ಬ್ರೇಕಿಂಗ್ ನ್ಯೂಸ್
04-08-24 12:42 pm Udupi Correspondent ಕ್ರೈಂ
ಉಡುಪಿ, ಆಗಸ್ಟ್ 4: ಕುಡಿದ ಮತ್ತಿನಲ್ಲಿ ತನ್ನ ಹೆಂಡತಿಯ ಕುತ್ತಿಗೆಯನ್ನೇ ಕತ್ತಿಯಿಂದ ಕಡಿದು ಬಳಿಕ ಪತಿರಾಯ ಮನೆಯಲ್ಲಿ ಡ್ಯಾನ್ಸ್ ಮಾಡುತ್ತ ವಿಕೃತಿ ಮೆರೆದ ಘಟನೆ ಕುಂದಾಪುರ ತಾಲೂಕಿನ ಬಸ್ರೂರಿನಲ್ಲಿ ನಡೆದಿದೆ. ಹಲ್ಲೆಗೀಡಾದವರನ್ನು ಅನಿತಾ (38) ಎಂದು ಗುರುತಿಸಲಾಗಿದ್ದು, ಪತಿ ಲಕ್ಷ್ಮಣ ಕತ್ತಿಯಿಂದ ಹಲ್ಲೆಗೈದು ಅಟ್ಟಹಾಸ ಮೆರೆದಿದ್ದಾನೆ. ಗಂಭೀರ ಗಾಯಗೊಂಡ ಅನಿತಾಗೆ ಮಣಿಪಾಲ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಲಾಗುತ್ತಿದೆ.
ಶಿವಮೊಗ್ಗ ಜಿಲ್ಲೆಯ ಸೊರಬ ಮೂಲದ ಇವರು ಕುಂದಾಪುರ ತಾಲೂಕಿನ ಬಸ್ರೂರು ಕಾಶಿ ಮಠ, ರೆಸಿಡೆನ್ಶಿಯಲ್ ಬ್ಲಾಕ್ನ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಇವರು ನಾಲ್ಕು ತಿಂಗಳ ಹಿಂದಷ್ಟೇ ಕಾಶಿ ಮಠಕ್ಕೆ ಸೇರಿದ ತೋಟ ನೋಡಿಕೊಳ್ಳಲು ಉಡುಪಿ ಜಿಲ್ಲೆಗೆ ಬಂದಿದ್ದರು. ನಿನ್ನೆ ರಾತ್ರಿ ಕುಡಿದ ಮತ್ತಿನಲ್ಲಿ ಪತಿ ಲಕ್ಷ್ಮಣ ಪತ್ನಿಯ ಕುತ್ತಿಗೆ ಕಡಿದು ಮಾರಣಾಂತಿಕ ಗಾಯಗೊಳಿಸಿದ್ದಲ್ಲದೆ, ರಕ್ತದ ಮಡುವಿನಲ್ಲಿ ಬಿದ್ದಿದ್ದ ಅನಿತಾಳನ್ನು ಹಾಗೆಯೇ ಬಿಟ್ಟು ಮನೆಯ ಬಾಗಿಲ ಚಿಲಕ ಹಾಕಿ ಹಾಲ್ ನಲ್ಲಿ ಕೈಯಲ್ಲಿ ಕತ್ತಿ ಹಿಡಿದು ನರ್ತಿಸುತ್ತ ವಿಕೃತಿ ಮೆರೆದಿದ್ದಾನೆ.








ಕೆಲ ಕ್ಷಣಗಳಲ್ಲೆ ಸ್ಥಳೀಯರಿಗೆ ವಿಚಾರ ತಿಳಿದಿದ್ದು ಕೂಡಲೇ ಕಿಟಕಿ ಒಡೆದು ಅಡುಗೆ ಕೋಣೆಯಲ್ಲಿ ಬಿದ್ದಿದ್ದ ಮಹಿಳೆಯನ್ನು ಹೊರತಂದಿದ್ದಾರೆ. ಚಿಂತಾಜನಕ ಸ್ಥಿತಿಯಲ್ಲಿ ಮಹಿಳೆಯನ್ನು ಮಣಿಪಾಲ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೈಮೇಲೆ ದೈವ ಬಂದಂತೆ ಕೈಯಲ್ಲಿ ಕತ್ತಿ ಹಿಡಿದು ನರ್ತಿಸುತ್ತಿದ್ದ ಆರೋಪಿ ಲಕ್ಷ್ಮಣನನ್ನು ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಟ್ಟು ಬಂಧಿಸಿ ಎರಡೇಟು ಬಿಗಿದು ಹಿಡಿದ ಚಳಿಯನ್ನು ಬಿಡಿಸಿದ್ದಾರೆ. ಕಂಡ್ಲೂರು ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
Kundapura Udupi Man assaults wife with sickle, arrested by police. In a shocking incident, a man assaulted his wife with a sickle at Basrur under the Kandloor police station limits on Saturday night. The wife, seriously injured, has been admitted to the hospital. Anita (38), a native of Soraba, is the victim. Her husband, Laxmana (40), is the accused.
19-02-26 09:29 pm
mangalore
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
19-02-26 11:04 pm
mangalore
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
19-02-26 10:37 pm
mangalore
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
ನೇತ್ರಾವತಿ ಸೇತುವೆ ಆವರಣ ಗೋಡೆಗೆ ಅಪ್ಪಳಿಸಿದ ಮಿನಿ ಟ...
19-02-26 05:38 pm
ಬೆಳ್ತಂಗಡಿ : ಮಕ್ಕಳು ಕ್ರಿಕೆಟ್ ಆಡುತ್ತಿದ್ದಾಗ ನಿಗೂ...
19-02-26 04:09 pm
20-02-26 11:31 am
Mangalore Correspondent
Mangalore CCB Police, Rowdy Safwan Hussain: ದ...
18-02-26 09:16 pm
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm