ಬ್ರೇಕಿಂಗ್ ನ್ಯೂಸ್
24-07-24 05:09 pm Bangalore Correspondent ಕ್ರೈಂ
ಬೆಂಗಳೂರು, ಜುಲೈ.24: ಮಹಿಳಾ ಪಿ.ಜಿ ಒಳಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಹತ್ಯೆ ಮಾಡಿರುವ ಘಟನೆ ಮಂಗಳವಾರ ತಡರಾತ್ರಿ ಕೋರಮಂಗಲದ ವಿ.ಆರ್.ಲೇಔಟ್ನಲ್ಲಿ ನಡೆದಿದೆ. ಬಿಹಾರ ಮೂಲದ ಕೃತಿ ಕುಮಾರಿ (24) ಕೊಲೆಯಾಗಿದ್ದಾರೆ.

ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೃತಿ ಕುಮಾರಿ ಕೆಲಸ ಮಾಡುತ್ತಿದ್ದರು. ತಡರಾತ್ರಿ 11.10ರ ಸುಮಾರಿಗೆ ಚಾಕು ಹಿಡಿದು ಪಿ.ಜಿಯೊಳಗೆ ನುಗ್ಗಿದ ಆರೋಪಿ, 3ನೇ ಮಹಡಿಯಲ್ಲಿನ ರೂಮಿನ ಸಮೀಪದಲ್ಲೇ ಯುವತಿ ಮೇಲೆ ಚಾಕುವಿನಿಂದ ಕತ್ತು ಕೊಯ್ದು ಕೊಲೆಗೈದು ಪರಾರಿಯಾಗಿದ್ದಾನೆ.
ಘಟನಾ ಸ್ಥಳಕ್ಕೆ ಕೋರಮಂಗಲ ಪೊಲೀಸರು, ಆಗ್ನೇಯ ವಿಭಾಗದ ಡಿಸಿಪಿ ಸಾರಾ ಫಾತಿಮಾ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಪರಿಚಯಸ್ಥ ವ್ಯಕ್ತಿಯಿಂದಲೇ ಕೃತ್ಯ ನಡೆದಿರುವ ಶಂಕೆ ವ್ಯಕ್ತವಾಗಿದೆ. ಪಿ.ಜಿಯಲ್ಲಿನ ಭದ್ರತಾ ವೈಫಲ್ಯವೇ ಘಟನೆಗೆ ಪ್ರಮುಖ ಕಾರಣ ಎನ್ನಲಾಗಿದೆ. ಕೋರಮಂಗಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
''ಪ್ರಕರಣದ ಕುರಿತು ತನಿಖೆಗಾಗಿ ವಿಶೇಷ ತಂಡ ರಚಿಸಲಾಗಿದ್ದು, ಆರೋಪಿಯ ಬಂಧನದ ಬಳಿಕವಷ್ಟೇ ಕೃತ್ಯದ ಹಿಂದಿನ ಕಾರಣ ತಿಳಿಯಲಿದೆ'' ಎಂದು ಪೂರ್ವ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ರಮಣ್ ಗುಪ್ತಾ ತಿಳಿಸಿದ್ದಾರೆ.
ಘಟನೆಯ ಕುರಿತು ರಾತ್ರಿ 12 ಗಂಟೆ ಸುಮಾರಿಗೆ ಪೊಲೀಸರಿಗೆ ಮಾಹಿತಿ ಲಭ್ಯವಾಗಿದೆ. ತಕ್ಷಣ ಕೋರಮಂಗಲ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿದ್ದಾರೆ. ಮೃತ ಯುವತಿ ಮೂಲತಃ ಬಿಹಾರದವರು ಎನ್ನುವ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಪಿ.ಜಿಯ ಸಿಸಿಟಿವಿ ದೃಶ್ಯಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ. ಹತ್ಯೆಯಾದ ಯುವತಿ ಹಾಗೂ ಆರೋಪಿ ಪರಿಚಿತರಾ? ಕೃತ್ಯಕ್ಕೆ ಕಾರಣವೇನು? ಎಂಬುದು ತನಿಖೆಯ ನಂತರ ತಿಳಿಯಲಿದೆ' ಎಂದು ರಮಣ್ ಗುಪ್ತಾ ಮಾಹಿತಿ ನೀಡಿದರು.
A 24-year-old private firm employee was stabbed to death at a paying guest accommodation at Koramangala in Bengaluru on July 23. The deceased, Kruthi Kumari, was a native of Bihar. She worked in a private firm. She was staying in a ladies PG in VGR Layout.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm