ಬ್ರೇಕಿಂಗ್ ನ್ಯೂಸ್
07-08-24 09:01 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್.7: ನಗರ ಹೊರವಲಯದ ಜೋಕಟ್ಟೆಯಲ್ಲಿ 14 ವರ್ಷದ ಬಾಲಕಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪಣಂಬೂರು ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಅತ್ಯಾಚಾರಕ್ಕೆ ಯತ್ನಿಸಿ ಕೊಲೆ ಮಾಡಿದ್ದಾನೆ ಎಂಬ ವಿಚಾರವನ್ನು ಪತ್ತೆ ಮಾಡಿದ್ದಾರೆ.
ಬೆಳಗಾವಿ ಜಿಲ್ಲೆ ಹಂಚಿನಾಳ ಗ್ರಾಮದ ಫಕೀರಪ್ಪ ಹಣಮಪ್ಪ ಮಾದರ (51) ಬಂಧಿತ ವ್ಯಕ್ತಿ. ಈತ ಮಂಗಳೂರಿನಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದು, ಜೋಕಟ್ಟೆಯ ಬಾಡಿಗೆ ಮನೆಯಲ್ಲಿ ವಾಸವಿದ್ದ. ಮಂಗಳವಾರ ಬೆಳಗ್ಗೆ 14 ವರ್ಷದ ಬಾಲಕಿ ಒಬ್ಬಂಟಿ ಇರುವುದನ್ನು ತಿಳಿದು ಆಕೆಯನ್ನು ಬಲವಂತದಿಂದ ಅತ್ಯಾಚಾರಕ್ಕೆ ಯತ್ನಿಸಿದ್ದ. ಆಕೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ಕುತ್ತಿಗೆ ಹಿಸುಕಿ ಕೊಲೆ ಮಾಡಿದ್ದಾನೆ.
ಬಾಲಕಿ ಕೊಣಾಜೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಏಳನೇ ತರಗತಿ ವಿದ್ಯಾರ್ಥಿನಿಯಾಗಿದ್ದು, ಕೈ ನೋವೆಂದು ಚಿಕಿತ್ಸೆಗಾಗಿ ಜೋಕಟ್ಟೆಯಲ್ಲಿರುವ ತನ್ನ ಚಿಕ್ಕಪ್ಪ ಹನುಮಂತು ಅವರ ಮನೆಗೆ ಬಂದು ಉಳಿದುಕೊಂಡಿದ್ದಳು. ನಿನ್ನೆ ಬೆಳಗ್ಗೆ ಚಿಕ್ಕಪ್ಪ ಹನುಮಂತು ಮತ್ತು ಮನೆಯಲ್ಲಿದ್ದ ಇತರರು ಕೆಲಸಕ್ಕೆ ಹೋಗಿದ್ದರು. ಹುಡುಗಿ ಒಬ್ಬಂಟಿಯಾಗೇ ಇದ್ದಳು. ಇದೇ ವೇಳೆ, ಬೆಳಗಾವಿಯಲ್ಲಿರುವ ಬಾಲಕಿಯ ತಾಯಿ ಪಕ್ಕದ ಮನೆಯವರಿಗೆ ಫೋನ್ ಮಾಡಿ ಮಗಳಿಗೆ ಕೊಡುವಂತೆ ಹೇಳಿದ್ದರು. ಪಕ್ಕದ ಮನೆಯವರು ಬಂದು ನೋಡಿದಾಗ ಬಾಲಕಿಯನ್ನು ಕುತ್ತಿಗೆ ಬಿಗಿದು ಕೊಲೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ಬಾಲಕಿ ಕುಟುಂಬಸ್ಥರು ಬೆಳಗಾವಿ ಮೂಲದವಳೇ ಆಗಿದ್ದಾಳೆ.
ಪಣಂಬೂರು ಪೊಲೀಸರು ಮೇಲ್ನೋಟಕ್ಕೆ ಕೊಲೆಗೈದಿರುವುದನ್ನು ತಿಳಿದು ಕೊಲೆ ಪ್ರಕರಣ ದಾಖಲಿಸಿದ್ದರು. ಆಸುಪಾಸಿನವರನ್ನು ವಿಚಾರಣೆ ನಡೆಸಿದಾಗ, ಕೊಲೆ ಸುಳಿವು ಸಿಕ್ಕಿತ್ತು. ವಿಚಾರಣೆ ನಡೆಸಿದಾಗ ಆರೋಪಿ ಫಕೀರಪ್ಪ ಕೃತ್ಯ ಎಸಗಿರುವುದು ಕಂಡುಬಂದಿದೆ. ಫಕೀರಪ್ಪ ಆರು ತಿಂಗಳಿನಿಂದ ಜೋಕಟ್ಟೆ ಪರಿಸರದಲ್ಲಿ ಕೂಲಿ ಕಾರ್ಮಿಕನಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
The Panambur police arrested a 51-year-old accused, in connection with the murder of a 14-year-old girl from Belagavi in Jokatte. A complaint was filed by the girl's uncle, after she was found strangled to death on August 6 at around 10:30 am and a case had been registered at Panambur Police Station under Crime No. 67/2024.
19-02-26 09:29 pm
mangalore
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
19-02-26 11:04 pm
mangalore
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
19-02-26 10:37 pm
mangalore
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
ನೇತ್ರಾವತಿ ಸೇತುವೆ ಆವರಣ ಗೋಡೆಗೆ ಅಪ್ಪಳಿಸಿದ ಮಿನಿ ಟ...
19-02-26 05:38 pm
ಬೆಳ್ತಂಗಡಿ : ಮಕ್ಕಳು ಕ್ರಿಕೆಟ್ ಆಡುತ್ತಿದ್ದಾಗ ನಿಗೂ...
19-02-26 04:09 pm
20-02-26 11:31 am
Mangalore Correspondent
Mangalore CCB Police, Rowdy Safwan Hussain: ದ...
18-02-26 09:16 pm
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm