ಬ್ರೇಕಿಂಗ್ ನ್ಯೂಸ್
18-08-24 10:24 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 18: ಮುಡಿಪು ಸಮೀಪದ ಮುದುಂಗಾರು ಕಟ್ಟೆ ಬಳಿ ಮಹಿಳೆಯೊಬ್ಬರ ಬಂಗಾರದ ಸರ ಕಸಿದು ಪರಾರಿಯಾಗಿದ್ದ ಆರೋಪಿಗಳನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ನರಿಂಗಾನ ಗ್ರಾಮದ ನವಾಝ್ ಯಾನೆ ನವ್ವ(32) ಹಾಗೂ ಮಹಮ್ಮದ್ ನಿಯಾಫ್ ಯಾನೆ ನಿಯಾ(28) ಎಂದು ಗುರುತಿಸಲಾಗಿದೆ.
ಮುದುಂಗಾರು ಕಟ್ಟೆ ಕಲ್ಲಾಪು ನಿವಾಸಿ ಯಮುನಾ ಎಂಬ ವೃದ್ಧ ಮಹಿಳೆ ಮೊನ್ನೆ ಶುಕ್ರವಾರ ಮುದುಂಗಾರು ಕಟ್ಟೆ ಶಾಲಾ ಹಿಂಭಾಗದಲ್ಲಿ ಸೊಪ್ಪು ಕೊಯ್ಯುತ್ತಿದ್ದಾಗ ಬೈಕ್ ನಲ್ಲಿ ಹೆಲ್ಮೆಟ್ ಧರಿಸಿ ಬಂದ ಇಬ್ಬರು ಆಗಂತುಕರು ಮಹಿಳೆಯ ಸುಮಾರು ಒಂದುವರೆ ಪವನ್ ತೂಕದ ಬಂಗಾರದ ಸರ ಕಸಿದು ಪರಾರಿಯಾಗಿದ್ದರು. ಈ ಸಂದರ್ಭದಲ್ಲಿ ಮಹಿಳೆ ಬೊಬ್ಬೆ ಹಾಕಿದ್ದರೂ ಸ್ಥಳದಲ್ಲಿ ಯಾರೂ ಇರಲಿಲ್ಲ. ಬಳಿಕ ಮಹಿಳೆಯ ಮನೆಯವರು ಕೊಣಾಜೆ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿದ್ದರು. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸಿದ್ದರು. ಸಿಸಿ ಟಿವಿಗಳ ಪರಿಶೀಲನೆ ವೇಳೆ ಕಳ್ಳರ ಸುಳಿವು ಸಿಕ್ಕಿತ್ತು.
ಕಳ್ಳತನ ನಡೆದ ಎರಡೇ ದಿನದಲ್ಲಿ ಕೊಣಾಜೆ ಪೊಲೀಸರಾದ ಪಿಎಸ್ಐ ವಿನೋದ್, ಸಿಬ್ಬಂದಿಗಳಾದ ಸಂತೋಷ್ ಕೆಸಿ, ಬಸವನ ಗೌಡ ಹಾಗೂ ಸುರೇಶ್ ಅವರು ಸರ ಕಳ್ಳತನ ನಡೆಸಿದ್ದ ಆರೋಪಿಗಳನ್ನು ಭಾನುವಾರ ಕೈರಂಗಳ ಗ್ರಾಮದ ವಿದ್ಯಾನಗರ ಬಸ್ ನಿಲ್ದಾಣದ ಬಳಿ ಬಂಧಿಸಿದ್ದಾರೆ. ಆರೋಪಿಗಳಿಂದ ಹತ್ತು ಗ್ರಾಂ ಬಂಗಾರ ಹಾಗೂ ಡಿಯೋ ಸ್ಕೂಟರನ್ನು ವಶಪಡಿಸಿಕೊಂಡಿಸಿದ್ದಾರೆ.
ಆರೋಪಿಗಳಲ್ಲಿ ನವಾಝ್ ಎಂಬಾತನ ವಿರುದ್ದ ಕೊಣಾಜೆ ಠಾಣೆಯಲ್ಲಿ ಈ ಹಿಂದೆ ದರೋಡೆ ಹಾಗೂ ಗಲಾಟೆ ಪ್ರಕರಣ ದಾಖಲಾಗಿತ್ತು. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
Two arrested from Mangalore over chain snatching by police. The arrested have been identified as Nawaz and Niyab. They snatched the gold chain of 69 year old women who was walking on the road.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 10:43 am
HK News Staffer
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm