ಬ್ರೇಕಿಂಗ್ ನ್ಯೂಸ್
18-08-24 10:24 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 18: ಮುಡಿಪು ಸಮೀಪದ ಮುದುಂಗಾರು ಕಟ್ಟೆ ಬಳಿ ಮಹಿಳೆಯೊಬ್ಬರ ಬಂಗಾರದ ಸರ ಕಸಿದು ಪರಾರಿಯಾಗಿದ್ದ ಆರೋಪಿಗಳನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ನರಿಂಗಾನ ಗ್ರಾಮದ ನವಾಝ್ ಯಾನೆ ನವ್ವ(32) ಹಾಗೂ ಮಹಮ್ಮದ್ ನಿಯಾಫ್ ಯಾನೆ ನಿಯಾ(28) ಎಂದು ಗುರುತಿಸಲಾಗಿದೆ.
ಮುದುಂಗಾರು ಕಟ್ಟೆ ಕಲ್ಲಾಪು ನಿವಾಸಿ ಯಮುನಾ ಎಂಬ ವೃದ್ಧ ಮಹಿಳೆ ಮೊನ್ನೆ ಶುಕ್ರವಾರ ಮುದುಂಗಾರು ಕಟ್ಟೆ ಶಾಲಾ ಹಿಂಭಾಗದಲ್ಲಿ ಸೊಪ್ಪು ಕೊಯ್ಯುತ್ತಿದ್ದಾಗ ಬೈಕ್ ನಲ್ಲಿ ಹೆಲ್ಮೆಟ್ ಧರಿಸಿ ಬಂದ ಇಬ್ಬರು ಆಗಂತುಕರು ಮಹಿಳೆಯ ಸುಮಾರು ಒಂದುವರೆ ಪವನ್ ತೂಕದ ಬಂಗಾರದ ಸರ ಕಸಿದು ಪರಾರಿಯಾಗಿದ್ದರು. ಈ ಸಂದರ್ಭದಲ್ಲಿ ಮಹಿಳೆ ಬೊಬ್ಬೆ ಹಾಕಿದ್ದರೂ ಸ್ಥಳದಲ್ಲಿ ಯಾರೂ ಇರಲಿಲ್ಲ. ಬಳಿಕ ಮಹಿಳೆಯ ಮನೆಯವರು ಕೊಣಾಜೆ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿದ್ದರು. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸಿದ್ದರು. ಸಿಸಿ ಟಿವಿಗಳ ಪರಿಶೀಲನೆ ವೇಳೆ ಕಳ್ಳರ ಸುಳಿವು ಸಿಕ್ಕಿತ್ತು.
ಕಳ್ಳತನ ನಡೆದ ಎರಡೇ ದಿನದಲ್ಲಿ ಕೊಣಾಜೆ ಪೊಲೀಸರಾದ ಪಿಎಸ್ಐ ವಿನೋದ್, ಸಿಬ್ಬಂದಿಗಳಾದ ಸಂತೋಷ್ ಕೆಸಿ, ಬಸವನ ಗೌಡ ಹಾಗೂ ಸುರೇಶ್ ಅವರು ಸರ ಕಳ್ಳತನ ನಡೆಸಿದ್ದ ಆರೋಪಿಗಳನ್ನು ಭಾನುವಾರ ಕೈರಂಗಳ ಗ್ರಾಮದ ವಿದ್ಯಾನಗರ ಬಸ್ ನಿಲ್ದಾಣದ ಬಳಿ ಬಂಧಿಸಿದ್ದಾರೆ. ಆರೋಪಿಗಳಿಂದ ಹತ್ತು ಗ್ರಾಂ ಬಂಗಾರ ಹಾಗೂ ಡಿಯೋ ಸ್ಕೂಟರನ್ನು ವಶಪಡಿಸಿಕೊಂಡಿಸಿದ್ದಾರೆ.
ಆರೋಪಿಗಳಲ್ಲಿ ನವಾಝ್ ಎಂಬಾತನ ವಿರುದ್ದ ಕೊಣಾಜೆ ಠಾಣೆಯಲ್ಲಿ ಈ ಹಿಂದೆ ದರೋಡೆ ಹಾಗೂ ಗಲಾಟೆ ಪ್ರಕರಣ ದಾಖಲಾಗಿತ್ತು. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
Two arrested from Mangalore over chain snatching by police. The arrested have been identified as Nawaz and Niyab. They snatched the gold chain of 69 year old women who was walking on the road.
19-02-26 09:29 pm
mangalore
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
19-02-26 11:04 pm
mangalore
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
19-02-26 10:37 pm
mangalore
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
ನೇತ್ರಾವತಿ ಸೇತುವೆ ಆವರಣ ಗೋಡೆಗೆ ಅಪ್ಪಳಿಸಿದ ಮಿನಿ ಟ...
19-02-26 05:38 pm
ಬೆಳ್ತಂಗಡಿ : ಮಕ್ಕಳು ಕ್ರಿಕೆಟ್ ಆಡುತ್ತಿದ್ದಾಗ ನಿಗೂ...
19-02-26 04:09 pm
20-02-26 11:31 am
Mangalore Correspondent
Mangalore CCB Police, Rowdy Safwan Hussain: ದ...
18-02-26 09:16 pm
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm