ಬ್ರೇಕಿಂಗ್ ನ್ಯೂಸ್
23-07-24 12:30 pm Mangalore Correspondent ಕ್ರೈಂ
ಮಂಗಳೂರು, ಜುಲೈ 23: ಗುಜರಾತ್ ಮೂಲದ ಅಡಿಕೆ ವ್ಯಾಪಾರಿ ಕಂಪನಿಗಳ ಶೇಟುಗಳು ಮಂಗಳೂರಿನ ಅಡಿಕೆ ವ್ಯಾಪಾರಿಗಳಿಗೆ ಕೋಟ್ಯಾಂತರ ರೂಪಾಯಿ ಹಣ ವಂಚನೆ ಮಾಡಿರುವ ಬಗ್ಗೆ ಮಂಗಳೂರಿನ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪರ್ಲೀನ್ ಟ್ರೇಂಡಿಂಗ್ ಕಂಪೆನಿ, ವಿಮಲ್ ಬ್ರದರ್ಸ್ ಹಾಗೂ ಕಮಲೇಶ್ ಪಡಾಲಿಯಾ ಎಂಬ ಕಂಪೆನಿಗಳ ವಿರುದ್ದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪರ್ಲೀನ್ ಟ್ರೇಡಿಂಗ್ ಕಂಪನಿಯು ಇಲ್ಲಿನ ವರ್ತಕರಿಗೆ ಒಟ್ಟು ರು. 1.34 ಕೋಟಿ ಹಾಗೂ ವಿಮಲ್ ಬ್ರದರ್ಸ್ ಕಂಪನಿಯು ರು. 1.21 ಕೋಟಿ ವಂಚನೆ ನಡೆಸಿದ ಬಗ್ಗೆ ದೂರು ದಾಖಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಮತ್ತೊಂದು ವಿಮಲ್ ಬ್ರದರ್ಸ್ ಕಂಪನಿಯ ಮಾಲೀಕರಾದ ಕಮಲೇಶ್ ಪಡಾಲಿಯಾ ಮತ್ತು ಆತನ ಪತ್ನಿ ರೋಹಿಣಿ ಸೇರಿ ರು. 59.62 ಲಕ್ಷ ವಂಚಿಸಿದ್ದಾರೆ. ಆರೋಪಿಗಳು ತಮ್ಮ ಕಂಪನಿಯನ್ನು ಮುಚ್ಚಿ ಅದರಲ್ಲಿದ್ದ 115 ಚೀಲ ಅಡಿಕೆಯನ್ನು ಸಂಬಂಧಿಕರ ಗೋದಾಮಿಗೆ ಸ್ಥಳಾಂತರಿಸಿದ್ದಾರೆ. ಕರೆ ಮಾಡಿದರೆ ಫೋನ್ ಸ್ವಿಚ್ ಆಫ್ ಎಂದು ಪ್ರತಿಕ್ರಿಯೆ ಬರುತ್ತಿದೆ’ ಎಂದು ಹಬೀಬ್ ರಹಿಮಾನ್ ಕೆ. ಅವರು ದೂರು ನೀಡಿದ್ದಾರೆ.
ವಿಮಲ್ ಬ್ರದರ್ಸ್ ಕಂಪನಿಯು ಒಟ್ಟು ರು. 25.25 ಲಕ್ಷ ವಂಚಿಸಿದೆ ಎಂದು ಎಸ್.ಆರ್.ಟ್ರೇಡಿಂಗ್ ಕಂಪನಿಯ ಪಾಲುದಾರ ಶ್ರೀಪತಿ ಭಟ್ ಮತ್ತು ಕೆ.ಎಸ್.ನಾರಾಯಣ ಭಟ್ ದೂರಿನಲ್ಲಿ ತಿಳಿಸಿದ್ದಾರೆ. ತನಗೆ ರು. 36.39 ಲಕ್ಷ ವಂಚನೆಯಾಗಿದೆ ಎಂದು ಎ.ಎ.ಸುಪಾರಿ ಟ್ರೇಡಿಂಗ್ ಕಂಪನಿಯ ಮಾಲೀಕ ಅಬ್ದುಲ್ ರಹಿಮಾನ್ ದೂರು ನೀಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಅಡಿಕೆ ಖರೀಸಿದ್ದ ಗುಜರಾತಿನ ವರ್ತಕ ಕಮಲೇಶ್ ಪಡಾಲಿಯಾ 8.99 ಲಕ್ಷ ರೂ. ಹಣವನ್ನು ನೀಡದೇ ವಂಚಿಸಿದ ಬಗ್ಗೆ ಬೀಬಿ ಅಲಾಬಿ ರಸ್ತೆಯ ಒಣ ಅಡಿಕೆ ವ್ಯಾಪಾರಿ ಯೂಸುಫ್ ದೂರು ನೀಡಿದ್ದಾರೆ.
Mangalore Arecanut business owners cheated in crores by Gujrathi owners, case filed at cyber crime police station. Case has been booked against Parvin trading company, vimal brothers and Kamlesh Padaliya for cheating
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm