ಬ್ರೇಕಿಂಗ್ ನ್ಯೂಸ್
14-08-24 04:43 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್.14: ರೌಡಿಶೀಟರ್ ಕಡಪ್ಪರ ಸಮೀರ್ ಕೊಲೆ ಪ್ರಕರಣ ಸಂಬಂಧಿಸಿ ಉಳ್ಳಾಲ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿರುವುದನ್ನು ಪೊಲೀಸ್ ಕಮಿಷನರ್ ಖಚಿತಪಡಿಸಿದ್ದಾರೆ. ನಾಲ್ವರನ್ನು ಬಂಧಿಸಲಾಗಿದೆ ಎನ್ನುವುದು ಮಂಗಳವಾರ ಬೆಳಗ್ಗೆಯೇ ತಿಳಿದುಬಂದಿತ್ತು. ಆದರೆ, ಪೊಲೀಸರು ಅದನ್ನು ಖಚಿತಪಡಿಸಿರಲಿಲ್ಲ.
ಉಳ್ಳಾಲದ ಕಿನ್ಯಾ ನಿವಾಸಿ ನಿಯಾಸ್, ಸುರತ್ಕಲ್ ಕಾಟಿಪಳ್ಳದ ಮಹಮ್ಮದ್ ನೌಶಾದ್, ಮಂಗಳೂರು ಬಜಾಲ್ ನಿವಾಸಿ ತನ್ವೀರ್, ಉಡುಪಿ ಕಾಪು ನಿವಾಸಿ ಮಹಮ್ಮದ್ ಇಕ್ಬಾಲ್ ಬಂಧಿತರು. ದರೋಡೆಗೆ ಸಂಚು ಪ್ರಕರಣದಲ್ಲಿ ಬಂಧಿತನಾಗಿ ಮಂಗಳೂರು ಜೈಲಿನಲ್ಲಿದ್ದ ಕಡಪ್ಪರ ಸಮೀರ್ ವಾರದ ಹಿಂದಷ್ಟೇ ಜೈಲಿನಿಂದ ಜಾಮೀನಿನಲ್ಲಿ ಬಿಡುಗಡೆಯಾಗಿದ್ದ. ಮೊನ್ನೆ ಆಗಸ್ಟ್ 11ರ ಭಾನುವಾರ ರಾತ್ರಿ ತನ್ನ ಪತ್ನಿ ಮತ್ತು ತಾಯಿ ಜೊತೆಗೆ ಕಾರಿನಲ್ಲಿ ತಮ್ಮನ ಗೋರಿಗುಡ್ಡೆಯ ಮನೆಗೆ ತೆರಳುತ್ತಿದ್ದಾಗ ಆಪ್ತನೊಬ್ಬನ ಕರೆ ಬಂತೆಂದು ಕಲ್ಲಾಪಿನಲ್ಲಿ ನಿಲ್ಲಿಸಿದ್ದ. ಅಷ್ಟರಲ್ಲಿ ಹಿಂದಿನಿಂದ ಬಂದಿದ್ದ ಕಾರಿನಿಂದ ಇಳಿದ ನಾಲ್ವರು ಹಂತಕರು ತಲವಾರಿನಲ್ಲಿ ದಾಳಿ ನಡೆಸಿ, ಸಮೀರನನ್ನು ಹತ್ಯೆ ಮಾಡಿದ್ದರು.

ಮೇಲ್ನೋಟಕ್ಕೆ 2018ರಲ್ಲಿ ಕೊಲೆಯಾಗಿದ್ದ ಉಳ್ಳಾಲದ ನಟೋರಿಯಸ್ ರೌಡಿ ಟಾರ್ಗೆಟ್ ಇಲ್ಯಾಸ್ ಕೊಲೆಗೆ ಪ್ರತೀಕಾರ ಎಂದು ಹೇಳಲಾಗುತ್ತಿದ್ದರೂ, ಯಾವ ಕಾರಣಕ್ಕೆ ಆಗಿದೆಯೆನ್ನುವುದನ್ನು ಪೊಲೀಸರು ತಿಳಿಸಿಲ್ಲ. ಟಾರ್ಗೆಟ್ ಇಲ್ಯಾಸ್ ಕೊಲೆಗೆ ಪ್ರತೀಕಾರ ತೀರಿಸಲು ಆರು ವರ್ಷ ಯಾಕೆ ಕಾಯಬೇಕಾಯ್ತು ಅನ್ನುವ ಪ್ರಶ್ನೆ ಎದುರಾಗಿದೆ. ಆದರೆ, ಪತ್ನಿ ನೀಡಿರುವ ದೂರಿನಲ್ಲಿ ಕೊನೆಯ ಬಾರಿಗೆ ಆಪ್ತನೊಬ್ಬ ಕರೆ ಮಾಡಿ, ಕಲ್ಲಾಪಿನಲ್ಲಿ ಕಾರು ನಿಲ್ಲಿಸಲು ಹೇಳಿದ್ದ ಎನ್ನುವ ಅಂಶ ಇದೆ. ಕರೆ ಮಾಡಿದ ಆಪ್ತ ಯಾರು ಎನ್ನುವುದು ಪೊಲೀಸರಿಗೆ ತಿಳಿದಿದ್ದರೂ, ಕೊಲೆ ಪ್ರಕರಣದಲ್ಲಿ ಆತನ ಪಾತ್ರ ಏನು ಅನ್ನುವುದು ದೃಢವಾಗಿಲ್ಲ. ಪೊಲೀಸರು ಈಗ ನಾಲ್ವರನ್ನು ಬಂಧಿಸಿ, ಕೊಲೆ ಹಿಂದಿನ ಕಾರಣ ಪತ್ತೆ ಮಾಡುತ್ತಿದ್ದಾರೆ.
ರೌಡಿ ಸಮೀರ್ ಜೈಲಿನಲ್ಲಿದ್ದಾಗ ಜುಲೈ 1ರಂದು ಸಹ ಕೈದಿಗಳೇ ಹಲ್ಲೆ ನಡೆಸಿದ್ದರು. ಟೋಪಿ ವಾಲಾ ಮತ್ತು ತಲ್ಲತ್ ಗ್ಯಾಂಗ್ ಸದಸ್ಯರು ಈ ಹಲ್ಲೆ ನಡೆಸಿದ್ದರು ಎನ್ನೋದು ತಿಳಿದುಬಂದಿದ್ದ ಮಾಹಿತಿ. ಸಮೀರ್ ಈ ಹಿಂದೆ ಗೋಲ್ಡ್ ಸ್ಮಗ್ಲಿಂಗ್ ನಡೆಸುತ್ತಿದ್ದ ಬ್ರೋಕರುಗಳನ್ನು ಹಿಡಿದಿಟ್ಟು ಕಾಸು ಮಾಡಿಕೊಂಡಿದ್ದ ಎನ್ನುವ ಆರೋಪಗಳಿದ್ದು, ಅದೇ ಕಾರಣಕ್ಕೆ ಕೊಲೆಯಾಗಿದೆ ಎನ್ನುವುದು ಕೆಲವರಿಂದ ತಿಳಿದುಬಂದ ಮಾಹಿತಿ. ಈ ಬಗ್ಗೆ ಪೊಲೀಸರು ಇನ್ನೂ ದೃಢಪಡಿಸಿಲ್ಲ. ಬಂಧಿತರಲ್ಲಿ ಮೊಹಮ್ಮದ್ ನೌಶಾದ್, ಟಾರ್ಗೆಟ್ ಇಲ್ಯಾಸ್ ಪತ್ನಿಯ ಸೋದರನಾಗಿದ್ದು, ಮೊದಲ ಬಾರಿಗೆ ಅಪರಾಧ ಚಟುವಟಿಕೆಯಲ್ಲಿ ಕಾಣಿಸಿಕೊಂಡಿದ್ದಾನೆ. ಸಮೀರ್ ಬಗ್ಗೆ ದ್ವೇಷ ಇದ್ದವರು ಇಲ್ಯಾಸ್ ಕೊಲೆಯ ಪೂರ್ವ ದ್ವೇಷದಲ್ಲಿದ್ದವರನ್ನು ಛೂಬಿಟ್ಟು ಬೇಳೆ ಬೇಯಿಸಿಕೊಂಡಿದ್ದಾರೆ ಎನ್ನುವ ಶಂಕೆ ಪ್ರಬಲವಾಗಿದೆ.
Mangalore Target Ilyas VS Ullal Sameer Murder case, police arrest four accused, hold gold case information to media. The investigation has revealed that the killing was an act of retaliation for the earlier murder of Ilyas, with Sameer's death being orchestrated by Mohammad Naushad, the brother-in-law of Ilyas.
19-02-26 09:29 pm
mangalore
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
19-02-26 11:04 pm
mangalore
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
19-02-26 10:37 pm
mangalore
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
ನೇತ್ರಾವತಿ ಸೇತುವೆ ಆವರಣ ಗೋಡೆಗೆ ಅಪ್ಪಳಿಸಿದ ಮಿನಿ ಟ...
19-02-26 05:38 pm
ಬೆಳ್ತಂಗಡಿ : ಮಕ್ಕಳು ಕ್ರಿಕೆಟ್ ಆಡುತ್ತಿದ್ದಾಗ ನಿಗೂ...
19-02-26 04:09 pm
20-02-26 11:31 am
Mangalore Correspondent
Mangalore CCB Police, Rowdy Safwan Hussain: ದ...
18-02-26 09:16 pm
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm