ಬ್ರೇಕಿಂಗ್ ನ್ಯೂಸ್
23-07-24 12:30 pm Mangalore Correspondent ಕ್ರೈಂ
ಮಂಗಳೂರು, ಜುಲೈ 23: ಗುಜರಾತ್ ಮೂಲದ ಅಡಿಕೆ ವ್ಯಾಪಾರಿ ಕಂಪನಿಗಳ ಶೇಟುಗಳು ಮಂಗಳೂರಿನ ಅಡಿಕೆ ವ್ಯಾಪಾರಿಗಳಿಗೆ ಕೋಟ್ಯಾಂತರ ರೂಪಾಯಿ ಹಣ ವಂಚನೆ ಮಾಡಿರುವ ಬಗ್ಗೆ ಮಂಗಳೂರಿನ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪರ್ಲೀನ್ ಟ್ರೇಂಡಿಂಗ್ ಕಂಪೆನಿ, ವಿಮಲ್ ಬ್ರದರ್ಸ್ ಹಾಗೂ ಕಮಲೇಶ್ ಪಡಾಲಿಯಾ ಎಂಬ ಕಂಪೆನಿಗಳ ವಿರುದ್ದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪರ್ಲೀನ್ ಟ್ರೇಡಿಂಗ್ ಕಂಪನಿಯು ಇಲ್ಲಿನ ವರ್ತಕರಿಗೆ ಒಟ್ಟು ರು. 1.34 ಕೋಟಿ ಹಾಗೂ ವಿಮಲ್ ಬ್ರದರ್ಸ್ ಕಂಪನಿಯು ರು. 1.21 ಕೋಟಿ ವಂಚನೆ ನಡೆಸಿದ ಬಗ್ಗೆ ದೂರು ದಾಖಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಮತ್ತೊಂದು ವಿಮಲ್ ಬ್ರದರ್ಸ್ ಕಂಪನಿಯ ಮಾಲೀಕರಾದ ಕಮಲೇಶ್ ಪಡಾಲಿಯಾ ಮತ್ತು ಆತನ ಪತ್ನಿ ರೋಹಿಣಿ ಸೇರಿ ರು. 59.62 ಲಕ್ಷ ವಂಚಿಸಿದ್ದಾರೆ. ಆರೋಪಿಗಳು ತಮ್ಮ ಕಂಪನಿಯನ್ನು ಮುಚ್ಚಿ ಅದರಲ್ಲಿದ್ದ 115 ಚೀಲ ಅಡಿಕೆಯನ್ನು ಸಂಬಂಧಿಕರ ಗೋದಾಮಿಗೆ ಸ್ಥಳಾಂತರಿಸಿದ್ದಾರೆ. ಕರೆ ಮಾಡಿದರೆ ಫೋನ್ ಸ್ವಿಚ್ ಆಫ್ ಎಂದು ಪ್ರತಿಕ್ರಿಯೆ ಬರುತ್ತಿದೆ’ ಎಂದು ಹಬೀಬ್ ರಹಿಮಾನ್ ಕೆ. ಅವರು ದೂರು ನೀಡಿದ್ದಾರೆ.
ವಿಮಲ್ ಬ್ರದರ್ಸ್ ಕಂಪನಿಯು ಒಟ್ಟು ರು. 25.25 ಲಕ್ಷ ವಂಚಿಸಿದೆ ಎಂದು ಎಸ್.ಆರ್.ಟ್ರೇಡಿಂಗ್ ಕಂಪನಿಯ ಪಾಲುದಾರ ಶ್ರೀಪತಿ ಭಟ್ ಮತ್ತು ಕೆ.ಎಸ್.ನಾರಾಯಣ ಭಟ್ ದೂರಿನಲ್ಲಿ ತಿಳಿಸಿದ್ದಾರೆ. ತನಗೆ ರು. 36.39 ಲಕ್ಷ ವಂಚನೆಯಾಗಿದೆ ಎಂದು ಎ.ಎ.ಸುಪಾರಿ ಟ್ರೇಡಿಂಗ್ ಕಂಪನಿಯ ಮಾಲೀಕ ಅಬ್ದುಲ್ ರಹಿಮಾನ್ ದೂರು ನೀಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಅಡಿಕೆ ಖರೀಸಿದ್ದ ಗುಜರಾತಿನ ವರ್ತಕ ಕಮಲೇಶ್ ಪಡಾಲಿಯಾ 8.99 ಲಕ್ಷ ರೂ. ಹಣವನ್ನು ನೀಡದೇ ವಂಚಿಸಿದ ಬಗ್ಗೆ ಬೀಬಿ ಅಲಾಬಿ ರಸ್ತೆಯ ಒಣ ಅಡಿಕೆ ವ್ಯಾಪಾರಿ ಯೂಸುಫ್ ದೂರು ನೀಡಿದ್ದಾರೆ.
Mangalore Arecanut business owners cheated in crores by Gujrathi owners, case filed at cyber crime police station. Case has been booked against Parvin trading company, vimal brothers and Kamlesh Padaliya for cheating
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm