ಬ್ರೇಕಿಂಗ್ ನ್ಯೂಸ್
12-08-24 09:37 pm Bangalore Correspondent ಕ್ರೈಂ
ಬೆಂಗಳೂರು, ಆ.13: ಆನ್ಲೈನ್ ವಂಚನೆಯಲ್ಲಿ ಹಣ ಕಳೆದುಕೊಂಡರೆ ಮತ್ತೆ ವಾಪಸ್ ಬರುವುದು ತೀರಾ ಅಪರೂಪ. ಆದರೆ, ಇಲ್ಲೊಂದು ಪ್ರಕರಣದಲ್ಲಿ ಬೆಂಗಳೂರು ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಹೆಚ್ಚಿನ ಹಣವನ್ನು ವಸೂಲಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ಬೆಂಗಳೂರಿನ ಟೆಕ್ಕಿ ದಂಪತಿ ಆನ್ಲೈನ್ ವಂಚನೆಯೊಂದರಲ್ಲಿ 1.53 ಕೋಟಿ ರೂ. ಕಳೆದುಕೊಂಡಿದ್ದರು. ಇದರಲ್ಲಿ ಹೆಚ್ಚಿನ ಹಣವನ್ನು ಅಂದರೆ 1.40 ಕೋಟಿ ರೂ.ಗಳನ್ನು 50ಕ್ಕೂ ಹೆಚ್ಚು ಖಾತೆಗಳಿಂದ ಪೊಲೀಸರು ವಸೂಲಿ ಮಾಡಿಕೊಟ್ಟಿದ್ದಾರೆ.
ಪೂರ್ವ ವಲಯದ ಸೈಬರ್ ಕ್ರೈಮ್ ಪೊಲೀಸರು ಆನ್ಲೈನ್ ಹೂಡಿಕೆ ಸ್ಕ್ಯಾಮ್ನಲ್ಲಿ ಹಣ ಕಳೆದುಕೊಂಡಿದ್ದ ಸಾಫ್ಟ್ವೇರ್ ಇಂಜಿನಿಯರ್ ದಂಪತಿಯ ಹಣವನ್ನು ವಸೂಲಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ಬೆಂಗಳೂರಿನ ಬಾಣಸವಾಡಿಯಲ್ಲಿ ವಾಸಿಸುತ್ತಿರುವ ದಂಪತಿಗೆ ವಂಚಕನೊಬ್ಬ ಹೆಚ್ಚಿನ ಲಾಭದ ಆಸೆ ತೋರಿಸಿದ್ದ. ಇದನ್ನು ನಂಬಿ ದಂಪತಿ ಈತನ ವಂಚನೆ ಜಾಲಕ್ಕೆ ಬಿದ್ದಿದ್ದರು. ಬ್ರಿಟನ್ನಲ್ಲಿ ಕುಳಿತೇ ಈ ವಂಚನೆ ಜಾಲವನ್ನು ನಡೆಸುತ್ತಿದ್ದ ಈತ ಹಣ ಸ್ವೀಕರಿಸಲು ಉತ್ತರ ಭಾರತೀಯರ ಒಂದಿಷ್ಟು ಖಾತೆಗಳನ್ನು ಬಾಡಿಗೆಗೆ ಪಡೆದಿದ್ದ.
ಅಷ್ಟೇ ಅಲ್ಲ ಹೂಡಿಕೆ ನಿಜ ಎಂದು ಬಿಂಬಿಸಲು ಈತ ನಕಲಿ ವೆಬ್ಸೈಟ್ ಒಂದು ತೆರೆದು, ಇದರ ಆಕ್ಸೆಸ್ ಕೂಡ ನೀಡಿದ್ದ. ಇದರಲ್ಲಿ ತಮ್ಮ ಹೂಡಿಕೆ ಬೆಳೆಯುತ್ತಿರುವುದನ್ನು ಕಂಡು ದಂಪತಿ ಖುಷಿಯಾಗಿದ್ದರು. ಕೆಲವು ತಿಂಗಳ ನಂತರ ಒಂದಿಷ್ಟು ಹಣವನ್ನು ಹಿಂಪಡೆಯಲು ನೋಡಿದರೆ, ಹಣ ತೆಗೆಯಲು ಆಗುತ್ತಿರಲಿಲ್ಲ. ಅಷ್ಟೇ ಅಲ್ಲ ನಕಲಿ ವೆಬ್ಸೈಟ್ನ ಆಕ್ಸೆಸ್ ಕೂಡ ಹೋಯ್ತು. ಕೊನೆಗೆ ಅವರನ್ನು ಆ ವೆಬ್ಸೈಟ್ ಬ್ಲಾಕೇ ಮಾಡಿತು. ಅಷ್ಟೊತ್ತಿಗೆ ತಾವು ವಂಚನೆಗೆ ಸಿಲುಕಿರುವುದು ದಂಪತಿಗೆ ತಿಳಿಯಿತು.
ಆಗ ದಂಪತಿ ಹೋಗಿ ಪೊಲೀಸರಿಗೆ ದೂರು ನೀಡಿದರು. ಪೊಲೀಸರು ತನಿಖೆ ಆರಂಭಿಸಿದ್ದಲ್ಲದೆ ಬ್ಯಾಂಕ್ ಅಧಿಕಾರಿಗಳ ಜೊತೆ ಸೇರಿ ಈ ವಂಚನೆ ಜಾಲವನ್ನು ಪತ್ತೆ ಹಚ್ಚಿದರು. ಈ ಹಗರಣದಲ್ಲಿ ಭಾಗಿಯಾಗಿದ್ದ 50ಕ್ಕೂ ಹೆಚ್ಚು ಖಾತೆಗಳನ್ನು ಬ್ಲಾಕ್ ಮಾಡಿದರು. ತಕ್ಷಣ ಕಾರ್ಯಪ್ರವೃತ್ತವಾಗಿದ್ದರಿಂದ ಒಂದಿಷ್ಟು ಮೊತ್ತ ವಾಪಸ್ ಪಡೆಯಲು ಸಾಧ್ಯವಾಯಿತು.
A tech industry couple from Bengaluru has managed to recover a significant portion of the money they lost in an online trading scam, thanks to the quick action of the local police. The East Division Cybercrime Police in Bengaluru successfully reclaimed Rs 1.4 crore out of the Rs 1.53 crore that had been swindled from the couple.
02-01-26 06:09 pm
HK News Desk
Ballari Banner Fight, FIR, Death: ಬ್ಯಾನರ್ ವಿಚ...
02-01-26 04:13 pm
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
02-01-26 02:02 pm
Mangalore Correspondent
Dr Vinaya Hegde Death, NItte Mangalore: ನಿಟ್ಟ...
01-01-26 09:43 am
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm