ಬ್ರೇಕಿಂಗ್ ನ್ಯೂಸ್
07-08-24 06:21 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್.7: ಮೂಲ್ಕಿ ಬಳಿಯ ಹೆಜಮಾಡಿ ಟೋಲ್ ಗೇಟ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿ ಪರಾರಿಯಾಗಿದ್ದ ಆರೋಪಿಯನ್ನು ಪಡುಬಿದ್ರೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ದ.ಕ. ಜಿಲ್ಲೆಯ ಬಂಟ್ವಾಳ ನಿವಾಸಿ ಸಲೀಂ ಬಂಧಿತ ಆರೋಪಿ. ಮಂಗಳವಾರ ಬೆಳಗ್ಗೆ ಮುಲ್ಕಿ ಕಡೆಯಿಂದ ಕಾರಿನಲ್ಲಿ ಹೆಜಮಾಡಿ ಟೋಲ್ ಗೇಟ್ ಗೆ ಬಂದಿದ್ದ ಸಲೀಂ, ಟೋಲ್ ಶುಲ್ಕ ನೀಡದೆ ಮುಂದೆ ಸಾಗಲು ಯತ್ನಿಸಿದ್ದಾನೆ. ಶುಲ್ಕ ವಿನಾಯಿತಿ ನೀಡಲು ಅವಕಾಶ ಇಲ್ಲ ಎಂದು ಅಲ್ಲಿನ ಸಿಬಂದಿ ಹೇಳಿದಾಗ, ಕಾರನ್ನು ಅಪಾಯಕಾರಿಯಾಗಿ ಮುಂದಕ್ಕೆ ಚಲಾಯಿಸಿದ್ದಾನೆ. ಅಲ್ಲದೆ, ಗೇಟು ದಾಟಿಸಿ ಕಾರಿನಿಂದ ಇಳಿದು ಅವಾಚ್ಯವಾಗಿ ನಿಂದಿಸಿ ಸಿಬಂದಿ ದೀಕ್ಷಿತ್ ಎಂಬವರ ಮೇಲೆ ಹಲ್ಲೆ ನಡೆಸಿದ್ದಾನೆ.
ಹಲ್ಲೆ ನಡೆಸುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಇದನ್ನು ಆಧರಿಸಿ ಟೋಲ್ ಗೇಟ್ ಸಿಬಂದಿ ದೀಕ್ಷಿತ್ ಪಡುಬಿದ್ರಿ ಪೊಲೀಸರಿಗೆ ದೂರು ನೀಡಿದ್ದಾರೆ. ಕಾರಿನ ನಂಬರ್ ಆಧರಿಸಿ ಚೆಕ್ ಮಾಡಿದಾಗ ಉಡುಪಿಯಲ್ಲಿ ನಡೆಯುತ್ತಿದ್ದ ಮದುವೆ ಹಾಲ್ ಹೊರಗಡೆ ಕಾರು ನಿಂತಿದ್ದು ಪತ್ತೆಯಾಗಿತ್ತು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪಡುಬಿದ್ರೆ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
Mangalore Hejamadi toll staff attacked over toll charges, arrested by police. The arrested has been identified as Salim from bantwal.
19-02-26 09:29 pm
mangalore
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
19-02-26 11:04 pm
mangalore
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
19-02-26 10:37 pm
mangalore
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
ನೇತ್ರಾವತಿ ಸೇತುವೆ ಆವರಣ ಗೋಡೆಗೆ ಅಪ್ಪಳಿಸಿದ ಮಿನಿ ಟ...
19-02-26 05:38 pm
ಬೆಳ್ತಂಗಡಿ : ಮಕ್ಕಳು ಕ್ರಿಕೆಟ್ ಆಡುತ್ತಿದ್ದಾಗ ನಿಗೂ...
19-02-26 04:09 pm
20-02-26 11:31 am
Mangalore Correspondent
Mangalore CCB Police, Rowdy Safwan Hussain: ದ...
18-02-26 09:16 pm
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm