ಬ್ರೇಕಿಂಗ್ ನ್ಯೂಸ್
20-08-24 05:33 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್. 20: ಪಿಯುಸಿ ವಿದ್ಯಾರ್ಥಿನಿಯ ಕೈಗೆ ಸಹಪಾಠಿ ಬಾಲಕನೊಬ್ಬ ಬ್ಲೇಡ್ ನಲ್ಲಿ ಹಲ್ಲೆಗೈದು ಪರಾರಿಯಾದ ಘಟನೆ ಪುತ್ತೂರು ಪೇಟೆಯ ಕೊಂಬೆಟ್ಟು ಜೂನಿಯರ್ ಕಾಲೇಜು ಆವರಣದಲ್ಲಿ ನಡೆದಿದೆ.
ಇಬ್ಬರು ಒಂದೇ ಕಾಲೇಜಿನಲ್ಲಿ ಕಲಿಯುವ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾಗಿದ್ದು ಇಂದು ಬೆಳಗ್ಗೆ ಹುಡುಗ ಹಿಂಬಾಲಿಸುತ್ತ ಬಂದು ಬಾಲಕಿಯೊಂದಿಗೆ ಮಾತನಾಡುತ್ತಿದ್ದಾಗಲೇ ಸಿಟ್ಟಿಗೆದ್ದು ಕೈಯಲ್ಲಿದ್ದ ಚೂಪಾದ ವಸ್ತುವಿನಿಂದ ಗೀರಿದ್ದು ಬಾಲಕಿಯ ಕೈಗೆ ಗಾಯವಾಗಿದೆ. ಹುಡುಗಿ ಮುಸ್ಲಿಂ ಸಮುದಾಯಕ್ಕೆ ಸೇರಿದ್ದು, ಹುಡುಗ ಹಿಂದೂ ಆಗಿದ್ದಾನೆ. ಮಧ್ಯಾಹ್ನ ಕಾಲೇಜು ಬಿಟ್ಟ ಬಳಿಕ ಹುಡುಗಿ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾಳೆ.




ಘಟನೆ ತಿಳಿಯುತ್ತಲೇ ಮುಸ್ಲಿಂ ಸಂಘಟನೆ ಪ್ರಮುಖರು ಮತ್ತು ಯುವಕರು ಆಸ್ಪತ್ರೆ ಆವರಣದಲ್ಲಿ ಜಮಾಯಿಸಿದ್ದಾರೆ. ಬಾಲಕನ ವಿರುದ್ಧ ಕ್ರಮಕ್ಕೆ ಆಗ್ರಹ ಮಾಡಿದ್ದಾರೆ. ಬಾಲಕಿ ಹೇಳುವ ಪ್ರಕಾರ, ನಿನ್ನನ್ನು ಲವ್ ಮಾಡುತ್ತೇನೆ ಎಂದು ಹೇಳಿದ್ದಕ್ಕೆ ವಿದ್ಯಾರ್ಥಿನಿ ಬಾಲಕನಿಗೆ ಬೈದಿದ್ದಾಳಂತೆ. ಇದರಿಂದ ಸಿಟ್ಟಿಗೆದ್ದ ಹುಡುಗ, ತನ್ನ ಕೈಯಲ್ಲಿದ್ದ ಚೂಪಾದ ಬ್ಲೇಡ್ ನಲ್ಲಿ ಬಾಲಕಿಯ ಕೈಗೆ ಇರಿದು ಪರಾರಿಯಾಗಿದ್ದಾನೆ. ಈ ವೇಳೆ ಕಾಲೇಜಿನ ಶಿಕ್ಷಕಿಯೊಬ್ಬರು ಕೈಗೆ ಗಾಜು ತಾಗಿ ಗಾಯವಾಗಿದ್ದಾಗಿ ಹೇಳುವಂತೆ ಸಲಹೆ ನೀಡಿದ್ದರು ಎಂದು ಬಾಲಕಿ ಮಾಧ್ಯಮದ ಮುಂದೆ ಆರೋಪಿಸಿದ್ದಾಳೆ.
ಆಸ್ಪತ್ರೆ ಮುಂದೆ ಜನ ಸೇರಿದ್ದು, ಸ್ಥಳದಲ್ಲಿ ಬಿಗುವಿನ ಸ್ಥಿತಿ ನಿರ್ಮಾಣವಾಗಿದೆ. ನೆರೆದಿದ್ದ ಜನರನ್ನು ಪೊಲೀಸರು ಆಸ್ಪತ್ರೆಯಿಂದ ಹೊರಗೆ ಕಳುಹಿಸಿದ್ದಾರೆ. ಕಾಂಗ್ರೆಸ್ ಮುಖಂಡರು, ಮುಸ್ಲಿಂ ಸಂಘಟನೆ ಮುಖಂಡರು ಸೇರಿದ್ದು ಹುಡುಗ ಚೂರಿ ಇರಿದಿದ್ದಾನೆ, ಆತನನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿದ್ದಾರೆ.
PUC girl Student attacked by minor boy in blade, turns into Hindu muslim fight at puttur in Mangalore. Both muslim and Hindu organisations have joined in great numbers at the hospital.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm