ಬ್ರೇಕಿಂಗ್ ನ್ಯೂಸ್
23-07-24 03:03 pm HK News Desk ಕ್ರೈಂ
ರಾಮನಗರ, ಜುಲೈ.23: ರಾಮನಗರದಲ್ಲಿ ಪೈಶಾಚಿಕ ಕೃತ್ಯವೊಂದು ನಡೆದಿದೆ. ಐಸ್ಕ್ರೀಮ್ ಕೊಡಿಸುವ ನೆಪದಲ್ಲಿ 4 ವರ್ಷದ ಬಾಲಕಿಯನ್ನು ಕರೆದೊಯ್ದು ಕಾಮುಕನೊಬ್ಬ ಅತ್ಯಾಚಾರವೇಸಗಿ ಬಳಿಕ ಕೊಂದು ಹಾಕಿದ್ದಾನೆ.
ಮೂರು ದಿನದ ಹಿಂದೆ ಕಾಣೆಯಾಗಿದ್ದ 4 ವರ್ಷದ ಹೆಣ್ಣು ಮಗುವನ್ನು ಅವರ ಸಂಬಂಧಿಯೇ ಅಪಹರಿಸಿ ಅತ್ಯಾಚಾರ ಎಸಗಿ, ಕೊಲೆ ಮಾಡಿರುವ ಘಟನೆ ಮಾಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಗುವಿನ ಶವವು ತಿಪ್ಪಗೊಂಡನಹಳ್ಳಿ ಬಳಿ ಸೋಮವಾರ ರಾತ್ರಿ ಪತ್ತೆಯಾಗಿದೆ.
ಘಟನೆಗೆ ಸಂಬಂಧಿಸಿದಂತೆ, ಆರೋಪಿ ಬೆಂಗಳೂರಿನ ಗೌರಿಪಾಳ್ಯದ ಇಮ್ರಾನ್ ಖಾನ್ ವಿರುದ್ಧ ಮಾಗಡಿ ಠಾಣೆ ಪೊಲೀಸರು ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಬಂಧಿಸಿದ್ದಾರೆ.
ಮಗು ಕುಟುಂಬದ ಸಂಬಂಧಿಯಾದ ಆರೋಪಿ ಆಗಾಗ ಮನೆಗೆ ಬಂದು ಹೋಗುತ್ತಿದ್ದ. ಅದೇ ರೀತಿ ಜುಲೈ 20ಕ್ಕೆ ಬಂದಿದ್ದ ಆತ, ಕೊಲೆಯಾಗಿರುವ ಹೆಣ್ಣು ಮಗುವಿನ ಜೊತೆಗೆ ಮತ್ತೊಂದು ಮಗುವನ್ನು ಸಂಜೆ ಅಂಗಡಿಗೆ ಕರೆದೊಯ್ದು ಐಸ್ಕ್ರೀಂ ಕೊಡಿಸಿಕೊಂಡು ಬಂದಿದ್ದ. ನಂತರ, ಮತ್ತೆ ಹೆಣ್ಣು ಮಗುವನ್ನು ತನ್ನೊಂದಿಗೆ ಕರೆದೊಯ್ದಿದ್ದ ಎಂದು ಪೊಲೀಸರು ತಿಳಿಸಿದರು.
ಸಂಜೆ 7 ಗಂಟೆಯಾದರೂ ಮಗು ಮನೆಗೆ ಬಾರದಿದ್ದರಿಂದ ಗಾಬರಿಗೊಂಡ, ತಾಯಿ ಅಕ್ಕಪಕ್ಕ ಹುಡುಕಾಡಿದರು. ಕಡೆಗೆ, ಅಂಗಡಿಗೆ ಮಗು ಕರೆದೊಯ್ದಿದ್ದ ಆರೋಪಿಗೆ ಕರೆ ಮಾಡಿದಾಗ ಆತ, ‘ನನಗೇನೂ ಗೊತ್ತಿಲ್ಲ’ ಎಂದು ಕರೆ ಸ್ಥಗಿತಗೊಳಿಸಿ, ಮೊಬೈಲ್ ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದ. ಅನುಮಾನಗೊಂಡ ತಾಯಿ ಠಾಣೆಗೆ ದೂರು ಕೊಟ್ಟಿದ್ದರು. ಪ್ರಕರಣ ದಾಖಲಿಸಿಕೊಂಡು ಮಗು ಹಾಗೂ ಆರೋಪಿಗಾಗಿ ಹುಡುಕಾಟ ನಡೆಸಿದ್ದೆವು ಎಂದು ಹೇಳಿದರು.
ಸಿಸಿಟಿವಿ ಕ್ಯಾಮೆರಾ ಪರಿಶೀಲನೆ ಸೇರಿದಂತೆ, ವಿವಿಧ ಮೂಲಗಳನ್ನು ಆಧರಿಸಿ ಶೋಧ ಕಾರ್ಯ ನಡೆಸಿದಾಗ, ಆರೋಪಿ ತಿಪ್ಪಗೊಂಡನಹಳ್ಳಿ ಬಳಿಯ ರಸ್ತೆಯಲ್ಲಿ ಓಡಾಡಿರುವುದು ಗೊತ್ತಾಯಿತು. ಸುತ್ತಮುತ್ತ ಹುಡುಕಾಡಿದಾಗ ರಸ್ತೆ ಬದಿಯ ಬಂಡೆಯ ಬಳಿ ಬೆತ್ತಲೆ ಸ್ಥಿತಿಯಲ್ಲಿ ಮಗುವಿನ ಶವ ಪತ್ತೆಯಾಯಿತು. ನಂತರ ಬೆಂಗಳೂರಿನ ಕಲಾಸಿಪಾಳ್ಯದಲ್ಲಿ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಸಹ ಬಂಧಿಸಲಾಯಿತು. ರಾಜರಾಜೇಶ್ವರಿ ಆಸ್ಪತ್ರೆಯಲ್ಲಿ ಮಗುವಿನ ಮರಣೋತ್ತರ ಪರೀಕ್ಷೆ ನಡೆಸಿ, ಕುಟುಂಬದವರಿಗೆ ಶವ ಹಸ್ತಾಂತರಿಸಲಾಯಿತು ಎಂದು ತಿಳಿಸಿದರು.
ತಹಸೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ;
ಆರೋಪಿ ಇಮ್ರಾನ್ ಖಾನ್ನನ್ನು ಎನ್ಕೌಂಟರ್ ಮಾಡುವಂತೆ ಕುಟುಂಬಸ್ಥರು ಸೇರಿ ಸಾರ್ವಜನಿಕರು ಪ್ರತಿಭಟಿಸಿದರು. ಮಾಗಡಿ ತಹಸೀಲ್ದಾರ್ ಕಚೇರಿ ಮುಂಭಾಗ ಜಮಾಯಿಸಿದ ಸಾವಿರಾರು ಜನರು ಪ್ರತಿಭಟಿಸಿದರು. ಮಾಗಡಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪೋಕ್ಸೋ ಅಡಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ.
Ramnagara rape and murder of 4 year old girl, accused arrested. Public protest to encounter the accused or handover him to them. The 4 year old girl was told of buying icecream and later raped.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm