Mangalore crime, Hejamadi fight: ಹೆಜಮಾಡಿ ಟೋಲ್ ಗೇಟ್ ಸಿಬಂದಿಗೆ ಹಲ್ಲೆ ; ಬಂಟ್ವಾಳ ಮೂಲದ ಆರೋಪಿ ಬಂಧನ, ಶುಲ್ಕ ವಿಚಾರದಲ್ಲಿ ಜಗಳಗೈದು ಜೈಲು ಸೇರಿದ ಯುವಕ

07-08-24 06:21 pm       Mangalore Correspondent   ಕ್ರೈಂ

ಮೂಲ್ಕಿ ಬಳಿಯ ಹೆಜಮಾಡಿ ಟೋಲ್ ಗೇಟ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿ ಪರಾರಿಯಾಗಿದ್ದ ಆರೋಪಿಯನ್ನು ಪಡುಬಿದ್ರೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಮಂಗಳೂರು, ಆಗಸ್ಟ್.7: ಮೂಲ್ಕಿ ಬಳಿಯ ಹೆಜಮಾಡಿ ಟೋಲ್ ಗೇಟ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿ ಪರಾರಿಯಾಗಿದ್ದ ಆರೋಪಿಯನ್ನು ಪಡುಬಿದ್ರೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ದ.ಕ. ಜಿಲ್ಲೆಯ ಬಂಟ್ವಾಳ ನಿವಾಸಿ ಸಲೀಂ ಬಂಧಿತ ಆರೋಪಿ. ಮಂಗಳವಾರ ಬೆಳಗ್ಗೆ ಮುಲ್ಕಿ ಕಡೆಯಿಂದ ಕಾರಿನಲ್ಲಿ ಹೆಜಮಾಡಿ ಟೋಲ್ ಗೇಟ್ ಗೆ ಬಂದಿದ್ದ ಸಲೀಂ, ಟೋಲ್ ಶುಲ್ಕ ನೀಡದೆ ಮುಂದೆ ಸಾಗಲು ಯತ್ನಿಸಿದ್ದಾನೆ. ಶುಲ್ಕ ವಿನಾಯಿತಿ ನೀಡಲು ಅವಕಾಶ ಇಲ್ಲ ಎಂದು ಅಲ್ಲಿನ ಸಿಬಂದಿ ಹೇಳಿದಾಗ, ಕಾರನ್ನು ಅಪಾಯಕಾರಿಯಾಗಿ ಮುಂದಕ್ಕೆ ಚಲಾಯಿಸಿದ್ದಾನೆ. ಅಲ್ಲದೆ, ಗೇಟು ದಾಟಿಸಿ ಕಾರಿನಿಂದ ಇಳಿದು ಅವಾಚ್ಯವಾಗಿ ನಿಂದಿಸಿ ಸಿಬಂದಿ ದೀಕ್ಷಿತ್ ಎಂಬವರ ಮೇಲೆ ಹಲ್ಲೆ ನಡೆಸಿದ್ದಾನೆ. 

ಹಲ್ಲೆ ನಡೆಸುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಇದನ್ನು ಆಧರಿಸಿ ಟೋಲ್ ಗೇಟ್ ಸಿಬಂದಿ ದೀಕ್ಷಿತ್ ಪಡುಬಿದ್ರಿ ಪೊಲೀಸರಿಗೆ ದೂರು ನೀಡಿದ್ದಾರೆ. ಕಾರಿನ ನಂಬರ್ ಆಧರಿಸಿ ಚೆಕ್ ಮಾಡಿದಾಗ ಉಡುಪಿಯಲ್ಲಿ ನಡೆಯುತ್ತಿದ್ದ ಮದುವೆ ಹಾಲ್ ಹೊರಗಡೆ ಕಾರು ನಿಂತಿದ್ದು ಪತ್ತೆಯಾಗಿತ್ತು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪಡುಬಿದ್ರೆ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

Mangalore Hejamadi toll staff attacked over toll charges, arrested by police. The arrested has been identified as Salim from bantwal.