ಬ್ರೇಕಿಂಗ್ ನ್ಯೂಸ್
23-07-24 12:30 pm Mangalore Correspondent ಕ್ರೈಂ
ಮಂಗಳೂರು, ಜುಲೈ 23: ಗುಜರಾತ್ ಮೂಲದ ಅಡಿಕೆ ವ್ಯಾಪಾರಿ ಕಂಪನಿಗಳ ಶೇಟುಗಳು ಮಂಗಳೂರಿನ ಅಡಿಕೆ ವ್ಯಾಪಾರಿಗಳಿಗೆ ಕೋಟ್ಯಾಂತರ ರೂಪಾಯಿ ಹಣ ವಂಚನೆ ಮಾಡಿರುವ ಬಗ್ಗೆ ಮಂಗಳೂರಿನ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪರ್ಲೀನ್ ಟ್ರೇಂಡಿಂಗ್ ಕಂಪೆನಿ, ವಿಮಲ್ ಬ್ರದರ್ಸ್ ಹಾಗೂ ಕಮಲೇಶ್ ಪಡಾಲಿಯಾ ಎಂಬ ಕಂಪೆನಿಗಳ ವಿರುದ್ದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪರ್ಲೀನ್ ಟ್ರೇಡಿಂಗ್ ಕಂಪನಿಯು ಇಲ್ಲಿನ ವರ್ತಕರಿಗೆ ಒಟ್ಟು ರು. 1.34 ಕೋಟಿ ಹಾಗೂ ವಿಮಲ್ ಬ್ರದರ್ಸ್ ಕಂಪನಿಯು ರು. 1.21 ಕೋಟಿ ವಂಚನೆ ನಡೆಸಿದ ಬಗ್ಗೆ ದೂರು ದಾಖಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಮತ್ತೊಂದು ವಿಮಲ್ ಬ್ರದರ್ಸ್ ಕಂಪನಿಯ ಮಾಲೀಕರಾದ ಕಮಲೇಶ್ ಪಡಾಲಿಯಾ ಮತ್ತು ಆತನ ಪತ್ನಿ ರೋಹಿಣಿ ಸೇರಿ ರು. 59.62 ಲಕ್ಷ ವಂಚಿಸಿದ್ದಾರೆ. ಆರೋಪಿಗಳು ತಮ್ಮ ಕಂಪನಿಯನ್ನು ಮುಚ್ಚಿ ಅದರಲ್ಲಿದ್ದ 115 ಚೀಲ ಅಡಿಕೆಯನ್ನು ಸಂಬಂಧಿಕರ ಗೋದಾಮಿಗೆ ಸ್ಥಳಾಂತರಿಸಿದ್ದಾರೆ. ಕರೆ ಮಾಡಿದರೆ ಫೋನ್ ಸ್ವಿಚ್ ಆಫ್ ಎಂದು ಪ್ರತಿಕ್ರಿಯೆ ಬರುತ್ತಿದೆ’ ಎಂದು ಹಬೀಬ್ ರಹಿಮಾನ್ ಕೆ. ಅವರು ದೂರು ನೀಡಿದ್ದಾರೆ.
ವಿಮಲ್ ಬ್ರದರ್ಸ್ ಕಂಪನಿಯು ಒಟ್ಟು ರು. 25.25 ಲಕ್ಷ ವಂಚಿಸಿದೆ ಎಂದು ಎಸ್.ಆರ್.ಟ್ರೇಡಿಂಗ್ ಕಂಪನಿಯ ಪಾಲುದಾರ ಶ್ರೀಪತಿ ಭಟ್ ಮತ್ತು ಕೆ.ಎಸ್.ನಾರಾಯಣ ಭಟ್ ದೂರಿನಲ್ಲಿ ತಿಳಿಸಿದ್ದಾರೆ. ತನಗೆ ರು. 36.39 ಲಕ್ಷ ವಂಚನೆಯಾಗಿದೆ ಎಂದು ಎ.ಎ.ಸುಪಾರಿ ಟ್ರೇಡಿಂಗ್ ಕಂಪನಿಯ ಮಾಲೀಕ ಅಬ್ದುಲ್ ರಹಿಮಾನ್ ದೂರು ನೀಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಅಡಿಕೆ ಖರೀಸಿದ್ದ ಗುಜರಾತಿನ ವರ್ತಕ ಕಮಲೇಶ್ ಪಡಾಲಿಯಾ 8.99 ಲಕ್ಷ ರೂ. ಹಣವನ್ನು ನೀಡದೇ ವಂಚಿಸಿದ ಬಗ್ಗೆ ಬೀಬಿ ಅಲಾಬಿ ರಸ್ತೆಯ ಒಣ ಅಡಿಕೆ ವ್ಯಾಪಾರಿ ಯೂಸುಫ್ ದೂರು ನೀಡಿದ್ದಾರೆ.
Mangalore Arecanut business owners cheated in crores by Gujrathi owners, case filed at cyber crime police station. Case has been booked against Parvin trading company, vimal brothers and Kamlesh Padaliya for cheating
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm