ಬ್ರೇಕಿಂಗ್ ನ್ಯೂಸ್
04-08-24 12:42 pm Udupi Correspondent ಕ್ರೈಂ
ಉಡುಪಿ, ಆಗಸ್ಟ್ 4: ಕುಡಿದ ಮತ್ತಿನಲ್ಲಿ ತನ್ನ ಹೆಂಡತಿಯ ಕುತ್ತಿಗೆಯನ್ನೇ ಕತ್ತಿಯಿಂದ ಕಡಿದು ಬಳಿಕ ಪತಿರಾಯ ಮನೆಯಲ್ಲಿ ಡ್ಯಾನ್ಸ್ ಮಾಡುತ್ತ ವಿಕೃತಿ ಮೆರೆದ ಘಟನೆ ಕುಂದಾಪುರ ತಾಲೂಕಿನ ಬಸ್ರೂರಿನಲ್ಲಿ ನಡೆದಿದೆ. ಹಲ್ಲೆಗೀಡಾದವರನ್ನು ಅನಿತಾ (38) ಎಂದು ಗುರುತಿಸಲಾಗಿದ್ದು, ಪತಿ ಲಕ್ಷ್ಮಣ ಕತ್ತಿಯಿಂದ ಹಲ್ಲೆಗೈದು ಅಟ್ಟಹಾಸ ಮೆರೆದಿದ್ದಾನೆ. ಗಂಭೀರ ಗಾಯಗೊಂಡ ಅನಿತಾಗೆ ಮಣಿಪಾಲ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಲಾಗುತ್ತಿದೆ.
ಶಿವಮೊಗ್ಗ ಜಿಲ್ಲೆಯ ಸೊರಬ ಮೂಲದ ಇವರು ಕುಂದಾಪುರ ತಾಲೂಕಿನ ಬಸ್ರೂರು ಕಾಶಿ ಮಠ, ರೆಸಿಡೆನ್ಶಿಯಲ್ ಬ್ಲಾಕ್ನ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಇವರು ನಾಲ್ಕು ತಿಂಗಳ ಹಿಂದಷ್ಟೇ ಕಾಶಿ ಮಠಕ್ಕೆ ಸೇರಿದ ತೋಟ ನೋಡಿಕೊಳ್ಳಲು ಉಡುಪಿ ಜಿಲ್ಲೆಗೆ ಬಂದಿದ್ದರು. ನಿನ್ನೆ ರಾತ್ರಿ ಕುಡಿದ ಮತ್ತಿನಲ್ಲಿ ಪತಿ ಲಕ್ಷ್ಮಣ ಪತ್ನಿಯ ಕುತ್ತಿಗೆ ಕಡಿದು ಮಾರಣಾಂತಿಕ ಗಾಯಗೊಳಿಸಿದ್ದಲ್ಲದೆ, ರಕ್ತದ ಮಡುವಿನಲ್ಲಿ ಬಿದ್ದಿದ್ದ ಅನಿತಾಳನ್ನು ಹಾಗೆಯೇ ಬಿಟ್ಟು ಮನೆಯ ಬಾಗಿಲ ಚಿಲಕ ಹಾಕಿ ಹಾಲ್ ನಲ್ಲಿ ಕೈಯಲ್ಲಿ ಕತ್ತಿ ಹಿಡಿದು ನರ್ತಿಸುತ್ತ ವಿಕೃತಿ ಮೆರೆದಿದ್ದಾನೆ.








ಕೆಲ ಕ್ಷಣಗಳಲ್ಲೆ ಸ್ಥಳೀಯರಿಗೆ ವಿಚಾರ ತಿಳಿದಿದ್ದು ಕೂಡಲೇ ಕಿಟಕಿ ಒಡೆದು ಅಡುಗೆ ಕೋಣೆಯಲ್ಲಿ ಬಿದ್ದಿದ್ದ ಮಹಿಳೆಯನ್ನು ಹೊರತಂದಿದ್ದಾರೆ. ಚಿಂತಾಜನಕ ಸ್ಥಿತಿಯಲ್ಲಿ ಮಹಿಳೆಯನ್ನು ಮಣಿಪಾಲ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೈಮೇಲೆ ದೈವ ಬಂದಂತೆ ಕೈಯಲ್ಲಿ ಕತ್ತಿ ಹಿಡಿದು ನರ್ತಿಸುತ್ತಿದ್ದ ಆರೋಪಿ ಲಕ್ಷ್ಮಣನನ್ನು ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಟ್ಟು ಬಂಧಿಸಿ ಎರಡೇಟು ಬಿಗಿದು ಹಿಡಿದ ಚಳಿಯನ್ನು ಬಿಡಿಸಿದ್ದಾರೆ. ಕಂಡ್ಲೂರು ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
Kundapura Udupi Man assaults wife with sickle, arrested by police. In a shocking incident, a man assaulted his wife with a sickle at Basrur under the Kandloor police station limits on Saturday night. The wife, seriously injured, has been admitted to the hospital. Anita (38), a native of Soraba, is the victim. Her husband, Laxmana (40), is the accused.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 10:43 am
HK News Staffer
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm