ಬ್ರೇಕಿಂಗ್ ನ್ಯೂಸ್
12-08-24 09:37 pm Bangalore Correspondent ಕ್ರೈಂ
ಬೆಂಗಳೂರು, ಆ.13: ಆನ್ಲೈನ್ ವಂಚನೆಯಲ್ಲಿ ಹಣ ಕಳೆದುಕೊಂಡರೆ ಮತ್ತೆ ವಾಪಸ್ ಬರುವುದು ತೀರಾ ಅಪರೂಪ. ಆದರೆ, ಇಲ್ಲೊಂದು ಪ್ರಕರಣದಲ್ಲಿ ಬೆಂಗಳೂರು ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಹೆಚ್ಚಿನ ಹಣವನ್ನು ವಸೂಲಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ಬೆಂಗಳೂರಿನ ಟೆಕ್ಕಿ ದಂಪತಿ ಆನ್ಲೈನ್ ವಂಚನೆಯೊಂದರಲ್ಲಿ 1.53 ಕೋಟಿ ರೂ. ಕಳೆದುಕೊಂಡಿದ್ದರು. ಇದರಲ್ಲಿ ಹೆಚ್ಚಿನ ಹಣವನ್ನು ಅಂದರೆ 1.40 ಕೋಟಿ ರೂ.ಗಳನ್ನು 50ಕ್ಕೂ ಹೆಚ್ಚು ಖಾತೆಗಳಿಂದ ಪೊಲೀಸರು ವಸೂಲಿ ಮಾಡಿಕೊಟ್ಟಿದ್ದಾರೆ.
ಪೂರ್ವ ವಲಯದ ಸೈಬರ್ ಕ್ರೈಮ್ ಪೊಲೀಸರು ಆನ್ಲೈನ್ ಹೂಡಿಕೆ ಸ್ಕ್ಯಾಮ್ನಲ್ಲಿ ಹಣ ಕಳೆದುಕೊಂಡಿದ್ದ ಸಾಫ್ಟ್ವೇರ್ ಇಂಜಿನಿಯರ್ ದಂಪತಿಯ ಹಣವನ್ನು ವಸೂಲಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ಬೆಂಗಳೂರಿನ ಬಾಣಸವಾಡಿಯಲ್ಲಿ ವಾಸಿಸುತ್ತಿರುವ ದಂಪತಿಗೆ ವಂಚಕನೊಬ್ಬ ಹೆಚ್ಚಿನ ಲಾಭದ ಆಸೆ ತೋರಿಸಿದ್ದ. ಇದನ್ನು ನಂಬಿ ದಂಪತಿ ಈತನ ವಂಚನೆ ಜಾಲಕ್ಕೆ ಬಿದ್ದಿದ್ದರು. ಬ್ರಿಟನ್ನಲ್ಲಿ ಕುಳಿತೇ ಈ ವಂಚನೆ ಜಾಲವನ್ನು ನಡೆಸುತ್ತಿದ್ದ ಈತ ಹಣ ಸ್ವೀಕರಿಸಲು ಉತ್ತರ ಭಾರತೀಯರ ಒಂದಿಷ್ಟು ಖಾತೆಗಳನ್ನು ಬಾಡಿಗೆಗೆ ಪಡೆದಿದ್ದ.
ಅಷ್ಟೇ ಅಲ್ಲ ಹೂಡಿಕೆ ನಿಜ ಎಂದು ಬಿಂಬಿಸಲು ಈತ ನಕಲಿ ವೆಬ್ಸೈಟ್ ಒಂದು ತೆರೆದು, ಇದರ ಆಕ್ಸೆಸ್ ಕೂಡ ನೀಡಿದ್ದ. ಇದರಲ್ಲಿ ತಮ್ಮ ಹೂಡಿಕೆ ಬೆಳೆಯುತ್ತಿರುವುದನ್ನು ಕಂಡು ದಂಪತಿ ಖುಷಿಯಾಗಿದ್ದರು. ಕೆಲವು ತಿಂಗಳ ನಂತರ ಒಂದಿಷ್ಟು ಹಣವನ್ನು ಹಿಂಪಡೆಯಲು ನೋಡಿದರೆ, ಹಣ ತೆಗೆಯಲು ಆಗುತ್ತಿರಲಿಲ್ಲ. ಅಷ್ಟೇ ಅಲ್ಲ ನಕಲಿ ವೆಬ್ಸೈಟ್ನ ಆಕ್ಸೆಸ್ ಕೂಡ ಹೋಯ್ತು. ಕೊನೆಗೆ ಅವರನ್ನು ಆ ವೆಬ್ಸೈಟ್ ಬ್ಲಾಕೇ ಮಾಡಿತು. ಅಷ್ಟೊತ್ತಿಗೆ ತಾವು ವಂಚನೆಗೆ ಸಿಲುಕಿರುವುದು ದಂಪತಿಗೆ ತಿಳಿಯಿತು.
ಆಗ ದಂಪತಿ ಹೋಗಿ ಪೊಲೀಸರಿಗೆ ದೂರು ನೀಡಿದರು. ಪೊಲೀಸರು ತನಿಖೆ ಆರಂಭಿಸಿದ್ದಲ್ಲದೆ ಬ್ಯಾಂಕ್ ಅಧಿಕಾರಿಗಳ ಜೊತೆ ಸೇರಿ ಈ ವಂಚನೆ ಜಾಲವನ್ನು ಪತ್ತೆ ಹಚ್ಚಿದರು. ಈ ಹಗರಣದಲ್ಲಿ ಭಾಗಿಯಾಗಿದ್ದ 50ಕ್ಕೂ ಹೆಚ್ಚು ಖಾತೆಗಳನ್ನು ಬ್ಲಾಕ್ ಮಾಡಿದರು. ತಕ್ಷಣ ಕಾರ್ಯಪ್ರವೃತ್ತವಾಗಿದ್ದರಿಂದ ಒಂದಿಷ್ಟು ಮೊತ್ತ ವಾಪಸ್ ಪಡೆಯಲು ಸಾಧ್ಯವಾಯಿತು.
A tech industry couple from Bengaluru has managed to recover a significant portion of the money they lost in an online trading scam, thanks to the quick action of the local police. The East Division Cybercrime Police in Bengaluru successfully reclaimed Rs 1.4 crore out of the Rs 1.53 crore that had been swindled from the couple.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm