ಬ್ರೇಕಿಂಗ್ ನ್ಯೂಸ್
18-08-24 10:24 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 18: ಮುಡಿಪು ಸಮೀಪದ ಮುದುಂಗಾರು ಕಟ್ಟೆ ಬಳಿ ಮಹಿಳೆಯೊಬ್ಬರ ಬಂಗಾರದ ಸರ ಕಸಿದು ಪರಾರಿಯಾಗಿದ್ದ ಆರೋಪಿಗಳನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ನರಿಂಗಾನ ಗ್ರಾಮದ ನವಾಝ್ ಯಾನೆ ನವ್ವ(32) ಹಾಗೂ ಮಹಮ್ಮದ್ ನಿಯಾಫ್ ಯಾನೆ ನಿಯಾ(28) ಎಂದು ಗುರುತಿಸಲಾಗಿದೆ.
ಮುದುಂಗಾರು ಕಟ್ಟೆ ಕಲ್ಲಾಪು ನಿವಾಸಿ ಯಮುನಾ ಎಂಬ ವೃದ್ಧ ಮಹಿಳೆ ಮೊನ್ನೆ ಶುಕ್ರವಾರ ಮುದುಂಗಾರು ಕಟ್ಟೆ ಶಾಲಾ ಹಿಂಭಾಗದಲ್ಲಿ ಸೊಪ್ಪು ಕೊಯ್ಯುತ್ತಿದ್ದಾಗ ಬೈಕ್ ನಲ್ಲಿ ಹೆಲ್ಮೆಟ್ ಧರಿಸಿ ಬಂದ ಇಬ್ಬರು ಆಗಂತುಕರು ಮಹಿಳೆಯ ಸುಮಾರು ಒಂದುವರೆ ಪವನ್ ತೂಕದ ಬಂಗಾರದ ಸರ ಕಸಿದು ಪರಾರಿಯಾಗಿದ್ದರು. ಈ ಸಂದರ್ಭದಲ್ಲಿ ಮಹಿಳೆ ಬೊಬ್ಬೆ ಹಾಕಿದ್ದರೂ ಸ್ಥಳದಲ್ಲಿ ಯಾರೂ ಇರಲಿಲ್ಲ. ಬಳಿಕ ಮಹಿಳೆಯ ಮನೆಯವರು ಕೊಣಾಜೆ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿದ್ದರು. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸಿದ್ದರು. ಸಿಸಿ ಟಿವಿಗಳ ಪರಿಶೀಲನೆ ವೇಳೆ ಕಳ್ಳರ ಸುಳಿವು ಸಿಕ್ಕಿತ್ತು.
ಕಳ್ಳತನ ನಡೆದ ಎರಡೇ ದಿನದಲ್ಲಿ ಕೊಣಾಜೆ ಪೊಲೀಸರಾದ ಪಿಎಸ್ಐ ವಿನೋದ್, ಸಿಬ್ಬಂದಿಗಳಾದ ಸಂತೋಷ್ ಕೆಸಿ, ಬಸವನ ಗೌಡ ಹಾಗೂ ಸುರೇಶ್ ಅವರು ಸರ ಕಳ್ಳತನ ನಡೆಸಿದ್ದ ಆರೋಪಿಗಳನ್ನು ಭಾನುವಾರ ಕೈರಂಗಳ ಗ್ರಾಮದ ವಿದ್ಯಾನಗರ ಬಸ್ ನಿಲ್ದಾಣದ ಬಳಿ ಬಂಧಿಸಿದ್ದಾರೆ. ಆರೋಪಿಗಳಿಂದ ಹತ್ತು ಗ್ರಾಂ ಬಂಗಾರ ಹಾಗೂ ಡಿಯೋ ಸ್ಕೂಟರನ್ನು ವಶಪಡಿಸಿಕೊಂಡಿಸಿದ್ದಾರೆ.
ಆರೋಪಿಗಳಲ್ಲಿ ನವಾಝ್ ಎಂಬಾತನ ವಿರುದ್ದ ಕೊಣಾಜೆ ಠಾಣೆಯಲ್ಲಿ ಈ ಹಿಂದೆ ದರೋಡೆ ಹಾಗೂ ಗಲಾಟೆ ಪ್ರಕರಣ ದಾಖಲಾಗಿತ್ತು. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
Two arrested from Mangalore over chain snatching by police. The arrested have been identified as Nawaz and Niyab. They snatched the gold chain of 69 year old women who was walking on the road.
02-01-26 06:09 pm
HK News Desk
Ballari Banner Fight, FIR, Death: ಬ್ಯಾನರ್ ವಿಚ...
02-01-26 04:13 pm
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
01-01-26 09:34 pm
HK News Desk
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
02-01-26 02:02 pm
Mangalore Correspondent
Dr Vinaya Hegde Death, NItte Mangalore: ನಿಟ್ಟ...
01-01-26 09:43 am
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm