ಬ್ರೇಕಿಂಗ್ ನ್ಯೂಸ್
14-08-24 10:32 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 14: ಅಕ್ರಮವಾಗಿ ಸಿಮ್ ಕಾರ್ಡ್ ಗಳನ್ನು ಸಂಗ್ರಹಿಸಿ ಸೈಬರ್ ವಂಚಕರಿಗೆ ಒದಗಿಸುತ್ತಿದ್ದ ಇಬ್ಬರು ಯುವಕರನ್ನು ಮಂಗಳೂರಿನ ಸೈಬರ್ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಇವರಿಂದ 86 ಸಿಮ್ ಕಾರ್ಡ್ ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೆಳ್ತಂಗಡಿ ನಿವಾಸಿಗಳಾದ ಶಹಾದ್ ಮಹಮ್ಮದ್ ಸಮರ್ (21) ಮತ್ತು ಮೊಹಮ್ಮದ್ ಅಜೀಮ್ (19) ಬಂಧಿತರು. ಶಹಾದ್ ಮಂಗಳೂರಿನ ಯೆನಪೋಯ ಮೆಡಿಕಲ್ ಕಾಲೇಜಿನಲ್ಲಿ ಕೊನೆಯ ವರ್ಷದ ಬಿಬಿಎ ಓದುತ್ತಿದ್ದ. ಅಜೀಮ್ ಹತ್ತನೇ ಕ್ಲಾಸಿನಲ್ಲಿ ಶಿಕ್ಷಣ ಕೊನೆಗೊಳಿಸಿದ್ದು, ಮೊಬೈಲ್ ಅಂಗಡಿ, ಸಿಮ್ ಸಂಗ್ರಹ ಕೆಲಸದಲ್ಲಿ ತೊಡಗಿದ್ದನು. ಇವರು ತಮ್ಮ ಸ್ನೇಹಿತರು, ಪರಿಚಿತರ ಮೂಲಕ ಸಿಮ್ ಗಳನ್ನು ಮಾಡಿಸಿ, ಅವರಿಂದ 200 ರೂ.ಗೆ ಖರೀದಿಸುತ್ತಿದ್ದರು. ಅದನ್ನು ಬಳಿಕ ಮಡಂತ್ಯಾರಿನ ಸಾಜಿದ್ ಮತ್ತು ಬೆಳ್ತಂಗಡಿಯ ಮುಸ್ತಫಾ ಎಂಬವರಿಗೆ ಒದಗಿಸುತ್ತಿದ್ದರು.
ಮುಸ್ತಫಾ ಮತ್ತು ಸಾಜಿದ್ ವಿದೇಶಿ ನೆಟ್ವರ್ಕ್ ಹೊಂದಿದ್ದು, ಸಿಮ್ ಗಳನ್ನು ಅಕ್ರಮವಾಗಿ ಸೈಬರ್ ವಂಚಕರಿಗೆ ಪೂರೈಸುತ್ತಿದ್ದರು ಎಂದು ತನಿಖೆಯಲ್ಲಿ ತಿಳಿದುಬಂದಿದೆ. ಈ ರೀತಿಯ ಸಿಮ್ ಗಳನ್ನು ಪಡೆದು ಸೈಬರ್ ವಂಚಕರು ಅವುಗಳನ್ನು ವಾಟ್ಸಪ್ ಜಾಲತಾಣ ಬಳಕೆ ಉದ್ದೇಶಕ್ಕೆ ಬಳಸುತ್ತಿದ್ದರು. ಯಾರದ್ದೋ ಹೆಸರಿನಲ್ಲಿರುವ ಈ ಸಿಮ್ ಬಳಸಿ, ವಾಟ್ಸಪ್ ಮೂಲಕ ಗ್ರಾಹಕರನ್ನು ಸಂಪರ್ಕಿಸುವುದು, ಮೆಸೇಜ್ ಫಾರ್ವರ್ಡ್ ಮಾಡುವುದಕ್ಕೆ ಬಳಸುತ್ತಿದ್ದರು. ಈ ಸಿಮ್ ಭಯೋತ್ಪಾದಕ ಕೃತ್ಯಗಳಿಗೆ ಬಳಕೆ ಆಗುತ್ತಿತ್ತಾ ಎನ್ನುವ ಬಗ್ಗೆ ತನಿಖೆ ಮುಂದುವರಿದಿದೆ. ಮುಸ್ತಫಾ ಮತ್ತು ಸಾಜಿದ್ ಪೊಲೀಸರ ಕೈಗೆ ಸಿಗದೆ ತಪ್ಪಿಸಿಕೊಂಡಿದ್ದಾರೆ.
Fake sim card used for cyber crimes busted by Mangalore police, 86 sim card seized. Accused have been identified as Mohammed Samar and Mohammed Ajim.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 10:43 am
HK News Staffer
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm