ಬ್ರೇಕಿಂಗ್ ನ್ಯೂಸ್
23-07-24 12:30 pm Mangalore Correspondent ಕ್ರೈಂ
ಮಂಗಳೂರು, ಜುಲೈ 23: ಗುಜರಾತ್ ಮೂಲದ ಅಡಿಕೆ ವ್ಯಾಪಾರಿ ಕಂಪನಿಗಳ ಶೇಟುಗಳು ಮಂಗಳೂರಿನ ಅಡಿಕೆ ವ್ಯಾಪಾರಿಗಳಿಗೆ ಕೋಟ್ಯಾಂತರ ರೂಪಾಯಿ ಹಣ ವಂಚನೆ ಮಾಡಿರುವ ಬಗ್ಗೆ ಮಂಗಳೂರಿನ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪರ್ಲೀನ್ ಟ್ರೇಂಡಿಂಗ್ ಕಂಪೆನಿ, ವಿಮಲ್ ಬ್ರದರ್ಸ್ ಹಾಗೂ ಕಮಲೇಶ್ ಪಡಾಲಿಯಾ ಎಂಬ ಕಂಪೆನಿಗಳ ವಿರುದ್ದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪರ್ಲೀನ್ ಟ್ರೇಡಿಂಗ್ ಕಂಪನಿಯು ಇಲ್ಲಿನ ವರ್ತಕರಿಗೆ ಒಟ್ಟು ರು. 1.34 ಕೋಟಿ ಹಾಗೂ ವಿಮಲ್ ಬ್ರದರ್ಸ್ ಕಂಪನಿಯು ರು. 1.21 ಕೋಟಿ ವಂಚನೆ ನಡೆಸಿದ ಬಗ್ಗೆ ದೂರು ದಾಖಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಮತ್ತೊಂದು ವಿಮಲ್ ಬ್ರದರ್ಸ್ ಕಂಪನಿಯ ಮಾಲೀಕರಾದ ಕಮಲೇಶ್ ಪಡಾಲಿಯಾ ಮತ್ತು ಆತನ ಪತ್ನಿ ರೋಹಿಣಿ ಸೇರಿ ರು. 59.62 ಲಕ್ಷ ವಂಚಿಸಿದ್ದಾರೆ. ಆರೋಪಿಗಳು ತಮ್ಮ ಕಂಪನಿಯನ್ನು ಮುಚ್ಚಿ ಅದರಲ್ಲಿದ್ದ 115 ಚೀಲ ಅಡಿಕೆಯನ್ನು ಸಂಬಂಧಿಕರ ಗೋದಾಮಿಗೆ ಸ್ಥಳಾಂತರಿಸಿದ್ದಾರೆ. ಕರೆ ಮಾಡಿದರೆ ಫೋನ್ ಸ್ವಿಚ್ ಆಫ್ ಎಂದು ಪ್ರತಿಕ್ರಿಯೆ ಬರುತ್ತಿದೆ’ ಎಂದು ಹಬೀಬ್ ರಹಿಮಾನ್ ಕೆ. ಅವರು ದೂರು ನೀಡಿದ್ದಾರೆ.
ವಿಮಲ್ ಬ್ರದರ್ಸ್ ಕಂಪನಿಯು ಒಟ್ಟು ರು. 25.25 ಲಕ್ಷ ವಂಚಿಸಿದೆ ಎಂದು ಎಸ್.ಆರ್.ಟ್ರೇಡಿಂಗ್ ಕಂಪನಿಯ ಪಾಲುದಾರ ಶ್ರೀಪತಿ ಭಟ್ ಮತ್ತು ಕೆ.ಎಸ್.ನಾರಾಯಣ ಭಟ್ ದೂರಿನಲ್ಲಿ ತಿಳಿಸಿದ್ದಾರೆ. ತನಗೆ ರು. 36.39 ಲಕ್ಷ ವಂಚನೆಯಾಗಿದೆ ಎಂದು ಎ.ಎ.ಸುಪಾರಿ ಟ್ರೇಡಿಂಗ್ ಕಂಪನಿಯ ಮಾಲೀಕ ಅಬ್ದುಲ್ ರಹಿಮಾನ್ ದೂರು ನೀಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಅಡಿಕೆ ಖರೀಸಿದ್ದ ಗುಜರಾತಿನ ವರ್ತಕ ಕಮಲೇಶ್ ಪಡಾಲಿಯಾ 8.99 ಲಕ್ಷ ರೂ. ಹಣವನ್ನು ನೀಡದೇ ವಂಚಿಸಿದ ಬಗ್ಗೆ ಬೀಬಿ ಅಲಾಬಿ ರಸ್ತೆಯ ಒಣ ಅಡಿಕೆ ವ್ಯಾಪಾರಿ ಯೂಸುಫ್ ದೂರು ನೀಡಿದ್ದಾರೆ.
Mangalore Arecanut business owners cheated in crores by Gujrathi owners, case filed at cyber crime police station. Case has been booked against Parvin trading company, vimal brothers and Kamlesh Padaliya for cheating
14-03-26 10:14 pm
HK News Staffer
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
15-03-26 01:08 pm
HK News Desk
ಗಲ್ಫ್ ಯುದ್ಧ ನಡುವಲ್ಲೇ ಮಿಸೈಲ್ ಉಡಾಯಿಸಿದ ಉತ್ತರ ಕೊ...
14-03-26 10:31 pm
ವಿಮಾನ ಪ್ರಯಾಣಿಕರಿಗೂ ತಟ್ಟಿದ ಇರಾನ್–ಇಸ್ರೇಲ್ ಯುದ್ಧ...
14-03-26 07:38 pm
ಇರಾನ್ ಸರ್ವೋಚ್ಛ ನಾಯಕ ಮೊಜ್ತಾಬಾ ಅಲಿ ಖಮೇನಿ ಬಗ್ಗೆ...
14-03-26 12:51 pm
ಅಮೆರಿಕಾ ವೈಮಾನಿಕ ದಾಳಿಯಲ್ಲಿ ಮೊಜ್ತಬಾ ಖಮೇನಿಗೂ ಪೆಟ...
13-03-26 04:18 pm
14-03-26 09:26 pm
HK News Desk
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
‘ಕ್ರಿಶ್ಚಿಯನ್ ಯುವಕ’ನಿಂದ ದೈವ ನರ್ತನ ಸೇವೆ ; ಪಂಬದ...
14-03-26 05:19 pm
ಮಾರ್ಚ್ 16ರಿಂದ 28ರ ವರೆಗೆ ಮಂಗಳೂರಿನಿಂದ ಶಾರ್ಜಾಕ್ಕ...
13-03-26 10:04 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am