ಬ್ರೇಕಿಂಗ್ ನ್ಯೂಸ್
20-08-24 05:33 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್. 20: ಪಿಯುಸಿ ವಿದ್ಯಾರ್ಥಿನಿಯ ಕೈಗೆ ಸಹಪಾಠಿ ಬಾಲಕನೊಬ್ಬ ಬ್ಲೇಡ್ ನಲ್ಲಿ ಹಲ್ಲೆಗೈದು ಪರಾರಿಯಾದ ಘಟನೆ ಪುತ್ತೂರು ಪೇಟೆಯ ಕೊಂಬೆಟ್ಟು ಜೂನಿಯರ್ ಕಾಲೇಜು ಆವರಣದಲ್ಲಿ ನಡೆದಿದೆ.
ಇಬ್ಬರು ಒಂದೇ ಕಾಲೇಜಿನಲ್ಲಿ ಕಲಿಯುವ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾಗಿದ್ದು ಇಂದು ಬೆಳಗ್ಗೆ ಹುಡುಗ ಹಿಂಬಾಲಿಸುತ್ತ ಬಂದು ಬಾಲಕಿಯೊಂದಿಗೆ ಮಾತನಾಡುತ್ತಿದ್ದಾಗಲೇ ಸಿಟ್ಟಿಗೆದ್ದು ಕೈಯಲ್ಲಿದ್ದ ಚೂಪಾದ ವಸ್ತುವಿನಿಂದ ಗೀರಿದ್ದು ಬಾಲಕಿಯ ಕೈಗೆ ಗಾಯವಾಗಿದೆ. ಹುಡುಗಿ ಮುಸ್ಲಿಂ ಸಮುದಾಯಕ್ಕೆ ಸೇರಿದ್ದು, ಹುಡುಗ ಹಿಂದೂ ಆಗಿದ್ದಾನೆ. ಮಧ್ಯಾಹ್ನ ಕಾಲೇಜು ಬಿಟ್ಟ ಬಳಿಕ ಹುಡುಗಿ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾಳೆ.
ಘಟನೆ ತಿಳಿಯುತ್ತಲೇ ಮುಸ್ಲಿಂ ಸಂಘಟನೆ ಪ್ರಮುಖರು ಮತ್ತು ಯುವಕರು ಆಸ್ಪತ್ರೆ ಆವರಣದಲ್ಲಿ ಜಮಾಯಿಸಿದ್ದಾರೆ. ಬಾಲಕನ ವಿರುದ್ಧ ಕ್ರಮಕ್ಕೆ ಆಗ್ರಹ ಮಾಡಿದ್ದಾರೆ. ಬಾಲಕಿ ಹೇಳುವ ಪ್ರಕಾರ, ನಿನ್ನನ್ನು ಲವ್ ಮಾಡುತ್ತೇನೆ ಎಂದು ಹೇಳಿದ್ದಕ್ಕೆ ವಿದ್ಯಾರ್ಥಿನಿ ಬಾಲಕನಿಗೆ ಬೈದಿದ್ದಾಳಂತೆ. ಇದರಿಂದ ಸಿಟ್ಟಿಗೆದ್ದ ಹುಡುಗ, ತನ್ನ ಕೈಯಲ್ಲಿದ್ದ ಚೂಪಾದ ಬ್ಲೇಡ್ ನಲ್ಲಿ ಬಾಲಕಿಯ ಕೈಗೆ ಇರಿದು ಪರಾರಿಯಾಗಿದ್ದಾನೆ. ಈ ವೇಳೆ ಕಾಲೇಜಿನ ಶಿಕ್ಷಕಿಯೊಬ್ಬರು ಕೈಗೆ ಗಾಜು ತಾಗಿ ಗಾಯವಾಗಿದ್ದಾಗಿ ಹೇಳುವಂತೆ ಸಲಹೆ ನೀಡಿದ್ದರು ಎಂದು ಬಾಲಕಿ ಮಾಧ್ಯಮದ ಮುಂದೆ ಆರೋಪಿಸಿದ್ದಾಳೆ.
ಆಸ್ಪತ್ರೆ ಮುಂದೆ ಜನ ಸೇರಿದ್ದು, ಸ್ಥಳದಲ್ಲಿ ಬಿಗುವಿನ ಸ್ಥಿತಿ ನಿರ್ಮಾಣವಾಗಿದೆ. ನೆರೆದಿದ್ದ ಜನರನ್ನು ಪೊಲೀಸರು ಆಸ್ಪತ್ರೆಯಿಂದ ಹೊರಗೆ ಕಳುಹಿಸಿದ್ದಾರೆ. ಕಾಂಗ್ರೆಸ್ ಮುಖಂಡರು, ಮುಸ್ಲಿಂ ಸಂಘಟನೆ ಮುಖಂಡರು ಸೇರಿದ್ದು ಹುಡುಗ ಚೂರಿ ಇರಿದಿದ್ದಾನೆ, ಆತನನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿದ್ದಾರೆ.
PUC girl Student attacked by minor boy in blade, turns into Hindu muslim fight at puttur in Mangalore. Both muslim and Hindu organisations have joined in great numbers at the hospital.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 06:14 pm
Mangalore Correspondent
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
Headline Karnataka, Social Campaigning, Manga...
11-09-25 11:34 am
ಧರ್ಮಸ್ಥಳ ಕೇಸ್ ; ವಿಚಾರಣೆ ಮುಗಿಸಿ ಸತ್ಯಕ್ಕೆ ಜಯ ಎನ...
10-09-25 10:50 pm
11-09-25 02:25 pm
HK STAFF
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm