ಬ್ರೇಕಿಂಗ್ ನ್ಯೂಸ್
23-07-24 12:30 pm Mangalore Correspondent ಕ್ರೈಂ
ಮಂಗಳೂರು, ಜುಲೈ 23: ಗುಜರಾತ್ ಮೂಲದ ಅಡಿಕೆ ವ್ಯಾಪಾರಿ ಕಂಪನಿಗಳ ಶೇಟುಗಳು ಮಂಗಳೂರಿನ ಅಡಿಕೆ ವ್ಯಾಪಾರಿಗಳಿಗೆ ಕೋಟ್ಯಾಂತರ ರೂಪಾಯಿ ಹಣ ವಂಚನೆ ಮಾಡಿರುವ ಬಗ್ಗೆ ಮಂಗಳೂರಿನ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪರ್ಲೀನ್ ಟ್ರೇಂಡಿಂಗ್ ಕಂಪೆನಿ, ವಿಮಲ್ ಬ್ರದರ್ಸ್ ಹಾಗೂ ಕಮಲೇಶ್ ಪಡಾಲಿಯಾ ಎಂಬ ಕಂಪೆನಿಗಳ ವಿರುದ್ದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪರ್ಲೀನ್ ಟ್ರೇಡಿಂಗ್ ಕಂಪನಿಯು ಇಲ್ಲಿನ ವರ್ತಕರಿಗೆ ಒಟ್ಟು ರು. 1.34 ಕೋಟಿ ಹಾಗೂ ವಿಮಲ್ ಬ್ರದರ್ಸ್ ಕಂಪನಿಯು ರು. 1.21 ಕೋಟಿ ವಂಚನೆ ನಡೆಸಿದ ಬಗ್ಗೆ ದೂರು ದಾಖಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಮತ್ತೊಂದು ವಿಮಲ್ ಬ್ರದರ್ಸ್ ಕಂಪನಿಯ ಮಾಲೀಕರಾದ ಕಮಲೇಶ್ ಪಡಾಲಿಯಾ ಮತ್ತು ಆತನ ಪತ್ನಿ ರೋಹಿಣಿ ಸೇರಿ ರು. 59.62 ಲಕ್ಷ ವಂಚಿಸಿದ್ದಾರೆ. ಆರೋಪಿಗಳು ತಮ್ಮ ಕಂಪನಿಯನ್ನು ಮುಚ್ಚಿ ಅದರಲ್ಲಿದ್ದ 115 ಚೀಲ ಅಡಿಕೆಯನ್ನು ಸಂಬಂಧಿಕರ ಗೋದಾಮಿಗೆ ಸ್ಥಳಾಂತರಿಸಿದ್ದಾರೆ. ಕರೆ ಮಾಡಿದರೆ ಫೋನ್ ಸ್ವಿಚ್ ಆಫ್ ಎಂದು ಪ್ರತಿಕ್ರಿಯೆ ಬರುತ್ತಿದೆ’ ಎಂದು ಹಬೀಬ್ ರಹಿಮಾನ್ ಕೆ. ಅವರು ದೂರು ನೀಡಿದ್ದಾರೆ.
ವಿಮಲ್ ಬ್ರದರ್ಸ್ ಕಂಪನಿಯು ಒಟ್ಟು ರು. 25.25 ಲಕ್ಷ ವಂಚಿಸಿದೆ ಎಂದು ಎಸ್.ಆರ್.ಟ್ರೇಡಿಂಗ್ ಕಂಪನಿಯ ಪಾಲುದಾರ ಶ್ರೀಪತಿ ಭಟ್ ಮತ್ತು ಕೆ.ಎಸ್.ನಾರಾಯಣ ಭಟ್ ದೂರಿನಲ್ಲಿ ತಿಳಿಸಿದ್ದಾರೆ. ತನಗೆ ರು. 36.39 ಲಕ್ಷ ವಂಚನೆಯಾಗಿದೆ ಎಂದು ಎ.ಎ.ಸುಪಾರಿ ಟ್ರೇಡಿಂಗ್ ಕಂಪನಿಯ ಮಾಲೀಕ ಅಬ್ದುಲ್ ರಹಿಮಾನ್ ದೂರು ನೀಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಅಡಿಕೆ ಖರೀಸಿದ್ದ ಗುಜರಾತಿನ ವರ್ತಕ ಕಮಲೇಶ್ ಪಡಾಲಿಯಾ 8.99 ಲಕ್ಷ ರೂ. ಹಣವನ್ನು ನೀಡದೇ ವಂಚಿಸಿದ ಬಗ್ಗೆ ಬೀಬಿ ಅಲಾಬಿ ರಸ್ತೆಯ ಒಣ ಅಡಿಕೆ ವ್ಯಾಪಾರಿ ಯೂಸುಫ್ ದೂರು ನೀಡಿದ್ದಾರೆ.
Mangalore Arecanut business owners cheated in crores by Gujrathi owners, case filed at cyber crime police station. Case has been booked against Parvin trading company, vimal brothers and Kamlesh Padaliya for cheating
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
11-02-26 06:47 pm
HK News Desk
ಹಗಲಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್, ರಾತ್ರಿ ವೇಳೆ...
11-02-26 04:22 pm
ಮಥುರಾದಲ್ಲಿ ಮೂವರು ಮಕ್ಕಳಿಗೆ ವಿಷವುಣಿಸಿ ದಂಪತಿ ಸಾವ...
10-02-26 07:31 pm
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
11-02-26 06:00 pm
Mangalore Correspondent
ಎಡಪದವು ಬಳಿ ಹೊಸ ಹೆದ್ದಾರಿಗೆ ಅಗೆತ - ಹಳೆ ರಸ್ತೆ ಕು...
11-02-26 03:45 pm
Love Jihad, Mangalore: ಬಿಎಸ್ಸಿ ಕ್ರಿಮಿನಾಲಜಿ ಓದ...
10-02-26 11:03 pm
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
11-02-26 10:54 pm
Udupi Correspondent
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am