ಬ್ರೇಕಿಂಗ್ ನ್ಯೂಸ್
04-08-24 10:48 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 4: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವ ಬಗ್ಗೆ ಅಪರಿಚಿತ ವ್ಯಕ್ತಿಯ ಮಾತು ಕೇಳಿ ಮಹಿಳೆಯೊಬ್ಬರು 1.65 ಕೋಟಿ ರೂಪಾಯಿ ಹಣ ಕಳಕೊಂಡಿದ್ದು ತಾನು ಮೋಸಕ್ಕೀಡಾದ ಬಗ್ಗೆ ಮಂಗಳೂರು ಸೈಬರ್ ಠಾಣೆಗೆ ದೂರು ನೀಡಿದ್ದಾರೆ.
ಮಹಿಳೆ ಷೇರು ಮಾರುಕಟ್ಟೆಯ ಬಗ್ಗೆ ತಿಳಿದುಕೊಳ್ಳಲು ಇನ್ಸ್ ಟಾ ಗ್ರಾಮಿನಲ್ಲಿ ಸರ್ಚ್ ಮಾಡಿದ್ದರು. ಈ ವೇಳೆ, ಅಂಕಿತಾ ಪಟೇಲ್ ಹೆಸರಿನ ಅಪರಿಚಿತ ವ್ಯಕ್ತಿ ವಾಟ್ಸಪ್ ನಲ್ಲಿ ಚಾಟ್ ಮಾಡಿ, ಷೇರ್ ಮಾರ್ಕೆಟ್ ಕುರಿತ ಗ್ರೂಪಿಗೆ ಜಾಯಿನ್ ಮಾಡಿಸಿದ್ದ. ಆನಂತರ, ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವಂತೆ ಪ್ರೇರಣೆ ನೀಡಿದ್ದ.
ನಂತರ, Fidelity pearl of south Asia ಎಂಬ ಷೇರು ಮಾರುಕಟ್ಟೆ ವಾಟ್ಸಪ್ ಗ್ರೂಪಿಗೆ ಜಾಯಿನ್ ಮಾಡಿಸಿದ್ದರು. ಅದರಲ್ಲಿ ಹೂಡಿಕೆ ಮಾಡುವಂತೆ ಅಪರಿಚಿತ ವ್ಯಕ್ತಿ ತಿಳಿಸಿದಂತೆ, ಫಿಡೆಲಿಟಿ ಏಪ್ ಡೌನ್ಲೋಡ್ ಮಾಡಿ ತನ್ನ ಎಚ್ ಡಿಎಫ್ ಸಿ ಬ್ಯಾಂಕಿನಿಂದ ಜೂನ್ 26ರಿಂದ ಜುಲೈ 31ರ ನಡುವೆ ಹಂತ ಹಂತವಾಗಿ ಒಟ್ಟು 1,65,92,293 ರೂ. ಮೊತ್ತವನ್ನು ವರ್ಗಾವಣೆ ಮಾಡಿದ್ದರು.
ಹೂಡಿಕೆ ಮಾಡಿದ ಹಣವನ್ನು ಹಿಂತಿರುಗಿ ಪಡೆಯಲು ಯತ್ನಿಸಿದಾಗ ಸಾಧ್ಯವಾಗಲಿಲ್ಲ. ಅದು ತಿಳಿಯುತ್ತಿದ್ದನಂತೆ ಮಹಿಳೆಗೆ ಮೋಸದ ಅರಿವಾಗಿದ್ದು ಮಂಗಳೂರಿನ ಸೈಬರ್ ಠಾಣೆಗೆ ದೂರು ನೀಡಿದ್ದಾರೆ.
ವ್ಯಕ್ತಿ ಹೇಳಿದಂತೆ ಬೇರೆ ಬೇರೆ ಖಾತೆಗಳಿಗೆ IMPS ಮತ್ತು RTGS ಮೂಲಕ ಮಹಿಳೆ ಹಣ ವರ್ಗಾವಣೆ ಮಾಡಿದ್ದರು. ಈ ಹಣ ಹೂಡಿಕೆ ರೂಪದಲ್ಲಿ ಫಿಡೆಲಿಟಿ ಏಪ್ ನಲ್ಲಿ ತೋರಿಸುತ್ತಿತ್ತು. ಆದರೆ ಹೂಡಿಕೆ ಮಾಡಿದ ಹಣವನ್ನು ಹಿಂತಿರುಗಿ ಪಡೆಯುವ ಅವಕಾಶ ಇರಲಿಲ್ಲ. ಈ ರೀತಿ ಹಲವಾರು ಸಾರ್ವಜನಿಕರನ್ನು ವಂಚಕರು ನೇರವಾಗಿ ಸಂಪರ್ಕಿಸಿ ಮೋಸದ ಜಾಲಕ್ಕೆ ಸಿಲುಕಿಸುತ್ತಾರೆ. ಅತಿ ಹೆಚ್ಚು ಲಾಭ ಕೊಡಿಸುವ ಭರವಸೆಯನ್ನೂ ಕೊಡುತ್ತಾರೆ. ಮೋಸದ ಅರಿವಿರದೆ ಹಣ ಹೂಡಿಕೆ ಮಾಡಿದವರನ್ನು ಮತ್ತಷ್ಟು ಹೂಡಿಕೆ ಮಾಡುವಂತೆ ಪ್ರೇರಣೆ ನೀಡುತ್ತಾರೆ. ಇದೇ ಕಾರಣಕ್ಕೆ ಏಪ್ ನಲ್ಲಿ ಹೂಡಿಕೆ ಮಾಡಿದ ಮೊತ್ತ ಹೆಚ್ಚು ಅಪ್ ಆದ ರೀತಿ ಕಾಣಿಸುತ್ತಾರೆ. ಆಮೂಲಕ ಹಣ ಇದ್ದವರನ್ನು ಮತ್ತಷ್ಟು ಹೂಡಿಕೆ ಮಾಡಲು ಪ್ರೇರೇಪಿಸುತ್ತದೆ. ಇದೊಂದು ಸೈಬರ್ ವಂಚಕರ ಜಾಲವಾಗಿದ್ದು ತಂಡವಾಗಿ ಕಾರ್ಯ ನಿರ್ವಹಿಸುತ್ತದೆ. ಉತ್ತರ ಭಾರತದ ಮೂಲೆಯಲ್ಲಿ ಕುಳಿತು ಈ ಕೃತ್ಯ ಎಸಗುತ್ತಿದ್ದು ಇವರನ್ನು ಪತ್ತೆ ಮಾಡಲು ಪೊಲೀಸರೂ ಸರ್ವ ಪ್ರಯತ್ನ ಹಾಕದೇ ಇರುವುದು ಮತ್ತಷ್ಟು ವಂಚನೆಗೆ ದಾರಿಯಾಗಿಸಿದೆ.
Mangalore Share market fraud, women looses 1.65 crore money. Fidelity Pearl of South Asia company share market Fraud exposed. A case has been registered at cyber crime police station.
23-01-26 03:21 pm
Bangalore Correspondent
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
23-01-26 06:44 pm
HK News Desk
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
ಆಂಧ್ರದಲ್ಲಿ ಮತ್ತೆ ಬಸ್ ಬೆಂಕಿ ; ಟೈರ್ ಸ್ಫೋಟಗೊಂಡು...
22-01-26 11:26 am
24-01-26 08:14 pm
Mangaluru Staffer
ಬಹುಮುಖ ಪ್ರತಿಭೆಯ ಕಲಾವಿದ ಸ್ವಾತಿ ಸತೀಶ್ ಆತ್ಮಹತ್ಯೆ...
24-01-26 08:04 pm
ಯೆನಪೋಯ ವಿವಿಯಲ್ಲಿ ಮಾನಸಿಕ ಆರೋಗ್ಯ ನರ್ಸಿಂಗ್ ವಿಭಾಗ...
23-01-26 09:21 pm
National Conference on Neuropsychiatry Held a...
23-01-26 09:08 pm
ನಾರ್ಲ ಪಡೀಲಿನಲ್ಲಿ ಒಣ ತ್ಯಾಜ್ಯ ಸಂಸ್ಕರಣಾ ಘಟಕ ನಿರ್...
23-01-26 08:22 pm
24-01-26 02:13 pm
HK News Staffer
ಬೈಕ್ ಕದ್ದೊಯ್ಯುತ್ತಿದ್ದ ಇಬ್ಬರನ್ನು ಮರಕ್ಕೆ ಕಟ್ಟಿ...
23-01-26 09:36 pm
ಕಾವೂರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ನಕಲಿ ಚಿನ್ನ...
23-01-26 03:34 pm
29 ವರ್ಷಗಳ ಹಿಂದೆ ತಾಯಿ, ಮಗನನ್ನು ಕೊಲೆಗೈದು ಚಿನ್ನಾ...
22-01-26 10:12 pm
ಸ್ವಾಮೀಜಿಗೆ ಬ್ಲ್ಯಾಕ್ಮೇಲ್ ; ಒಂದು ಕೋಟಿಗೆ ಡಿಮ್ಯಾಂ...
22-01-26 02:40 pm