ಬ್ರೇಕಿಂಗ್ ನ್ಯೂಸ್
14-08-24 10:32 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 14: ಅಕ್ರಮವಾಗಿ ಸಿಮ್ ಕಾರ್ಡ್ ಗಳನ್ನು ಸಂಗ್ರಹಿಸಿ ಸೈಬರ್ ವಂಚಕರಿಗೆ ಒದಗಿಸುತ್ತಿದ್ದ ಇಬ್ಬರು ಯುವಕರನ್ನು ಮಂಗಳೂರಿನ ಸೈಬರ್ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಇವರಿಂದ 86 ಸಿಮ್ ಕಾರ್ಡ್ ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೆಳ್ತಂಗಡಿ ನಿವಾಸಿಗಳಾದ ಶಹಾದ್ ಮಹಮ್ಮದ್ ಸಮರ್ (21) ಮತ್ತು ಮೊಹಮ್ಮದ್ ಅಜೀಮ್ (19) ಬಂಧಿತರು. ಶಹಾದ್ ಮಂಗಳೂರಿನ ಯೆನಪೋಯ ಮೆಡಿಕಲ್ ಕಾಲೇಜಿನಲ್ಲಿ ಕೊನೆಯ ವರ್ಷದ ಬಿಬಿಎ ಓದುತ್ತಿದ್ದ. ಅಜೀಮ್ ಹತ್ತನೇ ಕ್ಲಾಸಿನಲ್ಲಿ ಶಿಕ್ಷಣ ಕೊನೆಗೊಳಿಸಿದ್ದು, ಮೊಬೈಲ್ ಅಂಗಡಿ, ಸಿಮ್ ಸಂಗ್ರಹ ಕೆಲಸದಲ್ಲಿ ತೊಡಗಿದ್ದನು. ಇವರು ತಮ್ಮ ಸ್ನೇಹಿತರು, ಪರಿಚಿತರ ಮೂಲಕ ಸಿಮ್ ಗಳನ್ನು ಮಾಡಿಸಿ, ಅವರಿಂದ 200 ರೂ.ಗೆ ಖರೀದಿಸುತ್ತಿದ್ದರು. ಅದನ್ನು ಬಳಿಕ ಮಡಂತ್ಯಾರಿನ ಸಾಜಿದ್ ಮತ್ತು ಬೆಳ್ತಂಗಡಿಯ ಮುಸ್ತಫಾ ಎಂಬವರಿಗೆ ಒದಗಿಸುತ್ತಿದ್ದರು.
ಮುಸ್ತಫಾ ಮತ್ತು ಸಾಜಿದ್ ವಿದೇಶಿ ನೆಟ್ವರ್ಕ್ ಹೊಂದಿದ್ದು, ಸಿಮ್ ಗಳನ್ನು ಅಕ್ರಮವಾಗಿ ಸೈಬರ್ ವಂಚಕರಿಗೆ ಪೂರೈಸುತ್ತಿದ್ದರು ಎಂದು ತನಿಖೆಯಲ್ಲಿ ತಿಳಿದುಬಂದಿದೆ. ಈ ರೀತಿಯ ಸಿಮ್ ಗಳನ್ನು ಪಡೆದು ಸೈಬರ್ ವಂಚಕರು ಅವುಗಳನ್ನು ವಾಟ್ಸಪ್ ಜಾಲತಾಣ ಬಳಕೆ ಉದ್ದೇಶಕ್ಕೆ ಬಳಸುತ್ತಿದ್ದರು. ಯಾರದ್ದೋ ಹೆಸರಿನಲ್ಲಿರುವ ಈ ಸಿಮ್ ಬಳಸಿ, ವಾಟ್ಸಪ್ ಮೂಲಕ ಗ್ರಾಹಕರನ್ನು ಸಂಪರ್ಕಿಸುವುದು, ಮೆಸೇಜ್ ಫಾರ್ವರ್ಡ್ ಮಾಡುವುದಕ್ಕೆ ಬಳಸುತ್ತಿದ್ದರು. ಈ ಸಿಮ್ ಭಯೋತ್ಪಾದಕ ಕೃತ್ಯಗಳಿಗೆ ಬಳಕೆ ಆಗುತ್ತಿತ್ತಾ ಎನ್ನುವ ಬಗ್ಗೆ ತನಿಖೆ ಮುಂದುವರಿದಿದೆ. ಮುಸ್ತಫಾ ಮತ್ತು ಸಾಜಿದ್ ಪೊಲೀಸರ ಕೈಗೆ ಸಿಗದೆ ತಪ್ಪಿಸಿಕೊಂಡಿದ್ದಾರೆ.
Fake sim card used for cyber crimes busted by Mangalore police, 86 sim card seized. Accused have been identified as Mohammed Samar and Mohammed Ajim.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm