ಬ್ರೇಕಿಂಗ್ ನ್ಯೂಸ್
20-08-24 11:21 am Mangaluru Correspondent ಕ್ರೈಂ
ಮಂಗಳೂರು, ಆಗಸ್ಟ್ 20: ಎರಡು ಕಾಲೇಜು ತಂಡಗಳ ನಡುವಿನ ಫುಟ್ಬಾಲ್ ಪಂದ್ಯಾಟದಲ್ಲಿ ಕಿರಿಕ್ ಉಂಟಾಗಿ ಒಂದು ತಂಡ ಐದಾರು ವಿದ್ಯಾರ್ಥಿಗಳನ್ನು ಅಪಹರಿಸಿ ವಿವಸ್ತ್ರಗೊಳಿಸಿ ಹಲ್ಲೆಗೈದ ಘಟನೆ ನಡೆದಿದ್ದು ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಪಾಂಡೇಶ್ವರ ಪೊಲೀಸರು ಪ್ರಕರಣ ದಾಖಲಿಸಿ ಇಬ್ಬರನ್ನು ಬಂಧಿಸಿದ್ದಾರೆ.
ಮಂಗಳೂರಿನ ನೆಹರು ಮೈದಾನದಲ್ಲಿ ಯೆನಪೋಯ ಮತ್ತು ಅಲೋಶಿಯಸ್ ಕಾಲೇಜು ವಿದ್ಯಾರ್ಥಿಗಳ ಮಧ್ಯೆ ಆಗಸ್ಟ್ 14ರಂದು ಫುಟ್ಬಾಲ್ ಟೂರ್ನಮೆಂಟ್ ನಡೆದಿತ್ತು. ಈ ವೇಳೆ, ಮಹಮ್ಮದ್ ಶುರೈ, ಮಹಮ್ಮದ್ ಅಫ್ರಾನ್, ಇಬ್ರಾಹಿಂ ಖಲೀಲ್ ಮತ್ತು ಮಹಮ್ಮದ್ ಜುನೈದ್ ಎಂಬವರು ಯೆನಪೋಯ ತಂಡಕ್ಕೆ ಬೆಂಬಲಿಸಿದ ದ್ವೇಷದಲ್ಲಿ ಮತ್ತೊಂದು ತಂಡದ ವಿದ್ಯಾರ್ಥಿಗಳು ಇವರನ್ನು ಅಪಹರಿಸಿದ್ದಾರೆ. ಆಗಸ್ಟ್ 19ರ ಸೋಮವಾರ ಸಂಜೆ ಇವರನ್ನು ಪಾಂಡೇಶ್ವರದ ಫೋರಂ ಮಾಲ್ ಬಳಿಯಿಂದ ಕಾರಿನಲ್ಲಿ ಅಪಹರಿಸಿದ್ದು ಮಹಾಕಾಳಿ ಪಡ್ಪು ಎಂಬಲ್ಲಿಗೆ ಕರೆದೊಯ್ದು ಹಲ್ಲೆ ನಡೆಸಿದ್ದಾರೆ. ದಿಯಾನ್, ಅನ್ನೈ, ತಸ್ಮಿನ್, ಸಲ್ಮಾನ್, ಅನಾಸ್ ಮತ್ತಿತರರು ಸೇರಿ ಹಲ್ಲೆಗೈದಿದ್ದಾಗಿ ಮೊಹಮ್ಮದ್ ಶುರೈ ಪಾಂಡೇಶ್ವರ ಠಾಣೆಗೆ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.
ಮಹಾಕಾಳಿ ಪಡ್ಪು ಮತ್ತು ಪಡೀಲ್ ಗೆ ಕರೆದೊಯ್ದು ಹಲ್ಲೆ ನಡೆಸಿದ್ದಲ್ಲದೆ, ಯದ್ವಾತದ್ವಾ ಹೊಡೆದು ಸಿಗರೇಟ್ ನಿಂದ ಸುಟ್ಟು ಚಿತ್ರಹಿಂಸೆ ನೀಡಿದ್ದಾರೆ. ಮಂಗಳೂರು ನಗರದ ಎರಡು ಕಡೆ ಕರೆದೊಯ್ದು ಹಲ್ಲೆ ಕೃತ್ಯ ನಡೆಸಲಾಗಿದ್ದು ಹಲ್ಲೆ ಬಳಿಕ ವಿದ್ಯಾರ್ಥಿಗಳ ಪ್ಯಾಂಟ್ ಶರ್ಟ್ ತೆಗೆಸಿ ಒಳ ಚಡ್ಡಿಯಲ್ಲಿ ನಿಲ್ಲಿಸಿ ಬಸ್ಕಿ ತೆಗೆಸಿದ್ದಾರೆ. ನಿನ್ನೆ ತಡರಾತ್ರಿ ಘಟನೆ ನಡೆದಿದ್ದು ಆರೋಪಿಗಳು ಇದರ ವಿಡಿಯೋ ಮಾಡಿ ತಮ್ಮ ವಾಟ್ಸಪ್ ಗ್ರೂಪಿನಲ್ಲಿ ಷೇರ್ ಮಾಡಿದ್ದರು. ವಿಡಿಯೋ ಆಧರಿಸಿ ಪೊಲೀಸರು ಇಬ್ಬರನ್ನು ಬಂಧಿಸಿದ್ದು ಇತರ ಆರೋಪಿಗಳಿಗೆ ಶೋಧ ನಡೆಸಿದ್ದಾರೆ.
ಘಟನೆಯಲ್ಲಿ ಗಾಯಗೊಂಡ ವಿದ್ಯಾರ್ಥಿಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ವಿದ್ಯಾರ್ಥಿಗಳನ್ನು ವಿವಸ್ತ್ರಗೊಳಿಸಿ ಕ್ಷಮೆ ಕೇಳುವಂತೆ ಹೇಳಿ ಹಲ್ಲೆ ಮಾಡಿರುವ ವಿಡಿಯೋ ವೈರಲ್ ಆಗಿದೆ.
ಆರೋಪಿಗಳ ಪೈಕಿ ದಿಯಾನ್ ಮತ್ತು ಸಲ್ಮಾನ್ ಎಂಬಿಬ್ಬರನ್ನು ಬಂಧಿಸಲಾಗಿದೆ. ಇನ್ನಿಬ್ಬರು 17 ವರ್ಷದ ಹುಡುಗರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.
Mangalore Clash between two college students over a football tournament, three students were kidnapped and tortured the whole night. The miscrenats have also made the video go viral on social media. Pandeshwar Police have arrested two people in this case.
08-06-25 06:03 pm
Bangalore Correspondent
Bhaskar Rao, Cm Siddaramaiah, DK Shivakumar:...
07-06-25 08:04 pm
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm