ಬ್ರೇಕಿಂಗ್ ನ್ಯೂಸ್
19-07-24 10:47 pm HK News Desk ಕ್ರೈಂ
ಹೈದರಾಬಾದ್, ಜುಲೈ 20: ಮೊಬೈಲ್ ಫೋನ್ನಲ್ಲಿ ಅಶ್ಲೀಲ ವಿಡಿಯೋಗಳನ್ನು ವೀಕ್ಷಿಸಿ ಉದ್ರೇಕಗೊಂಡ ಮೂವರು ಬಾಲಕರು ಎಂಟು ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿರುವ ಸಂಗತಿ ತಡವಾಗಿ ಬೆಳಕಿಗೆ ಬಂದಿದೆ.
ಆಂಧ್ರಪ್ರದೇಶದ ನಂದ್ಯಾಲ್ ಜಿಲ್ಲೆಯಲ್ಲಿ ಜುಲೈ 7ರಂದು ದೇವಸ್ಥಾನವೊಂದರಲ್ಲಿ 12 ವರ್ಷದ ಇಬ್ಬರು ಮತ್ತು 13 ವರ್ಷದ ಒಬ್ಬ ಸೇರಿ ಮೂವರು ಬಾಲಕರು ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ್ದರು. ಬಳಿಕ ಕತ್ತು ಹಿಸುಕಿ ಕೊಲೆ ಮಾಡಿದ್ದರು.
ಅತ್ಯಾಚಾರ ನಡೆಸಿದ ಆರೋಪಿಗಳನ್ನು ಜುಲೈ 10ರಂದು ಬಂಧಿಸಲಾಗಿತ್ತು. ವಿಚಾರಣೆ ವೇಳೆ ಮೂವರೂ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ.
ಆರೋಪಿಗಳಲ್ಲಿ ಇಬ್ಬರು ಆರನೇ ತರಗತಿಯಲ್ಲಿ ಓದುತ್ತಿದ್ದು, ಒಬ್ಬ 7ನೇ ತರಗತಿ ವಿದ್ಯಾರ್ಥಿ. ಅತ್ಯಾಚಾರದ ಬಳಿಕ ಬಾಲಕಿ ಪೋಷಕರಿಗೆ ದೂರು ನೀಡಬಹುದು ಎಂಬ ಭಯದಿಂದ ಮೂವರೂ ಸೇರಿ ಆಕೆಯನ್ನು ಕತ್ತು ಹಿಸುಕಿ ಕೊಂದಿದ್ದಾರೆ. ಆರೋಪಿಯೊಬ್ಬನ ತಂದೆ ಮತ್ತು ಚಿಕ್ಕಪ್ಪ ಸೇರಿ ಬಾಲಕಿಯ ಶವವನ್ನು ಕಾಲುವೆಗೆ ಎಸೆದಿದ್ದರು ಎಂದು ನಂದ್ಯಾಲ್ ಎಸ್ಪಿ ಅಧಿರಾಜ್ ಸಿಂಗ್ ರಾಣಾ ತಿಳಿಸಿದ್ದಾರೆ.
ಆರೋಪಿಗಳಲ್ಲಿ ಒಬ್ಬ ಕೂಡಲೇ ತನ್ನ ಸಂಬಂಧಿಕರಿಗೆ ಕರೆ ಮಾಡಿ ಆಗಿರುವ ಪ್ರಮಾದದ ಬಗ್ಗೆ ತಿಳಿಸಿದ್ದ. ಮಕ್ಕಳ ಮೇಲೆ ಕಾನೂನು ಕ್ರಮ ಜರುಗಿಸಬಹುದೆಂಬ ಭಯದಿಂದ ಆತನ ತಂದೆ ಮತ್ತು ಚಿಕ್ಕಪ್ಪ ಸ್ಥಳಕ್ಕೆ ಧಾವಿಸಿ ಬಾಲಕಿಯ ಶವವನ್ನು ದ್ವಿಚಕ್ರ ವಾಹನದಲ್ಲಿ ಸಾಗಿಸಿ ಕಲ್ಲಿಗೆ ಕಟ್ಟಿ ಕೃಷ್ಣಾ ನದಿಗೆ ಎಸೆದಿದ್ದಾರೆ. ಅಪ್ರಾಪ್ತರು ಮತ್ತು ಅಪರಾಧ ಕೃತ್ಯ ಮುಚ್ಚಿ ಹಾಕಲು ಯತ್ನಿಸಿದ ಸಂಬಂಧಿಕರನ್ನು ಬಂಧಿಸಲಾಗಿದೆ ಎಂದು ರಾಣಾ ತಿಳಿಸಿದ್ದಾರೆ.
ಉದ್ಯಾನವನ ಒಂದರ ಬಳಿ ಆಟವಾಡುತ್ತಿದ್ದ ಬಾಲಕಿಗೆ ಬಾಲಕರ ಪರಿಚಯವಿತ್ತು. ತಮ್ಮೊಂದಿಗೆ ಆಟವಾಡಲು ಆಕೆಯನ್ನು ಮನವೊಲಿಸಿ ಕರೆದೊಯ್ದಿದ್ದರು. ಆನಂತರ ಅವರು ಆಕೆಯ ಬಾಯಿಯನ್ನು ಬಿಗಿದಿಟ್ಟು ಅತ್ಯಾಚಾರ ಎಸಗಿದ್ದರು. ಆದರೆ ಶ್ವಾನ ಕೊಟ್ಟ ಸುಳಿವು ಬೆನ್ನತ್ತಿದ ಪೊಲೀಸರು ಆರೋಪಿಗಳನ್ನು ಮೂರೇ ದಿನದಲ್ಲಿ ಬಂಧಿಸಿದ್ದರು.
ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ಅಪ್ರಾಪ್ತ ಬಾಲಕಿಯ ಕುಟುಂಬಕ್ಕೆ 10 ಲಕ್ಷ ರೂಪಾಯಿ ಆರ್ಥಿಕ ನೆರವು ಮಂಜೂರು ಮಾಡಿದ್ದಾರೆ.
Three jailed school-going boys, who allegedly raped and murdered an eight-year-old girl in Andhra Pradesh earlier this month, had watched porn videos on their phones before committing the crime.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm