ಬ್ರೇಕಿಂಗ್ ನ್ಯೂಸ್
04-08-24 12:42 pm Udupi Correspondent ಕ್ರೈಂ
ಉಡುಪಿ, ಆಗಸ್ಟ್ 4: ಕುಡಿದ ಮತ್ತಿನಲ್ಲಿ ತನ್ನ ಹೆಂಡತಿಯ ಕುತ್ತಿಗೆಯನ್ನೇ ಕತ್ತಿಯಿಂದ ಕಡಿದು ಬಳಿಕ ಪತಿರಾಯ ಮನೆಯಲ್ಲಿ ಡ್ಯಾನ್ಸ್ ಮಾಡುತ್ತ ವಿಕೃತಿ ಮೆರೆದ ಘಟನೆ ಕುಂದಾಪುರ ತಾಲೂಕಿನ ಬಸ್ರೂರಿನಲ್ಲಿ ನಡೆದಿದೆ. ಹಲ್ಲೆಗೀಡಾದವರನ್ನು ಅನಿತಾ (38) ಎಂದು ಗುರುತಿಸಲಾಗಿದ್ದು, ಪತಿ ಲಕ್ಷ್ಮಣ ಕತ್ತಿಯಿಂದ ಹಲ್ಲೆಗೈದು ಅಟ್ಟಹಾಸ ಮೆರೆದಿದ್ದಾನೆ. ಗಂಭೀರ ಗಾಯಗೊಂಡ ಅನಿತಾಗೆ ಮಣಿಪಾಲ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಲಾಗುತ್ತಿದೆ.
ಶಿವಮೊಗ್ಗ ಜಿಲ್ಲೆಯ ಸೊರಬ ಮೂಲದ ಇವರು ಕುಂದಾಪುರ ತಾಲೂಕಿನ ಬಸ್ರೂರು ಕಾಶಿ ಮಠ, ರೆಸಿಡೆನ್ಶಿಯಲ್ ಬ್ಲಾಕ್ನ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಇವರು ನಾಲ್ಕು ತಿಂಗಳ ಹಿಂದಷ್ಟೇ ಕಾಶಿ ಮಠಕ್ಕೆ ಸೇರಿದ ತೋಟ ನೋಡಿಕೊಳ್ಳಲು ಉಡುಪಿ ಜಿಲ್ಲೆಗೆ ಬಂದಿದ್ದರು. ನಿನ್ನೆ ರಾತ್ರಿ ಕುಡಿದ ಮತ್ತಿನಲ್ಲಿ ಪತಿ ಲಕ್ಷ್ಮಣ ಪತ್ನಿಯ ಕುತ್ತಿಗೆ ಕಡಿದು ಮಾರಣಾಂತಿಕ ಗಾಯಗೊಳಿಸಿದ್ದಲ್ಲದೆ, ರಕ್ತದ ಮಡುವಿನಲ್ಲಿ ಬಿದ್ದಿದ್ದ ಅನಿತಾಳನ್ನು ಹಾಗೆಯೇ ಬಿಟ್ಟು ಮನೆಯ ಬಾಗಿಲ ಚಿಲಕ ಹಾಕಿ ಹಾಲ್ ನಲ್ಲಿ ಕೈಯಲ್ಲಿ ಕತ್ತಿ ಹಿಡಿದು ನರ್ತಿಸುತ್ತ ವಿಕೃತಿ ಮೆರೆದಿದ್ದಾನೆ.








ಕೆಲ ಕ್ಷಣಗಳಲ್ಲೆ ಸ್ಥಳೀಯರಿಗೆ ವಿಚಾರ ತಿಳಿದಿದ್ದು ಕೂಡಲೇ ಕಿಟಕಿ ಒಡೆದು ಅಡುಗೆ ಕೋಣೆಯಲ್ಲಿ ಬಿದ್ದಿದ್ದ ಮಹಿಳೆಯನ್ನು ಹೊರತಂದಿದ್ದಾರೆ. ಚಿಂತಾಜನಕ ಸ್ಥಿತಿಯಲ್ಲಿ ಮಹಿಳೆಯನ್ನು ಮಣಿಪಾಲ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೈಮೇಲೆ ದೈವ ಬಂದಂತೆ ಕೈಯಲ್ಲಿ ಕತ್ತಿ ಹಿಡಿದು ನರ್ತಿಸುತ್ತಿದ್ದ ಆರೋಪಿ ಲಕ್ಷ್ಮಣನನ್ನು ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಟ್ಟು ಬಂಧಿಸಿ ಎರಡೇಟು ಬಿಗಿದು ಹಿಡಿದ ಚಳಿಯನ್ನು ಬಿಡಿಸಿದ್ದಾರೆ. ಕಂಡ್ಲೂರು ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
Kundapura Udupi Man assaults wife with sickle, arrested by police. In a shocking incident, a man assaulted his wife with a sickle at Basrur under the Kandloor police station limits on Saturday night. The wife, seriously injured, has been admitted to the hospital. Anita (38), a native of Soraba, is the victim. Her husband, Laxmana (40), is the accused.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm