ಬ್ರೇಕಿಂಗ್ ನ್ಯೂಸ್
23-07-24 03:03 pm HK News Desk ಕ್ರೈಂ
ರಾಮನಗರ, ಜುಲೈ.23: ರಾಮನಗರದಲ್ಲಿ ಪೈಶಾಚಿಕ ಕೃತ್ಯವೊಂದು ನಡೆದಿದೆ. ಐಸ್ಕ್ರೀಮ್ ಕೊಡಿಸುವ ನೆಪದಲ್ಲಿ 4 ವರ್ಷದ ಬಾಲಕಿಯನ್ನು ಕರೆದೊಯ್ದು ಕಾಮುಕನೊಬ್ಬ ಅತ್ಯಾಚಾರವೇಸಗಿ ಬಳಿಕ ಕೊಂದು ಹಾಕಿದ್ದಾನೆ.
ಮೂರು ದಿನದ ಹಿಂದೆ ಕಾಣೆಯಾಗಿದ್ದ 4 ವರ್ಷದ ಹೆಣ್ಣು ಮಗುವನ್ನು ಅವರ ಸಂಬಂಧಿಯೇ ಅಪಹರಿಸಿ ಅತ್ಯಾಚಾರ ಎಸಗಿ, ಕೊಲೆ ಮಾಡಿರುವ ಘಟನೆ ಮಾಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಗುವಿನ ಶವವು ತಿಪ್ಪಗೊಂಡನಹಳ್ಳಿ ಬಳಿ ಸೋಮವಾರ ರಾತ್ರಿ ಪತ್ತೆಯಾಗಿದೆ.
ಘಟನೆಗೆ ಸಂಬಂಧಿಸಿದಂತೆ, ಆರೋಪಿ ಬೆಂಗಳೂರಿನ ಗೌರಿಪಾಳ್ಯದ ಇಮ್ರಾನ್ ಖಾನ್ ವಿರುದ್ಧ ಮಾಗಡಿ ಠಾಣೆ ಪೊಲೀಸರು ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಬಂಧಿಸಿದ್ದಾರೆ.
ಮಗು ಕುಟುಂಬದ ಸಂಬಂಧಿಯಾದ ಆರೋಪಿ ಆಗಾಗ ಮನೆಗೆ ಬಂದು ಹೋಗುತ್ತಿದ್ದ. ಅದೇ ರೀತಿ ಜುಲೈ 20ಕ್ಕೆ ಬಂದಿದ್ದ ಆತ, ಕೊಲೆಯಾಗಿರುವ ಹೆಣ್ಣು ಮಗುವಿನ ಜೊತೆಗೆ ಮತ್ತೊಂದು ಮಗುವನ್ನು ಸಂಜೆ ಅಂಗಡಿಗೆ ಕರೆದೊಯ್ದು ಐಸ್ಕ್ರೀಂ ಕೊಡಿಸಿಕೊಂಡು ಬಂದಿದ್ದ. ನಂತರ, ಮತ್ತೆ ಹೆಣ್ಣು ಮಗುವನ್ನು ತನ್ನೊಂದಿಗೆ ಕರೆದೊಯ್ದಿದ್ದ ಎಂದು ಪೊಲೀಸರು ತಿಳಿಸಿದರು.
ಸಂಜೆ 7 ಗಂಟೆಯಾದರೂ ಮಗು ಮನೆಗೆ ಬಾರದಿದ್ದರಿಂದ ಗಾಬರಿಗೊಂಡ, ತಾಯಿ ಅಕ್ಕಪಕ್ಕ ಹುಡುಕಾಡಿದರು. ಕಡೆಗೆ, ಅಂಗಡಿಗೆ ಮಗು ಕರೆದೊಯ್ದಿದ್ದ ಆರೋಪಿಗೆ ಕರೆ ಮಾಡಿದಾಗ ಆತ, ‘ನನಗೇನೂ ಗೊತ್ತಿಲ್ಲ’ ಎಂದು ಕರೆ ಸ್ಥಗಿತಗೊಳಿಸಿ, ಮೊಬೈಲ್ ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದ. ಅನುಮಾನಗೊಂಡ ತಾಯಿ ಠಾಣೆಗೆ ದೂರು ಕೊಟ್ಟಿದ್ದರು. ಪ್ರಕರಣ ದಾಖಲಿಸಿಕೊಂಡು ಮಗು ಹಾಗೂ ಆರೋಪಿಗಾಗಿ ಹುಡುಕಾಟ ನಡೆಸಿದ್ದೆವು ಎಂದು ಹೇಳಿದರು.
ಸಿಸಿಟಿವಿ ಕ್ಯಾಮೆರಾ ಪರಿಶೀಲನೆ ಸೇರಿದಂತೆ, ವಿವಿಧ ಮೂಲಗಳನ್ನು ಆಧರಿಸಿ ಶೋಧ ಕಾರ್ಯ ನಡೆಸಿದಾಗ, ಆರೋಪಿ ತಿಪ್ಪಗೊಂಡನಹಳ್ಳಿ ಬಳಿಯ ರಸ್ತೆಯಲ್ಲಿ ಓಡಾಡಿರುವುದು ಗೊತ್ತಾಯಿತು. ಸುತ್ತಮುತ್ತ ಹುಡುಕಾಡಿದಾಗ ರಸ್ತೆ ಬದಿಯ ಬಂಡೆಯ ಬಳಿ ಬೆತ್ತಲೆ ಸ್ಥಿತಿಯಲ್ಲಿ ಮಗುವಿನ ಶವ ಪತ್ತೆಯಾಯಿತು. ನಂತರ ಬೆಂಗಳೂರಿನ ಕಲಾಸಿಪಾಳ್ಯದಲ್ಲಿ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಸಹ ಬಂಧಿಸಲಾಯಿತು. ರಾಜರಾಜೇಶ್ವರಿ ಆಸ್ಪತ್ರೆಯಲ್ಲಿ ಮಗುವಿನ ಮರಣೋತ್ತರ ಪರೀಕ್ಷೆ ನಡೆಸಿ, ಕುಟುಂಬದವರಿಗೆ ಶವ ಹಸ್ತಾಂತರಿಸಲಾಯಿತು ಎಂದು ತಿಳಿಸಿದರು.
ತಹಸೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ;
ಆರೋಪಿ ಇಮ್ರಾನ್ ಖಾನ್ನನ್ನು ಎನ್ಕೌಂಟರ್ ಮಾಡುವಂತೆ ಕುಟುಂಬಸ್ಥರು ಸೇರಿ ಸಾರ್ವಜನಿಕರು ಪ್ರತಿಭಟಿಸಿದರು. ಮಾಗಡಿ ತಹಸೀಲ್ದಾರ್ ಕಚೇರಿ ಮುಂಭಾಗ ಜಮಾಯಿಸಿದ ಸಾವಿರಾರು ಜನರು ಪ್ರತಿಭಟಿಸಿದರು. ಮಾಗಡಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪೋಕ್ಸೋ ಅಡಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ.
Ramnagara rape and murder of 4 year old girl, accused arrested. Public protest to encounter the accused or handover him to them. The 4 year old girl was told of buying icecream and later raped.
29-10-24 02:43 pm
HK News Desk
Yediyurappa, Vijayendra, Ramesh Jarkiholi: ವಿ...
28-10-24 07:40 pm
Tumkur selfie, Hamsa: ಸೆಲ್ಫಿ ಕ್ಲಿಕ್ಕಿಸುವಾಗ ಕೆ...
28-10-24 05:46 pm
ದಲಿತ - ಮೇಲ್ವರ್ಗದ ಜಾತಿ ಸಂಘರ್ಷ ; ಹತ್ತು ವರ್ಷಗಳ ಬ...
26-10-24 10:32 pm
Belekeri Scam, MLA Satish Sail Jail: ಬೇಲೆಕೇರಿ...
26-10-24 05:54 pm
29-10-24 12:01 pm
HK News Desk
ಕೇರಳದ ಯೂಟ್ಯೂಬರ್ ದಂಪತಿ ಸಾವಿಗೆ ಶರಣು ; ಕೊನೆಯ ವಿ...
28-10-24 08:38 pm
ಇಸ್ರೇಲಿಗೆ ನಮ್ಮ ಸಾಮರ್ಥ್ಯ ತೋರಿಸುತ್ತೇವೆ ಎಂದು ಪೋಸ...
28-10-24 05:56 pm
Cyber fraud, Digital arrest, Modi: "ಡಿಜಿಟಲ್ ಅ...
28-10-24 11:47 am
ನಕಲಿ ಕೋರ್ಟ್ ಸ್ಥಾಪಿಸಿ ಭೂ ವಿವಾದಗಳ ಬಗ್ಗೆ ತೀರ್ಪು...
25-10-24 10:51 pm
28-10-24 10:51 pm
Giridhar Shetty, Headline Karnataka, Mangalore
Leopard, pilar, Deralakatte; ದೇರಳಕಟ್ಟೆ ಪ್ರದೇಶ...
28-10-24 03:53 pm
MLA Harish Poonja, B K Harishprasad: ಪುಡಿ ರಾಜ...
28-10-24 01:00 pm
Pejawar Seer, Caste Census: ಪ್ರಜಾಪ್ರಭುತ್ವದಲ್ಲ...
27-10-24 10:37 pm
Ashok Rai Puttur, Mangalore; ನಾನೊಬ್ಬ ಹಿಂದು, ದ...
27-10-24 02:41 pm
29-10-24 01:01 pm
Mangalore Correspondent
Mangalore Murder, Crime, Kateel: ಕಟೀಲು ಬಳಿ ಮನ...
29-10-24 12:38 pm
Mangalore Crime, Drugs: ಪಣಂಬೂರಿನಲ್ಲಿ ಡ್ರಗ್ಸ್...
28-10-24 11:12 pm
Bangalore Crime, Blackmail: ಪತ್ನಿ ಮತ್ತು ಆಕೆಯ...
28-10-24 02:47 pm
Mangalore News, Cyber Fraud: ಮಹಾರಾಷ್ಟ್ರದ ಎಸ್ಐ...
27-10-24 08:57 pm