ಬ್ರೇಕಿಂಗ್ ನ್ಯೂಸ್
07-08-24 09:01 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್.7: ನಗರ ಹೊರವಲಯದ ಜೋಕಟ್ಟೆಯಲ್ಲಿ 14 ವರ್ಷದ ಬಾಲಕಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪಣಂಬೂರು ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಅತ್ಯಾಚಾರಕ್ಕೆ ಯತ್ನಿಸಿ ಕೊಲೆ ಮಾಡಿದ್ದಾನೆ ಎಂಬ ವಿಚಾರವನ್ನು ಪತ್ತೆ ಮಾಡಿದ್ದಾರೆ.
ಬೆಳಗಾವಿ ಜಿಲ್ಲೆ ಹಂಚಿನಾಳ ಗ್ರಾಮದ ಫಕೀರಪ್ಪ ಹಣಮಪ್ಪ ಮಾದರ (51) ಬಂಧಿತ ವ್ಯಕ್ತಿ. ಈತ ಮಂಗಳೂರಿನಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದು, ಜೋಕಟ್ಟೆಯ ಬಾಡಿಗೆ ಮನೆಯಲ್ಲಿ ವಾಸವಿದ್ದ. ಮಂಗಳವಾರ ಬೆಳಗ್ಗೆ 14 ವರ್ಷದ ಬಾಲಕಿ ಒಬ್ಬಂಟಿ ಇರುವುದನ್ನು ತಿಳಿದು ಆಕೆಯನ್ನು ಬಲವಂತದಿಂದ ಅತ್ಯಾಚಾರಕ್ಕೆ ಯತ್ನಿಸಿದ್ದ. ಆಕೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ಕುತ್ತಿಗೆ ಹಿಸುಕಿ ಕೊಲೆ ಮಾಡಿದ್ದಾನೆ.
ಬಾಲಕಿ ಕೊಣಾಜೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಏಳನೇ ತರಗತಿ ವಿದ್ಯಾರ್ಥಿನಿಯಾಗಿದ್ದು, ಕೈ ನೋವೆಂದು ಚಿಕಿತ್ಸೆಗಾಗಿ ಜೋಕಟ್ಟೆಯಲ್ಲಿರುವ ತನ್ನ ಚಿಕ್ಕಪ್ಪ ಹನುಮಂತು ಅವರ ಮನೆಗೆ ಬಂದು ಉಳಿದುಕೊಂಡಿದ್ದಳು. ನಿನ್ನೆ ಬೆಳಗ್ಗೆ ಚಿಕ್ಕಪ್ಪ ಹನುಮಂತು ಮತ್ತು ಮನೆಯಲ್ಲಿದ್ದ ಇತರರು ಕೆಲಸಕ್ಕೆ ಹೋಗಿದ್ದರು. ಹುಡುಗಿ ಒಬ್ಬಂಟಿಯಾಗೇ ಇದ್ದಳು. ಇದೇ ವೇಳೆ, ಬೆಳಗಾವಿಯಲ್ಲಿರುವ ಬಾಲಕಿಯ ತಾಯಿ ಪಕ್ಕದ ಮನೆಯವರಿಗೆ ಫೋನ್ ಮಾಡಿ ಮಗಳಿಗೆ ಕೊಡುವಂತೆ ಹೇಳಿದ್ದರು. ಪಕ್ಕದ ಮನೆಯವರು ಬಂದು ನೋಡಿದಾಗ ಬಾಲಕಿಯನ್ನು ಕುತ್ತಿಗೆ ಬಿಗಿದು ಕೊಲೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ಬಾಲಕಿ ಕುಟುಂಬಸ್ಥರು ಬೆಳಗಾವಿ ಮೂಲದವಳೇ ಆಗಿದ್ದಾಳೆ.
ಪಣಂಬೂರು ಪೊಲೀಸರು ಮೇಲ್ನೋಟಕ್ಕೆ ಕೊಲೆಗೈದಿರುವುದನ್ನು ತಿಳಿದು ಕೊಲೆ ಪ್ರಕರಣ ದಾಖಲಿಸಿದ್ದರು. ಆಸುಪಾಸಿನವರನ್ನು ವಿಚಾರಣೆ ನಡೆಸಿದಾಗ, ಕೊಲೆ ಸುಳಿವು ಸಿಕ್ಕಿತ್ತು. ವಿಚಾರಣೆ ನಡೆಸಿದಾಗ ಆರೋಪಿ ಫಕೀರಪ್ಪ ಕೃತ್ಯ ಎಸಗಿರುವುದು ಕಂಡುಬಂದಿದೆ. ಫಕೀರಪ್ಪ ಆರು ತಿಂಗಳಿನಿಂದ ಜೋಕಟ್ಟೆ ಪರಿಸರದಲ್ಲಿ ಕೂಲಿ ಕಾರ್ಮಿಕನಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
The Panambur police arrested a 51-year-old accused, in connection with the murder of a 14-year-old girl from Belagavi in Jokatte. A complaint was filed by the girl's uncle, after she was found strangled to death on August 6 at around 10:30 am and a case had been registered at Panambur Police Station under Crime No. 67/2024.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm