ಬ್ರೇಕಿಂಗ್ ನ್ಯೂಸ್
14-08-24 10:32 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 14: ಅಕ್ರಮವಾಗಿ ಸಿಮ್ ಕಾರ್ಡ್ ಗಳನ್ನು ಸಂಗ್ರಹಿಸಿ ಸೈಬರ್ ವಂಚಕರಿಗೆ ಒದಗಿಸುತ್ತಿದ್ದ ಇಬ್ಬರು ಯುವಕರನ್ನು ಮಂಗಳೂರಿನ ಸೈಬರ್ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಇವರಿಂದ 86 ಸಿಮ್ ಕಾರ್ಡ್ ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೆಳ್ತಂಗಡಿ ನಿವಾಸಿಗಳಾದ ಶಹಾದ್ ಮಹಮ್ಮದ್ ಸಮರ್ (21) ಮತ್ತು ಮೊಹಮ್ಮದ್ ಅಜೀಮ್ (19) ಬಂಧಿತರು. ಶಹಾದ್ ಮಂಗಳೂರಿನ ಯೆನಪೋಯ ಮೆಡಿಕಲ್ ಕಾಲೇಜಿನಲ್ಲಿ ಕೊನೆಯ ವರ್ಷದ ಬಿಬಿಎ ಓದುತ್ತಿದ್ದ. ಅಜೀಮ್ ಹತ್ತನೇ ಕ್ಲಾಸಿನಲ್ಲಿ ಶಿಕ್ಷಣ ಕೊನೆಗೊಳಿಸಿದ್ದು, ಮೊಬೈಲ್ ಅಂಗಡಿ, ಸಿಮ್ ಸಂಗ್ರಹ ಕೆಲಸದಲ್ಲಿ ತೊಡಗಿದ್ದನು. ಇವರು ತಮ್ಮ ಸ್ನೇಹಿತರು, ಪರಿಚಿತರ ಮೂಲಕ ಸಿಮ್ ಗಳನ್ನು ಮಾಡಿಸಿ, ಅವರಿಂದ 200 ರೂ.ಗೆ ಖರೀದಿಸುತ್ತಿದ್ದರು. ಅದನ್ನು ಬಳಿಕ ಮಡಂತ್ಯಾರಿನ ಸಾಜಿದ್ ಮತ್ತು ಬೆಳ್ತಂಗಡಿಯ ಮುಸ್ತಫಾ ಎಂಬವರಿಗೆ ಒದಗಿಸುತ್ತಿದ್ದರು.
ಮುಸ್ತಫಾ ಮತ್ತು ಸಾಜಿದ್ ವಿದೇಶಿ ನೆಟ್ವರ್ಕ್ ಹೊಂದಿದ್ದು, ಸಿಮ್ ಗಳನ್ನು ಅಕ್ರಮವಾಗಿ ಸೈಬರ್ ವಂಚಕರಿಗೆ ಪೂರೈಸುತ್ತಿದ್ದರು ಎಂದು ತನಿಖೆಯಲ್ಲಿ ತಿಳಿದುಬಂದಿದೆ. ಈ ರೀತಿಯ ಸಿಮ್ ಗಳನ್ನು ಪಡೆದು ಸೈಬರ್ ವಂಚಕರು ಅವುಗಳನ್ನು ವಾಟ್ಸಪ್ ಜಾಲತಾಣ ಬಳಕೆ ಉದ್ದೇಶಕ್ಕೆ ಬಳಸುತ್ತಿದ್ದರು. ಯಾರದ್ದೋ ಹೆಸರಿನಲ್ಲಿರುವ ಈ ಸಿಮ್ ಬಳಸಿ, ವಾಟ್ಸಪ್ ಮೂಲಕ ಗ್ರಾಹಕರನ್ನು ಸಂಪರ್ಕಿಸುವುದು, ಮೆಸೇಜ್ ಫಾರ್ವರ್ಡ್ ಮಾಡುವುದಕ್ಕೆ ಬಳಸುತ್ತಿದ್ದರು. ಈ ಸಿಮ್ ಭಯೋತ್ಪಾದಕ ಕೃತ್ಯಗಳಿಗೆ ಬಳಕೆ ಆಗುತ್ತಿತ್ತಾ ಎನ್ನುವ ಬಗ್ಗೆ ತನಿಖೆ ಮುಂದುವರಿದಿದೆ. ಮುಸ್ತಫಾ ಮತ್ತು ಸಾಜಿದ್ ಪೊಲೀಸರ ಕೈಗೆ ಸಿಗದೆ ತಪ್ಪಿಸಿಕೊಂಡಿದ್ದಾರೆ.
Fake sim card used for cyber crimes busted by Mangalore police, 86 sim card seized. Accused have been identified as Mohammed Samar and Mohammed Ajim.
08-06-25 06:03 pm
Bangalore Correspondent
Bhaskar Rao, Cm Siddaramaiah, DK Shivakumar:...
07-06-25 08:04 pm
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm