ಬ್ರೇಕಿಂಗ್ ನ್ಯೂಸ್
06-08-24 09:34 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 6: ಪಣಂಬೂರು ಠಾಣೆ ವ್ಯಾಪ್ತಿಯ ಜೋಕಟ್ಟೆ ಎಂಬಲ್ಲಿ ಬಾಡಿಗೆ ಮನೆಯಲ್ಲಿ ನೆಲೆಸಿದ್ದ 13 ವರ್ಷದ ಬಾಲಕಿಯನ್ನು ಯಾರೋ ದುರುಳರು ಬಟ್ಟೆಯಲ್ಲಿ ಕುತ್ತಿಗೆ ಬಿಗಿದು ಕೊಲೆಗೈದ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ.
ಬೆಳಗಾವಿ ಮೂಲದ ಹನುಮಂತು ಎಂಬವರು ಜೋಕಟ್ಟೆಯಲ್ಲಿ ಬಾಡಿಗೆ ಮನೆ ಮಾಡಿಕೊಂಡಿದ್ದರು. ಕೋಣಾಜೆಯ ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ಕಲಿಯುತ್ತಿದ್ದ ಇವರ ತಮ್ಮನ ಮಗಳು 13 ವರ್ಷದ ಬಾಲಕಿ ಊರಿಗೆ ಹೋಗಿ ಹಿಂತಿರುಗಿದ್ದು, ಕೈ ನೋವೆಂದು ಶಾಲೆಗೆ ಹೋಗದೆ ಇವರದೇ ಮನೆಯಲ್ಲಿ ಉಳಿದುಕೊಂಡಿದ್ದಳು. ನಾಲ್ಕು ದಿನಗಳಿಂದ ಇದೇ ಮನೆಯಲ್ಲಿ ಬಾಲಕಿ ನೆಲೆಸಿದ್ದು ಮಂಗಳವಾರ ಬೆಳಗ್ಗೆ ಹನುಮಂತು ಮತ್ತು ಇತರರು ತಮ್ಮ ಕೆಲಸಕ್ಕೆ ತೆರಳಿದ್ದರು.
ಬೆಳಗ್ಗೆ ಹತ್ತು ಗಂಟೆ ವೇಳೆಗೆ ಬಾಲಕಿಯ ತಾಯಿ ಪಕ್ಕದ ಮನೆಯವರಿಗೆ ಫೋನ್ ಮಾಡಿದ್ದು, ತನ್ನ ಮಗಳಿಗೆ ಫೋನ್ ಕೊಡುವಂತೆ ಹೇಳಿದ್ದರು. ಅದರಂತೆ, ಪಕ್ಕದ ಮನೆಯವರು ಅಲ್ಲಿಗೆ ತೆರಳಿ ನೋಡಿದಾಗ, ಬಾಲಕಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಕೂಡಲೇ ಹನುಮಂತು ಅವರನ್ನು ಸ್ಥಳಕ್ಕೆ ಕರೆಸಿದ್ದು, ಪರಿಶೀಲನೆ ವೇಳೆ ಕುತ್ತಿಗೆಯನ್ನು ಬಟ್ಟೆಯಿಂದ ಬಿಗಿದು ಸಾಯಿಸಿದ ರೀತಿ ಕಂಡುಬಂದಿದೆ. ಬಳಿಕ ಪಣಂಬೂರು ಪೊಲೀಸರು ಸ್ಥಳಕ್ಕೆ ತೆರಳಿದ್ದು, ಪರಿಶೀಲನೆ ನಡೆಸಿದ್ದಾರೆ.
ಯಾರೋ ಹೊರಗಿನವರು ಮನೆಯ ಒಳಗೆ ಬಂದು ಕೃತ್ಯ ಎಸಗಿದ್ದಾರೆ ಎನ್ನಲಾಗುತ್ತಿದೆ. ಆಕೆಯ ಮೇಲೆ ಅತ್ಯಾಚಾರ ಯತ್ನ ಆಗಿದೆಯೇ ಎನ್ನುವ ಬಗ್ಗೆ ಪೋಸ್ಟ್ ಮಾರ್ಟಂ ಪರೀಕ್ಷೆಯಲ್ಲಿ ತಿಳಿದುಬರಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಶಂಕೆಯ ಮೇರೆಗೆ ಹಲವರನ್ನು ವಿಚಾರಣೆ ನಡೆಸಲಾಗಿದ್ದು ಸುಳಿವು ಸಿಕ್ಕಿದೆ ಎಂದು ತಿಳಿಸಿದ್ದಾರೆ.
Mangalore 13 year old girl from Belagavi murdered in Jokatte. A 13-year-old girl from Belagavi was found dead with a cloth around her neck in a rental house in Jokatte, where she had been staying for the past four days for treatment of a hand injury. Prima facie, murder is suspected.
09-09-24 10:55 pm
Bangalore Correspondent
Bangalore Cafe Blast, BJP Office, NIA: ರಾಮೇಶ್...
09-09-24 10:12 pm
ಮುಂದಿನ ಸಿಎಂ ಪರಮೇಶ್ವರ್ ; ಸಿದ್ದರಾಮಯ್ಯ ಕುರಿತ ಕೋರ...
09-09-24 04:49 pm
Samyukta Karnataka, Vasant Nadiger: ನಾಡಿನ ಹಿರ...
09-09-24 12:56 pm
Chikkodi Accident, Bus: ಚಿಕ್ಕೋಡಿ ; ರಸ್ತೆ ಬದಿ...
08-09-24 05:54 pm
09-09-24 01:00 pm
HK News Desk
ಅಮೆರಿಕದಲ್ಲೂ ಟ್ರಬಲ್ ಶೂಟರ್ ಆಗ್ತಾರಾ ಡಿಕೆಶಿ ; ಚುನ...
08-09-24 11:07 pm
TMC MP Jawhar Sircar resigns: ಕೊಲ್ಕತ್ತಾ ವೈದ್ಯ...
08-09-24 02:45 pm
Vinesh Phogat, Haryanas Julana: ಜಾಟ್ ಪ್ರಾಬಲ್ಯ...
08-09-24 01:47 pm
ಐಎಎಸ್ ಪ್ರೊಬೇಷನರಿ ಅಧಿಕಾರಿ ಪೂಜಾ ಖೇಡ್ಕರ್ ಸೇವೆಯಿಂ...
07-09-24 10:44 pm
09-09-24 11:12 pm
Mangalore Correspondent
Mangalore Tulu lipi Unicode fake, Akash Jain:...
09-09-24 10:08 pm
Mangalore Tulu, Unicode: ಯುನಿಕೋಡ್ ಕೀಲಿಮಣೆಗೆ ತ...
09-09-24 05:45 pm
Mangalore Catholics, Sanghaniketan Ganeshotsa...
09-09-24 05:17 pm
Mangalore, Kinnigoli auto accident: ಕಿನ್ನಿಗೋಳ...
08-09-24 10:16 pm
07-09-24 05:45 pm
HK News Desk
Serial Killers Of Andhra Pradesh: ಸೈನೈಡ್ ಬೆರೆ...
07-09-24 03:06 pm
Puttur online fraud, Mangalore: ಸಿಆರ್ ಪಿಎಫ್ ಯ...
05-09-24 02:55 pm
Mangalore crime, Court, Murder: ದಂಪತಿಯೆಂದು ಮನ...
05-09-24 11:49 am
Uppinangady, Mangalore Crime: ನಡುರಾತ್ರಿಯಲ್ಲಿ...
04-09-24 06:33 pm