ಬ್ರೇಕಿಂಗ್ ನ್ಯೂಸ್
15-07-24 08:49 pm HK News Desk ಕ್ರೈಂ
ಮೈಸೂರು, ಜುಲೈ 15: ಬಾಡಿಗೆ ಮನೆ ಕೇಳುವ ನೆಪದಲ್ಲಿ ಬಂದು ಮನೆ ಒಡತಿಯನ್ನು ಕಟ್ಟಿ ಹಾಕಿ ಚಿನ್ನಾಭರಣ ದೋಚಿದ ದಂಪತಿಯನ್ನು ಮೈಸೂರಿನ ಹೆಬ್ಬಾಳ ಪೊಲೀಸರು ಬಂಧಿಸಿದ್ದಾರೆ. ಹಾಸನ ನಗರದಲ್ಲಿ ವಾಸವಿರುವ ಚಿತ್ರದುರ್ಗ ಮೂಲದ ವನಿತಾ (24) ಹಾಗೂ ಚೇತನ್ (29) ಬಂಧಿತ ದಂಪತಿ.
ಜುಲೈ 10 ರಂದು ಮೈಸೂರಿನ ಹೆಬ್ಬಾಳದ ಒಂದನೇ ಹಂತದಲ್ಲಿ ವಾಸವಿರುವ ನಿವೃತ್ತ ಶಿಕ್ಷಕಿ ಶಾಂತಮ್ಮ ಅವರ ಖಾಲಿಯಿದ್ದ ಮಹಡಿ ಮನೆ ಬಾಡಿಗೆ ಕೇಳುವ ನೆಪದಲ್ಲಿ ದಂಪತಿ ಬಂದಿದ್ದರು. ಮನೆಯ ಯಜಮಾನಿ, ದಂಪತಿಯನ್ನು ಮನೆಯೊಳಗೆ ಕರೆದು ಬಾಡಿಗೆ ಕುರಿತು ವಿವರಿಸಿದ್ದರು. ನಂತರ ದಂಪತಿ ಖಾಲಿ ಮನೆ ನೋಡಿ, ಅಡ್ವಾನ್ಸ್ ಹಣ ತರಲು ಎಟಿಎಂಗೆ ಹೋಗಿದ್ದರು, ಸ್ವಲ್ಪ ಸಮಯದ ನಂತರ ಬಂದು ಎಂಟಿಎಂ ವರ್ಕ್ ಆಗುತ್ತಿಲ್ಲ ಎಂದಿದ್ದರು. ನಂತರ ಮನೆಯ ಯಜಮಾನಿಗೆ ನಿಮ್ಮಲ್ಲಿ ಫೋನ್ ಪೇ ಅಥವಾ ಗೂಗಲ್ ಪೇ ಇದೆಯಾ ಎಂದು ಕೇಳಿದ್ದರು, ಅದಕ್ಕೆ ಅವರು ಇಲ್ಲ ಎಂದು ಹೇಳಿದ್ದರು. ಬಳಿಕ ದಂಪತಿ, ಮನೆ ಹುಡುಕಿ ತುಂಬಾ ಸುಸ್ತಾಗಿದೆ ಸ್ವಲ್ಪ ಸಮಯ ಇಲ್ಲೇ ವಿಶ್ರಾಂತಿ ಪಡೆಯುತ್ತೇವೆ ಎಂದು ಹೇಳಿ ಮನೆಯಲ್ಲಿ ಉಳಿದುಕೊಂಡಿದ್ದರು. ಬಳಿಕ ಮನೆಯ ಯಜಮಾನಿ ಶಾಂತಮ್ಮ ಮಾರುಕಟ್ಟೆ ಹೋಗಿ ಅರ್ಧ ಗಂಟೆ ನಂತರ ಮನೆಗೆ ವಾಪಸ್ ಆಗಿದ್ದರು. ಮನೆಗೆ ಬಂದ ಶಾಂತಮ್ಮನಿಗೆ ನಾವು ಟ್ರೈನ್ಗೆ ಹೋಗುತ್ತೇವೆ, ಕುಡಿಯಲು ನೀರು ತರುವಂತೆ ಹೇಳಿದ್ದರು. ನೀರು ತರಲು ಹೋದ ಶಾಂತಮ್ಮನ ಹಿಂದೆ ಹೋದ ಚೇತನ್, ಅವರನ್ನು ಹಿಡಿದು ಕಟ್ಟಿ ಹಾಕಿ ಮೈ ಮೇಲೆ ಇದ್ದ 5 ಲಕ್ಷಕ್ಕೂ ಹೆಚ್ಚು ಮೌಲ್ಯದ ಚಿನ್ನಾಭರಣ ದೋಚಿದ್ದರು. ಬಳಿಕ ಮಾಲಕಿಯ ಕಣ್ಣಿಗೆ ಖಾರದ ಪುಡಿ ಎರಚಿ ಪ್ರಜ್ಞೆ ತಪ್ಪಿಸಿ ಪರಾರಿಯಾಗಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿತ್ತು.
ಸ್ವಲ್ಪ ಸಮಯದ ನಂತರ ಎಚ್ಚರಗೊಂಡ ಶಾಂತಮ್ಮ ಕಿರುಚಾಡಿದಾಗ ನೆರೆಹೊರೆಯವರು ಬಂದು ಕಟ್ಟಿದ್ದ ಹಗ್ಗವನ್ನು ಬಿಚ್ಚಿದ್ದರು. ಘಟನೆ ಸಂಬಂಧ ಶಾಂತಮ್ಮನ ಸೊಸೆ ಹೆಬ್ಬಾಳ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಸಂಬಂಧ ವಿಶೇಷ ತಂಡ ರಚನೆ ಮಾಡಿ ಕಾರ್ಯಾಚರಣೆ ನಡೆಸಿದ ಪೊಲೀಸರು, ಖತರ್ನಾಕ್ ದಂಪತಿಯನ್ನು ಮೂರೇ ದಿನದಲ್ಲೇ ಬಂಧಿಸಿ, ಅವರಿಂದ ಚಿನ್ನಾಭರಣ ವಶ ಪಡಿಸಿಕೊಂಡಿದ್ದಾರೆ. ದಂಪತಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ಮಾಹಿತಿ ನೀಡಿದ್ದಾರೆ.
Hassan couple arrested over robbery of gold from house in Mysuru. The arrested have been identified as Vanitha and Chethan. They attacked the house owner and had stolen the gold from her house.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm