ಬ್ರೇಕಿಂಗ್ ನ್ಯೂಸ್
20-08-24 05:33 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್. 20: ಪಿಯುಸಿ ವಿದ್ಯಾರ್ಥಿನಿಯ ಕೈಗೆ ಸಹಪಾಠಿ ಬಾಲಕನೊಬ್ಬ ಬ್ಲೇಡ್ ನಲ್ಲಿ ಹಲ್ಲೆಗೈದು ಪರಾರಿಯಾದ ಘಟನೆ ಪುತ್ತೂರು ಪೇಟೆಯ ಕೊಂಬೆಟ್ಟು ಜೂನಿಯರ್ ಕಾಲೇಜು ಆವರಣದಲ್ಲಿ ನಡೆದಿದೆ.
ಇಬ್ಬರು ಒಂದೇ ಕಾಲೇಜಿನಲ್ಲಿ ಕಲಿಯುವ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾಗಿದ್ದು ಇಂದು ಬೆಳಗ್ಗೆ ಹುಡುಗ ಹಿಂಬಾಲಿಸುತ್ತ ಬಂದು ಬಾಲಕಿಯೊಂದಿಗೆ ಮಾತನಾಡುತ್ತಿದ್ದಾಗಲೇ ಸಿಟ್ಟಿಗೆದ್ದು ಕೈಯಲ್ಲಿದ್ದ ಚೂಪಾದ ವಸ್ತುವಿನಿಂದ ಗೀರಿದ್ದು ಬಾಲಕಿಯ ಕೈಗೆ ಗಾಯವಾಗಿದೆ. ಹುಡುಗಿ ಮುಸ್ಲಿಂ ಸಮುದಾಯಕ್ಕೆ ಸೇರಿದ್ದು, ಹುಡುಗ ಹಿಂದೂ ಆಗಿದ್ದಾನೆ. ಮಧ್ಯಾಹ್ನ ಕಾಲೇಜು ಬಿಟ್ಟ ಬಳಿಕ ಹುಡುಗಿ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾಳೆ.




ಘಟನೆ ತಿಳಿಯುತ್ತಲೇ ಮುಸ್ಲಿಂ ಸಂಘಟನೆ ಪ್ರಮುಖರು ಮತ್ತು ಯುವಕರು ಆಸ್ಪತ್ರೆ ಆವರಣದಲ್ಲಿ ಜಮಾಯಿಸಿದ್ದಾರೆ. ಬಾಲಕನ ವಿರುದ್ಧ ಕ್ರಮಕ್ಕೆ ಆಗ್ರಹ ಮಾಡಿದ್ದಾರೆ. ಬಾಲಕಿ ಹೇಳುವ ಪ್ರಕಾರ, ನಿನ್ನನ್ನು ಲವ್ ಮಾಡುತ್ತೇನೆ ಎಂದು ಹೇಳಿದ್ದಕ್ಕೆ ವಿದ್ಯಾರ್ಥಿನಿ ಬಾಲಕನಿಗೆ ಬೈದಿದ್ದಾಳಂತೆ. ಇದರಿಂದ ಸಿಟ್ಟಿಗೆದ್ದ ಹುಡುಗ, ತನ್ನ ಕೈಯಲ್ಲಿದ್ದ ಚೂಪಾದ ಬ್ಲೇಡ್ ನಲ್ಲಿ ಬಾಲಕಿಯ ಕೈಗೆ ಇರಿದು ಪರಾರಿಯಾಗಿದ್ದಾನೆ. ಈ ವೇಳೆ ಕಾಲೇಜಿನ ಶಿಕ್ಷಕಿಯೊಬ್ಬರು ಕೈಗೆ ಗಾಜು ತಾಗಿ ಗಾಯವಾಗಿದ್ದಾಗಿ ಹೇಳುವಂತೆ ಸಲಹೆ ನೀಡಿದ್ದರು ಎಂದು ಬಾಲಕಿ ಮಾಧ್ಯಮದ ಮುಂದೆ ಆರೋಪಿಸಿದ್ದಾಳೆ.
ಆಸ್ಪತ್ರೆ ಮುಂದೆ ಜನ ಸೇರಿದ್ದು, ಸ್ಥಳದಲ್ಲಿ ಬಿಗುವಿನ ಸ್ಥಿತಿ ನಿರ್ಮಾಣವಾಗಿದೆ. ನೆರೆದಿದ್ದ ಜನರನ್ನು ಪೊಲೀಸರು ಆಸ್ಪತ್ರೆಯಿಂದ ಹೊರಗೆ ಕಳುಹಿಸಿದ್ದಾರೆ. ಕಾಂಗ್ರೆಸ್ ಮುಖಂಡರು, ಮುಸ್ಲಿಂ ಸಂಘಟನೆ ಮುಖಂಡರು ಸೇರಿದ್ದು ಹುಡುಗ ಚೂರಿ ಇರಿದಿದ್ದಾನೆ, ಆತನನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿದ್ದಾರೆ.
PUC girl Student attacked by minor boy in blade, turns into Hindu muslim fight at puttur in Mangalore. Both muslim and Hindu organisations have joined in great numbers at the hospital.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 07:18 pm
HK News Staffer
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am
ಬಾಂಬ್ ಮಾದರಿಯ ವಸ್ತು ಸ್ಫೋಟಿಸಿ ರೀಲ್ಸ್ ಶೂಟಿಂಗ್ ;...
01-05-26 10:30 am