ಬ್ರೇಕಿಂಗ್ ನ್ಯೂಸ್
06-08-24 09:34 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 6: ಪಣಂಬೂರು ಠಾಣೆ ವ್ಯಾಪ್ತಿಯ ಜೋಕಟ್ಟೆ ಎಂಬಲ್ಲಿ ಬಾಡಿಗೆ ಮನೆಯಲ್ಲಿ ನೆಲೆಸಿದ್ದ 13 ವರ್ಷದ ಬಾಲಕಿಯನ್ನು ಯಾರೋ ದುರುಳರು ಬಟ್ಟೆಯಲ್ಲಿ ಕುತ್ತಿಗೆ ಬಿಗಿದು ಕೊಲೆಗೈದ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ.
ಬೆಳಗಾವಿ ಮೂಲದ ಹನುಮಂತು ಎಂಬವರು ಜೋಕಟ್ಟೆಯಲ್ಲಿ ಬಾಡಿಗೆ ಮನೆ ಮಾಡಿಕೊಂಡಿದ್ದರು. ಕೋಣಾಜೆಯ ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ಕಲಿಯುತ್ತಿದ್ದ ಇವರ ತಮ್ಮನ ಮಗಳು 13 ವರ್ಷದ ಬಾಲಕಿ ಊರಿಗೆ ಹೋಗಿ ಹಿಂತಿರುಗಿದ್ದು, ಕೈ ನೋವೆಂದು ಶಾಲೆಗೆ ಹೋಗದೆ ಇವರದೇ ಮನೆಯಲ್ಲಿ ಉಳಿದುಕೊಂಡಿದ್ದಳು. ನಾಲ್ಕು ದಿನಗಳಿಂದ ಇದೇ ಮನೆಯಲ್ಲಿ ಬಾಲಕಿ ನೆಲೆಸಿದ್ದು ಮಂಗಳವಾರ ಬೆಳಗ್ಗೆ ಹನುಮಂತು ಮತ್ತು ಇತರರು ತಮ್ಮ ಕೆಲಸಕ್ಕೆ ತೆರಳಿದ್ದರು.

ಬೆಳಗ್ಗೆ ಹತ್ತು ಗಂಟೆ ವೇಳೆಗೆ ಬಾಲಕಿಯ ತಾಯಿ ಪಕ್ಕದ ಮನೆಯವರಿಗೆ ಫೋನ್ ಮಾಡಿದ್ದು, ತನ್ನ ಮಗಳಿಗೆ ಫೋನ್ ಕೊಡುವಂತೆ ಹೇಳಿದ್ದರು. ಅದರಂತೆ, ಪಕ್ಕದ ಮನೆಯವರು ಅಲ್ಲಿಗೆ ತೆರಳಿ ನೋಡಿದಾಗ, ಬಾಲಕಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಕೂಡಲೇ ಹನುಮಂತು ಅವರನ್ನು ಸ್ಥಳಕ್ಕೆ ಕರೆಸಿದ್ದು, ಪರಿಶೀಲನೆ ವೇಳೆ ಕುತ್ತಿಗೆಯನ್ನು ಬಟ್ಟೆಯಿಂದ ಬಿಗಿದು ಸಾಯಿಸಿದ ರೀತಿ ಕಂಡುಬಂದಿದೆ. ಬಳಿಕ ಪಣಂಬೂರು ಪೊಲೀಸರು ಸ್ಥಳಕ್ಕೆ ತೆರಳಿದ್ದು, ಪರಿಶೀಲನೆ ನಡೆಸಿದ್ದಾರೆ.
ಯಾರೋ ಹೊರಗಿನವರು ಮನೆಯ ಒಳಗೆ ಬಂದು ಕೃತ್ಯ ಎಸಗಿದ್ದಾರೆ ಎನ್ನಲಾಗುತ್ತಿದೆ. ಆಕೆಯ ಮೇಲೆ ಅತ್ಯಾಚಾರ ಯತ್ನ ಆಗಿದೆಯೇ ಎನ್ನುವ ಬಗ್ಗೆ ಪೋಸ್ಟ್ ಮಾರ್ಟಂ ಪರೀಕ್ಷೆಯಲ್ಲಿ ತಿಳಿದುಬರಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಶಂಕೆಯ ಮೇರೆಗೆ ಹಲವರನ್ನು ವಿಚಾರಣೆ ನಡೆಸಲಾಗಿದ್ದು ಸುಳಿವು ಸಿಕ್ಕಿದೆ ಎಂದು ತಿಳಿಸಿದ್ದಾರೆ.
Mangalore 13 year old girl from Belagavi murdered in Jokatte. A 13-year-old girl from Belagavi was found dead with a cloth around her neck in a rental house in Jokatte, where she had been staying for the past four days for treatment of a hand injury. Prima facie, murder is suspected.
23-01-26 03:21 pm
Bangalore Correspondent
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
23-01-26 06:44 pm
HK News Desk
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
ಆಂಧ್ರದಲ್ಲಿ ಮತ್ತೆ ಬಸ್ ಬೆಂಕಿ ; ಟೈರ್ ಸ್ಫೋಟಗೊಂಡು...
22-01-26 11:26 am
24-01-26 08:14 pm
Mangaluru Staffer
ಬಹುಮುಖ ಪ್ರತಿಭೆಯ ಕಲಾವಿದ ಸ್ವಾತಿ ಸತೀಶ್ ಆತ್ಮಹತ್ಯೆ...
24-01-26 08:04 pm
ಯೆನಪೋಯ ವಿವಿಯಲ್ಲಿ ಮಾನಸಿಕ ಆರೋಗ್ಯ ನರ್ಸಿಂಗ್ ವಿಭಾಗ...
23-01-26 09:21 pm
National Conference on Neuropsychiatry Held a...
23-01-26 09:08 pm
ನಾರ್ಲ ಪಡೀಲಿನಲ್ಲಿ ಒಣ ತ್ಯಾಜ್ಯ ಸಂಸ್ಕರಣಾ ಘಟಕ ನಿರ್...
23-01-26 08:22 pm
24-01-26 02:13 pm
HK News Staffer
ಬೈಕ್ ಕದ್ದೊಯ್ಯುತ್ತಿದ್ದ ಇಬ್ಬರನ್ನು ಮರಕ್ಕೆ ಕಟ್ಟಿ...
23-01-26 09:36 pm
ಕಾವೂರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ನಕಲಿ ಚಿನ್ನ...
23-01-26 03:34 pm
29 ವರ್ಷಗಳ ಹಿಂದೆ ತಾಯಿ, ಮಗನನ್ನು ಕೊಲೆಗೈದು ಚಿನ್ನಾ...
22-01-26 10:12 pm
ಸ್ವಾಮೀಜಿಗೆ ಬ್ಲ್ಯಾಕ್ಮೇಲ್ ; ಒಂದು ಕೋಟಿಗೆ ಡಿಮ್ಯಾಂ...
22-01-26 02:40 pm