ಬ್ರೇಕಿಂಗ್ ನ್ಯೂಸ್
20-08-24 05:33 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್. 20: ಪಿಯುಸಿ ವಿದ್ಯಾರ್ಥಿನಿಯ ಕೈಗೆ ಸಹಪಾಠಿ ಬಾಲಕನೊಬ್ಬ ಬ್ಲೇಡ್ ನಲ್ಲಿ ಹಲ್ಲೆಗೈದು ಪರಾರಿಯಾದ ಘಟನೆ ಪುತ್ತೂರು ಪೇಟೆಯ ಕೊಂಬೆಟ್ಟು ಜೂನಿಯರ್ ಕಾಲೇಜು ಆವರಣದಲ್ಲಿ ನಡೆದಿದೆ.
ಇಬ್ಬರು ಒಂದೇ ಕಾಲೇಜಿನಲ್ಲಿ ಕಲಿಯುವ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾಗಿದ್ದು ಇಂದು ಬೆಳಗ್ಗೆ ಹುಡುಗ ಹಿಂಬಾಲಿಸುತ್ತ ಬಂದು ಬಾಲಕಿಯೊಂದಿಗೆ ಮಾತನಾಡುತ್ತಿದ್ದಾಗಲೇ ಸಿಟ್ಟಿಗೆದ್ದು ಕೈಯಲ್ಲಿದ್ದ ಚೂಪಾದ ವಸ್ತುವಿನಿಂದ ಗೀರಿದ್ದು ಬಾಲಕಿಯ ಕೈಗೆ ಗಾಯವಾಗಿದೆ. ಹುಡುಗಿ ಮುಸ್ಲಿಂ ಸಮುದಾಯಕ್ಕೆ ಸೇರಿದ್ದು, ಹುಡುಗ ಹಿಂದೂ ಆಗಿದ್ದಾನೆ. ಮಧ್ಯಾಹ್ನ ಕಾಲೇಜು ಬಿಟ್ಟ ಬಳಿಕ ಹುಡುಗಿ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾಳೆ.
ಘಟನೆ ತಿಳಿಯುತ್ತಲೇ ಮುಸ್ಲಿಂ ಸಂಘಟನೆ ಪ್ರಮುಖರು ಮತ್ತು ಯುವಕರು ಆಸ್ಪತ್ರೆ ಆವರಣದಲ್ಲಿ ಜಮಾಯಿಸಿದ್ದಾರೆ. ಬಾಲಕನ ವಿರುದ್ಧ ಕ್ರಮಕ್ಕೆ ಆಗ್ರಹ ಮಾಡಿದ್ದಾರೆ. ಬಾಲಕಿ ಹೇಳುವ ಪ್ರಕಾರ, ನಿನ್ನನ್ನು ಲವ್ ಮಾಡುತ್ತೇನೆ ಎಂದು ಹೇಳಿದ್ದಕ್ಕೆ ವಿದ್ಯಾರ್ಥಿನಿ ಬಾಲಕನಿಗೆ ಬೈದಿದ್ದಾಳಂತೆ. ಇದರಿಂದ ಸಿಟ್ಟಿಗೆದ್ದ ಹುಡುಗ, ತನ್ನ ಕೈಯಲ್ಲಿದ್ದ ಚೂಪಾದ ಬ್ಲೇಡ್ ನಲ್ಲಿ ಬಾಲಕಿಯ ಕೈಗೆ ಇರಿದು ಪರಾರಿಯಾಗಿದ್ದಾನೆ. ಈ ವೇಳೆ ಕಾಲೇಜಿನ ಶಿಕ್ಷಕಿಯೊಬ್ಬರು ಕೈಗೆ ಗಾಜು ತಾಗಿ ಗಾಯವಾಗಿದ್ದಾಗಿ ಹೇಳುವಂತೆ ಸಲಹೆ ನೀಡಿದ್ದರು ಎಂದು ಬಾಲಕಿ ಮಾಧ್ಯಮದ ಮುಂದೆ ಆರೋಪಿಸಿದ್ದಾಳೆ.
ಆಸ್ಪತ್ರೆ ಮುಂದೆ ಜನ ಸೇರಿದ್ದು, ಸ್ಥಳದಲ್ಲಿ ಬಿಗುವಿನ ಸ್ಥಿತಿ ನಿರ್ಮಾಣವಾಗಿದೆ. ನೆರೆದಿದ್ದ ಜನರನ್ನು ಪೊಲೀಸರು ಆಸ್ಪತ್ರೆಯಿಂದ ಹೊರಗೆ ಕಳುಹಿಸಿದ್ದಾರೆ. ಕಾಂಗ್ರೆಸ್ ಮುಖಂಡರು, ಮುಸ್ಲಿಂ ಸಂಘಟನೆ ಮುಖಂಡರು ಸೇರಿದ್ದು ಹುಡುಗ ಚೂರಿ ಇರಿದಿದ್ದಾನೆ, ಆತನನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿದ್ದಾರೆ.
PUC girl Student attacked by minor boy in blade, turns into Hindu muslim fight at puttur in Mangalore. Both muslim and Hindu organisations have joined in great numbers at the hospital.
16-07-25 09:36 pm
HK News Desk
ಕೋವಿಡ್ ಮುಗಿದರೂ, ಅದರ ಪರಿಣಾಮ ನಿಂತಿಲ್ಲ..! ನರಮಂಡಲ...
16-07-25 07:05 pm
BESCOM, Cybercrime, Digital Arrest: ಡಿಜಿಟಲ್ ಅ...
16-07-25 03:58 pm
ಕಾವೇರಿ ಆರತಿ ದುಡ್ಡು ಹೊಡೆಯುವ ಸ್ಕೀಮ್, ನೂರು ಕೋಟಿ...
16-07-25 11:47 am
35 IPS Officers Transfer: ರಾಜ್ಯದಲ್ಲಿ 35 ಐಪಿಎಸ...
15-07-25 01:32 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
16-07-25 10:52 pm
Mangalore Correspondent
ಕೆಂಪು ಕಲ್ಲು, ಮರಳು ಸಮಸ್ಯೆಗೆ ಕಾಂಗ್ರೆಸ್ ಸರ್ಕಾರದ...
16-07-25 01:01 pm
Dharmasthala Missing case, Ananya Bhat, Compl...
15-07-25 10:40 pm
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
16-07-25 11:04 pm
Mangalore Correspondent
Mangalore Crime, Konaje Murder: ಒಂಟಿ ಮಹಿಳೆಯ ಅ...
16-07-25 09:48 pm
Sexual Harassment Odisha News; ಪ್ರಾಧ್ಯಾಪಕನಿಂದ...
16-07-25 04:37 pm
Kavoor police constable arrest, Mangalore: ದೂ...
16-07-25 11:42 am
ಸುಂದರವಾಗಿದ್ದಕ್ಕೆ ತಲೆ ಬೋಳಿಸಿ ಮನೆಯಲ್ಲಿ ಕೂಡಿಹಾಕಿ...
15-07-25 10:57 pm