ಬ್ರೇಕಿಂಗ್ ನ್ಯೂಸ್
06-08-24 09:34 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 6: ಪಣಂಬೂರು ಠಾಣೆ ವ್ಯಾಪ್ತಿಯ ಜೋಕಟ್ಟೆ ಎಂಬಲ್ಲಿ ಬಾಡಿಗೆ ಮನೆಯಲ್ಲಿ ನೆಲೆಸಿದ್ದ 13 ವರ್ಷದ ಬಾಲಕಿಯನ್ನು ಯಾರೋ ದುರುಳರು ಬಟ್ಟೆಯಲ್ಲಿ ಕುತ್ತಿಗೆ ಬಿಗಿದು ಕೊಲೆಗೈದ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ.
ಬೆಳಗಾವಿ ಮೂಲದ ಹನುಮಂತು ಎಂಬವರು ಜೋಕಟ್ಟೆಯಲ್ಲಿ ಬಾಡಿಗೆ ಮನೆ ಮಾಡಿಕೊಂಡಿದ್ದರು. ಕೋಣಾಜೆಯ ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ಕಲಿಯುತ್ತಿದ್ದ ಇವರ ತಮ್ಮನ ಮಗಳು 13 ವರ್ಷದ ಬಾಲಕಿ ಊರಿಗೆ ಹೋಗಿ ಹಿಂತಿರುಗಿದ್ದು, ಕೈ ನೋವೆಂದು ಶಾಲೆಗೆ ಹೋಗದೆ ಇವರದೇ ಮನೆಯಲ್ಲಿ ಉಳಿದುಕೊಂಡಿದ್ದಳು. ನಾಲ್ಕು ದಿನಗಳಿಂದ ಇದೇ ಮನೆಯಲ್ಲಿ ಬಾಲಕಿ ನೆಲೆಸಿದ್ದು ಮಂಗಳವಾರ ಬೆಳಗ್ಗೆ ಹನುಮಂತು ಮತ್ತು ಇತರರು ತಮ್ಮ ಕೆಲಸಕ್ಕೆ ತೆರಳಿದ್ದರು.

ಬೆಳಗ್ಗೆ ಹತ್ತು ಗಂಟೆ ವೇಳೆಗೆ ಬಾಲಕಿಯ ತಾಯಿ ಪಕ್ಕದ ಮನೆಯವರಿಗೆ ಫೋನ್ ಮಾಡಿದ್ದು, ತನ್ನ ಮಗಳಿಗೆ ಫೋನ್ ಕೊಡುವಂತೆ ಹೇಳಿದ್ದರು. ಅದರಂತೆ, ಪಕ್ಕದ ಮನೆಯವರು ಅಲ್ಲಿಗೆ ತೆರಳಿ ನೋಡಿದಾಗ, ಬಾಲಕಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಕೂಡಲೇ ಹನುಮಂತು ಅವರನ್ನು ಸ್ಥಳಕ್ಕೆ ಕರೆಸಿದ್ದು, ಪರಿಶೀಲನೆ ವೇಳೆ ಕುತ್ತಿಗೆಯನ್ನು ಬಟ್ಟೆಯಿಂದ ಬಿಗಿದು ಸಾಯಿಸಿದ ರೀತಿ ಕಂಡುಬಂದಿದೆ. ಬಳಿಕ ಪಣಂಬೂರು ಪೊಲೀಸರು ಸ್ಥಳಕ್ಕೆ ತೆರಳಿದ್ದು, ಪರಿಶೀಲನೆ ನಡೆಸಿದ್ದಾರೆ.
ಯಾರೋ ಹೊರಗಿನವರು ಮನೆಯ ಒಳಗೆ ಬಂದು ಕೃತ್ಯ ಎಸಗಿದ್ದಾರೆ ಎನ್ನಲಾಗುತ್ತಿದೆ. ಆಕೆಯ ಮೇಲೆ ಅತ್ಯಾಚಾರ ಯತ್ನ ಆಗಿದೆಯೇ ಎನ್ನುವ ಬಗ್ಗೆ ಪೋಸ್ಟ್ ಮಾರ್ಟಂ ಪರೀಕ್ಷೆಯಲ್ಲಿ ತಿಳಿದುಬರಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಶಂಕೆಯ ಮೇರೆಗೆ ಹಲವರನ್ನು ವಿಚಾರಣೆ ನಡೆಸಲಾಗಿದ್ದು ಸುಳಿವು ಸಿಕ್ಕಿದೆ ಎಂದು ತಿಳಿಸಿದ್ದಾರೆ.
Mangalore 13 year old girl from Belagavi murdered in Jokatte. A 13-year-old girl from Belagavi was found dead with a cloth around her neck in a rental house in Jokatte, where she had been staying for the past four days for treatment of a hand injury. Prima facie, murder is suspected.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm