ಬ್ರೇಕಿಂಗ್ ನ್ಯೂಸ್
20-08-24 05:33 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್. 20: ಪಿಯುಸಿ ವಿದ್ಯಾರ್ಥಿನಿಯ ಕೈಗೆ ಸಹಪಾಠಿ ಬಾಲಕನೊಬ್ಬ ಬ್ಲೇಡ್ ನಲ್ಲಿ ಹಲ್ಲೆಗೈದು ಪರಾರಿಯಾದ ಘಟನೆ ಪುತ್ತೂರು ಪೇಟೆಯ ಕೊಂಬೆಟ್ಟು ಜೂನಿಯರ್ ಕಾಲೇಜು ಆವರಣದಲ್ಲಿ ನಡೆದಿದೆ.
ಇಬ್ಬರು ಒಂದೇ ಕಾಲೇಜಿನಲ್ಲಿ ಕಲಿಯುವ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾಗಿದ್ದು ಇಂದು ಬೆಳಗ್ಗೆ ಹುಡುಗ ಹಿಂಬಾಲಿಸುತ್ತ ಬಂದು ಬಾಲಕಿಯೊಂದಿಗೆ ಮಾತನಾಡುತ್ತಿದ್ದಾಗಲೇ ಸಿಟ್ಟಿಗೆದ್ದು ಕೈಯಲ್ಲಿದ್ದ ಚೂಪಾದ ವಸ್ತುವಿನಿಂದ ಗೀರಿದ್ದು ಬಾಲಕಿಯ ಕೈಗೆ ಗಾಯವಾಗಿದೆ. ಹುಡುಗಿ ಮುಸ್ಲಿಂ ಸಮುದಾಯಕ್ಕೆ ಸೇರಿದ್ದು, ಹುಡುಗ ಹಿಂದೂ ಆಗಿದ್ದಾನೆ. ಮಧ್ಯಾಹ್ನ ಕಾಲೇಜು ಬಿಟ್ಟ ಬಳಿಕ ಹುಡುಗಿ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾಳೆ.




ಘಟನೆ ತಿಳಿಯುತ್ತಲೇ ಮುಸ್ಲಿಂ ಸಂಘಟನೆ ಪ್ರಮುಖರು ಮತ್ತು ಯುವಕರು ಆಸ್ಪತ್ರೆ ಆವರಣದಲ್ಲಿ ಜಮಾಯಿಸಿದ್ದಾರೆ. ಬಾಲಕನ ವಿರುದ್ಧ ಕ್ರಮಕ್ಕೆ ಆಗ್ರಹ ಮಾಡಿದ್ದಾರೆ. ಬಾಲಕಿ ಹೇಳುವ ಪ್ರಕಾರ, ನಿನ್ನನ್ನು ಲವ್ ಮಾಡುತ್ತೇನೆ ಎಂದು ಹೇಳಿದ್ದಕ್ಕೆ ವಿದ್ಯಾರ್ಥಿನಿ ಬಾಲಕನಿಗೆ ಬೈದಿದ್ದಾಳಂತೆ. ಇದರಿಂದ ಸಿಟ್ಟಿಗೆದ್ದ ಹುಡುಗ, ತನ್ನ ಕೈಯಲ್ಲಿದ್ದ ಚೂಪಾದ ಬ್ಲೇಡ್ ನಲ್ಲಿ ಬಾಲಕಿಯ ಕೈಗೆ ಇರಿದು ಪರಾರಿಯಾಗಿದ್ದಾನೆ. ಈ ವೇಳೆ ಕಾಲೇಜಿನ ಶಿಕ್ಷಕಿಯೊಬ್ಬರು ಕೈಗೆ ಗಾಜು ತಾಗಿ ಗಾಯವಾಗಿದ್ದಾಗಿ ಹೇಳುವಂತೆ ಸಲಹೆ ನೀಡಿದ್ದರು ಎಂದು ಬಾಲಕಿ ಮಾಧ್ಯಮದ ಮುಂದೆ ಆರೋಪಿಸಿದ್ದಾಳೆ.
ಆಸ್ಪತ್ರೆ ಮುಂದೆ ಜನ ಸೇರಿದ್ದು, ಸ್ಥಳದಲ್ಲಿ ಬಿಗುವಿನ ಸ್ಥಿತಿ ನಿರ್ಮಾಣವಾಗಿದೆ. ನೆರೆದಿದ್ದ ಜನರನ್ನು ಪೊಲೀಸರು ಆಸ್ಪತ್ರೆಯಿಂದ ಹೊರಗೆ ಕಳುಹಿಸಿದ್ದಾರೆ. ಕಾಂಗ್ರೆಸ್ ಮುಖಂಡರು, ಮುಸ್ಲಿಂ ಸಂಘಟನೆ ಮುಖಂಡರು ಸೇರಿದ್ದು ಹುಡುಗ ಚೂರಿ ಇರಿದಿದ್ದಾನೆ, ಆತನನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿದ್ದಾರೆ.
PUC girl Student attacked by minor boy in blade, turns into Hindu muslim fight at puttur in Mangalore. Both muslim and Hindu organisations have joined in great numbers at the hospital.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm