ಬ್ರೇಕಿಂಗ್ ನ್ಯೂಸ್
30-07-24 11:00 pm Mangalore Correspondent ಕ್ರೈಂ
ಮಂಗಳೂರು, ಜುಲೈ 30: ಒಂದು ವರ್ಷದ ಹಿಂದೆ ಖಾಸಗಿ ಆಸ್ಪತ್ರೆ ಒಂದರಲ್ಲಿ ದಾಖಲಾಗಿದ್ದ ಮುಂಬೈ ಮೂಲದ ವ್ಯಕ್ತಿಯೊಬ್ಬ ವಿಶೇಷ ಚೇತನ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆಂಬ ಆರೋಪದ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ನಿರ್ದೋಷಿಗಳೆಂದು ಮಂಗಳೂರಿನ ವಿಶೇಷ ಪೋಕ್ಸೋ ನ್ಯಾಯಾಲಯ ತೀರ್ಪು ನೀಡಿದೆ.
2023ರ ಆಗಸ್ಟ್ 16ರಂದು ಈ ಬಗ್ಗೆ ಮಹಿಳಾ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿತ್ತು. ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯ ವಿಚಾರಣೆ ಪೂರ್ತಿಗೊಳಿಸಿ ಆರೋಪಿಗಳನ್ನು ನಿರಪರಾಧಿಗಳು ಎಂದು ಘೋಷಿಸಿ ಬಿಡುಗಡೆ ಮಾಡಿದೆ. ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎನ್ನಲಾದ ಮುಂಬೈನಲ್ಲಿ ನೆಲೆಸಿರುವ ಅಬ್ದುಲ್ ಹಲೀಂ(37) ಹಾಗೂ ಆತನಿಗೆ ಸಹಕಾರ ನೀಡಿದ್ದ ಕುಲಶೇಖರ ನಿವಾಸಿ ಶಮೀನಾ ಬಾನು(22) ಎಂಬವರ ವಿರುದ್ಧ ದೂರು ದಾಖಲಾಗಿತ್ತು.
ಮನ್ಸೂರ್ ಅಹಮದ್ ಬಾಬಾ ಶೇಖ್ ಮತ್ತು ಆರೋಪಿ ಅಬ್ದುಲ್ ಹಲೀಂ ಸ್ನೇಹಿತರಾಗಿದ್ದು, 2023ರ ಆಗಸ್ಟ್ 10ರಂದು ಕಾಸರಗೋಡಿನಿಂದ ಬೈಕ್ನಲ್ಲಿ ಹಿಂತಿರುಗುತ್ತಿದ್ದಾಗ ಬೈಕ್ ಅಪಘಾತಕ್ಕೀಡಾಗಿ, ಗಾಯಗೊಂಡು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದರು. ಇಬ್ಬರೂ ಆಸ್ಪತ್ರೆಯ ಒಂದೇ ಕೋಣೆಯಲ್ಲಿದ್ದರು. ಈ ಸಂದರ್ಭದಲ್ಲಿ ಮನ್ಸೂರ್ ಶೇಖ್ ಪತ್ನಿ ಶಮೀನಾ ಬಾನು ಎಂಬಾಕೆಯೊಂದಿಗೆ ವಿಶೇಷ ಚೇತನ ಮಗಳನ್ನು ಆಕೆಯ ತಾಯಿ ಬಿಟ್ಟು ಹೋಗಿದ್ದಳು.
ಈ ವೇಳೆ, ಶಮೀನಾ ಬಾನು ನೆರವಿನಲ್ಲಿ ಮುಂಬೈ ಮೂಲದ ಅಬ್ದುಲ್ ಹಲೀಂ ವಿಕಲಚೇತನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿತ್ತು. ಸಂತ್ರಸ್ತ ಬಾಲಕಿಯ ತಾಯಿ ನೀಡಿದ ದೂರಿನಂತೆ ಪೊಲೀಸರು ಕೇಸು ದಾಖಲಿಸಿದ್ದರು. ಸಾಕ್ಷ್ಯಾಧಾರಗಳ ಕೊರತೆಯಿಂದ ನ್ಯಾಯಾಲಯ ಆರೋಪಿಗಳನ್ನು ಖುಲಾಸೆ ಮಾಡಿದೆ. 1ನೇ ಆರೋಪಿ ಪರವಾಗಿ ಮಂಗಳೂರಿನ ವಕೀಲರುಗಳಾದ ಜಗದೀಶ ಕೆ.ಆರ್, ಪ್ರಸಾದ್, ಹೇಮಂತ್, ಪ್ರಜ್ಞಾ ಹಾಗೂ 2ನೇ ಆರೋಪಿ ಪರವಾಗಿ ವಿವೇಕ್ ಮುಲ್ಕಿ, ಕೃಷ್ಣ ಕಾರಂತ್, ಚೇತನಾ ಕೆ, ಅಲೇಖ್ಯ ಕೆ. ಇವರು ವಕಾಲತ್ತು ನಡೆಸಿದ್ದರು.
Rape case in Indiana hospital in Mangalore, accused acquitted. 2023 mentally challenged girl had accused of rape by the accused when she was admitted in the hospital.
02-01-26 06:09 pm
HK News Desk
Ballari Banner Fight, FIR, Death: ಬ್ಯಾನರ್ ವಿಚ...
02-01-26 04:13 pm
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
02-01-26 02:02 pm
Mangalore Correspondent
Dr Vinaya Hegde Death, NItte Mangalore: ನಿಟ್ಟ...
01-01-26 09:43 am
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm