ಬ್ರೇಕಿಂಗ್ ನ್ಯೂಸ್
01-08-24 10:48 pm Bangalore Correspondent ಕ್ರೈಂ
ಬೆಂಗಳೂರು, ಆ.01: ಅಶ್ಲೀಲ ಮೆಸೇಜ್ ಮಾಡಿ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಸಿಡೇದಹಳ್ಳಿಯಲ್ಲಿ ನಡೆದಿದೆ. ಮಮತಾ(31) ನೇಣಿಗೆ ಶರಣಾದ ರ್ದುದೈವಿ.
ಶಾಲಾ ಸಹಪಾಠಿಗಳಾದ ವಡ್ಡರಹಳ್ಳಿಯ ನಿವಾಸಿ ಅಶೋಕ್ ಹಾಗೂ ಜೆ.ಪಿ.ನಗರದ ಗಣೇಶ್ ಎಂಬ ಫ್ರೆಂಡ್ಸ್ ಅಶ್ಲೀಲ ಸಂದೇಶ ಕಳಿಸಿ ನಮ್ಮ ಜೊತೆ ಸಹಕರಿಸು ಬಾ..ಎಂದು ಕಿರುಕುಳ ನೀಡಿದ್ದಾರಂತೆ. ಜೊತೆಗೆ ನೈಟ್ ಔಟ್ ಬರುವಂತೆ ಒತ್ತಡ ಹೇರುತ್ತಿದ್ದರು ಎಂದು ಆರೋಪಿಸಲಾಗಿದೆ.
ಬೆದರಿಕೆಯಿಂದ ನೊಂದು ಆತ್ಮಹತ್ಯೆಗೆ ಶರಣು
'ನಿನ್ನ ಬಿಡುವುದಿಲ್ಲ, ನಿನ್ನ ಸಂಸಾರ ಹಾಳು ಮಾಡುತ್ತೇವೆಂದು ಬೆದರಿಕೆ ಒಡ್ಡಿದ್ದರಂತೆ. ಇದರಿಂದ ಮನನೊಂದು ಗೃಹಿಣಿ ಮಮತಾ ತನ್ನ ನಿವಾಸದಲ್ಲಿಯೇ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಪತಿ ಲೋಕೇಶ್, ಪತ್ನಿ ಮಮತಾಗೆ ಫೋನ್ ಮಾಡಿದಾಗ ರಿಸೀವ್ ಮಾಡದ ಹಿನ್ನೆಲೆ ಮನೆ ಬಾಗಿಲು ಒಡೆದು ನೋಡಿದಾಗ ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಕೂಡಲೇ ಅಶೋಕ್ ಮತ್ತು ಗಣೇಶ್ ವಿರುದ್ಧ ಲೋಕೇಶ್ ಠಾಣೆಗೆ ದೂರು ನೀಡಿದ್ದಾರೆ.
3 ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಜೋಡಿ ;
ಈ ಕುರಿತು ಪ್ರಕರಣ ದಾಖಲಿಸಿಕೊಂಡ ಬಾಗಲಗುಂಟೆ ಪೊಲೀಸರು, ತನಿಖೆ ನಡೆಸುತ್ತಿದ್ದಾರೆ. ಇನ್ನು ಮೃತ ಮಮತಾ ಹಾಗೂ ಲೋಕೇಶ್ 3 ವರ್ಷಗಳ ಹಿಂದೆ ಪ್ರೀತಿಸಿ, ಮನೆಯವರ ಒಪ್ಪಿಗೆ ಮೇರೆಗೆ ದೊಡ್ಡಬಳ್ಳಾಪುರದ ನರಸಿಂಹಸ್ವಾಮಿ ದೇವಸ್ಥಾನದಲ್ಲಿ ಮದುವೆಯಾಗಿದ್ದರು. ಎಲ್ಲವೂ ಚೆನ್ನಾಗಿದೆ ಅಂದುಕೊಳ್ಳುವಷ್ಟರಲ್ಲಿ, ಈ ದುರ್ಘಟನೆ ನಡೆದು ಹೋಗಿದೆ.
Bangalore School friends sexually messages to women, 31 year old commits suicide. The deceased has been identified as Mamatha.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 07:18 pm
HK News Staffer
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am
ಬಾಂಬ್ ಮಾದರಿಯ ವಸ್ತು ಸ್ಫೋಟಿಸಿ ರೀಲ್ಸ್ ಶೂಟಿಂಗ್ ;...
01-05-26 10:30 am