿದಿದ್ದಾರೆ. ಆ ಕುಟುಂಬವನ್ನು ಬೆಂಬಲಿಸಿದ ಬಂಟ್ವಾಳ ಮತ್ತು ಶಿವಮೊಗ್ಗದ ಯುವಕರನ್ನು ದುರುಗುಟ್ಟಿದ್ದು ಈ ಬಗ್ಗೆ ಯುವಕರು ಉಪ್ಪಿನಂಗಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆದರೆ ಬಸ್ ಉಪ್ಪಿನಂಗಡಿ ತಲುಪುತ್ತಲೇ ಉಸ್ತಾದ್ ಬಸ್ಸಿನಿಂದ ಇಳಿದು ಹೋಗಿದ್ದಾನೆ. ಘಟನೆ ಬಗ್ಗೆ ಪ್ರಕರಣ ದಾಖಲಾಗಿಲ್ಲ. ಆದರೆ ಗೂಸಾ ನೀಡಿದ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ.
Mangalore Puttur Sexual harassment of girl on KSRTC bus Passengers assault accused, video goes viral on social media.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 07:18 pm
HK News Staffer
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am
ಬಾಂಬ್ ಮಾದರಿಯ ವಸ್ತು ಸ್ಫೋಟಿಸಿ ರೀಲ್ಸ್ ಶೂಟಿಂಗ್ ;...
01-05-26 10:30 am