ಬ್ರೇಕಿಂಗ್ ನ್ಯೂಸ್
20-08-24 10:37 pm Mangaluru Correspondent ಕ್ರೈಂ
ಬೆಳ್ತಂಗಡಿ, ಆಗಸ್ಟ್ 20: ಧರ್ಮಸ್ಥಳ ಠಾಣೆ ವ್ಯಾಪ್ತಿಯ ಬೆಳಾಲು ಗ್ರಾಮದಲ್ಲಿ ನಿವೃತ್ತ ಶಿಕ್ಷಕ, ಸ್ಥಳೀಯವಾಗಿ ಜನಾನುರಾಗಿ ವ್ಯಕ್ತಿತ್ವದ ಬಾಲಕೃಷ್ಣ ಭಟ್ (83) ಎಂಬವರನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಮಂಗಳವಾರ ಸಂಜೆ ನಾಲ್ಕು ಗಂಟೆ ಸುಮಾರಿಗೆ ಘಟನೆ ಬೆಳಕಿಗೆ ಬಂದಿದ್ದು, ಬೆಳಾಲು ಗ್ರಾಮದ ಜನರು ಸುದ್ದಿ ಕೇಳಿ ಬೆಚ್ಚಿ ಬಿದ್ದಿದ್ದಾರೆ.
ಮನೆಯ ಅಂಗಳದಲ್ಲಿ ತಲೆಯ ಭಾಗಕ್ಕೆ ಕತ್ತಿಯಿಂದ ಕಡಿದ ರೀತಿ ಮೃತದೇಹ ಪತ್ತೆಯಾಗಿದೆ. ಮನೆಯ ಒಳಗೆ ಮತ್ತು ಜಗಲಿಯಲ್ಲಿ ರಕ್ತ ಬಿದ್ದಿರುವುದು ಕಂಡುಬಂದಿದೆ. ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಬಾಲಕೃಷ್ಣ ಭಟ್ ಅವರ ಪತ್ನಿಯೂ ನಿವೃತ್ತ ಶಿಕ್ಷಕಿಯಾಗಿದ್ದು ಐದು ವರ್ಷಗಳ ಹಿಂದೆ ತೀರಿಕೊಂಡಿದ್ದರು. ಇವರಿಗೆ ಇಬ್ಬರು ಪುತ್ರರಿದ್ದು, ದೊಡ್ಡ ಮಗ ಹರೀಶ್ ಬೆಂಗಳೂರಿನಲ್ಲಿ ಸ್ವಂತ ಗ್ಯಾರೇಜ್ ಹೊಂದಿದ್ದಾರೆ. ಇನ್ನೊಬ್ಬ ಮಗ ಸುರೇಶ್ ಸರಿಯಾದ ಕೆಲಸ ಹೊಂದಿಲ್ಲ ಎನ್ನಲಾಗುತ್ತಿದ್ದು, ಪುತ್ತೂರಿಗೆಂದು ಹೋಗಿ ಬರುವುದು ಮಾಡುತ್ತಿದ್ದ. ಜೊತೆಗೆ, ಕುಡಿತದ ಚಟವನ್ನೂ ಹೊಂದಿದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ.
ಕೆಲವು ವರ್ಷಗಳಿಂದ ಬಾಲಕೃಷ್ಣ ಭಟ್ ಅವರೇ ಮನೆಯಲ್ಲಿ ಅಡುಗೆ ಕೆಲಸ ಮಾಡಿಕೊಂಡಿದ್ದರು. ಕೆಲವೊಮ್ಮೆ ಮಗನೂ ಜೊತೆಗೆ ಇರುತ್ತಿದ್ದ. ಇಂದು ಕೃತ್ಯ ನಡೆಯುವಾಗ ಮಗ ಎಲ್ಲಿದ್ದ ಎನ್ನುವುದು ಗೊತ್ತಿಲ್ಲ. ಘಟನೆ ತಿಳಿದು ಸ್ಥಳೀಯರು ಸೇರಿದಾಗ, ಮನೆಯಲ್ಲಿ ಮಗನೂ ಇದ್ದ. ಪೊಲೀಸರು ಬಂದು ಪ್ರಶ್ನೆ ಮಾಡಿದಾಗ, ನಾನು ಬರುವಾಗ ತಂದೆ ಅಂಗಳದಲ್ಲಿ ಬಿದ್ದು ಕೊಲೆಯಾಗಿದ್ದರು. ನಾನೇ ಊಟ ಮಾಡಿ ಕೊಡುತ್ತಿದ್ದೆ ಎಂದು ತಿಳಿಸಿದ್ದಾನೆ. ಮನೆಯಲ್ಲಿ ಬೇರಾವುದೇ ವಸ್ತು ಕಳವಾಗಿರುವುದು ಕಂಡುಬಂದಿಲ್ಲ. ಮಗನ ಬಗ್ಗೆಯೇ ಸ್ಥಳೀಯರಿಗೆ ಸಂಶಯಗಳಿವೆ ಎನ್ನುವ ಮಾತು ಕೇಳಿಬರುತ್ತಿದೆ.
ಬೆಳಾಲು ಶಾಲೆಯಲ್ಲೇ ಸುದೀರ್ಘ ಕಾಲ ಸೇವೆಗೈದು ನಿವೃತ್ತಿಯಾಗಿದ್ದ ಬಾಲಕೃಷ್ಣ ಭಟ್ ಅವರಿಗೆ ಅಪಾರ ಶಿಷ್ಯ ವೃಂದ ಇದೆ. ಅಕ್ಕಪಕ್ಕದ ಊರಿನವರಿಗೆಲ್ಲ ಇವರೇ ಕಲಿಸಿದವರು. ಹೀಗಾಗಿ ಇವರ ಬಗ್ಗೆ ಸ್ಥಳೀಯರು ಭಯ ಭಕ್ತಿ ಹೊಂದಿದ್ದರು. ಸುದ್ದಿ ತಿಳಿದು ಬಂದವರೆಲ್ಲ ನಮ್ಮ ಮೇಷ್ಟ್ರಿಗೆ ಈ ಸ್ಥಿತಿ ಬರಬಾರದಿತ್ತು ಎಂದು ದುಃಖಿಸಿದ್ದಾರೆ.
An 83-year-old teacher was brutally murdered in Belthangady in front of his house. The deceased has been identified as Balakrishna Bhat.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 07:18 pm
HK News Staffer
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am
ಬಾಂಬ್ ಮಾದರಿಯ ವಸ್ತು ಸ್ಫೋಟಿಸಿ ರೀಲ್ಸ್ ಶೂಟಿಂಗ್ ;...
01-05-26 10:30 am