ಬ್ರೇಕಿಂಗ್ ನ್ಯೂಸ್
23-08-24 06:15 pm Udupi Correspondent ಕ್ರೈಂ
ಉಡುಪಿ, ಆಗಸ್ಟ್.23: ಆನ್ಲೈನ್ ಮೂಲಕ ಷೇರು ಮಾರ್ಕೆಟ್ ನಲ್ಲಿ ಹಣ ಹೂಡಿಕೆ ಮಾಡಿಸಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಉಡುಪಿ ಪೊಲೀಸರು ಬಂಧಿಸಿ 13 ಲಕ್ಷ ರೂ. ನಗದು ವಶಕ್ಕೆ ಪಡೆದಿದ್ದಾರೆ.
ಉಪೇಂದ್ರ ಭಟ್ ಎಂಬವರಿಗೆ ಅಪರಿಚಿತ ವ್ಯಕ್ತಿಗಳು ಕರೆ ಮಾಡಿ ವಾಟ್ಸ್ಯಾಪ್ ನಲ್ಲಿ ಮೋತಿಲಾಲ್ ಓಸ್ವಾಲ್ ಪ್ರೈವೇಟ್ ವೆಲ್ತ್ ಮ್ಯಾನೇಜ್ ಮೆಂಟ್ ಗ್ರೂಪ್ ಗೆ ಸೇರಿಸಿ ಹಣ ಹೂಡುವಂತೆ ನಂಬಿಸಿದ್ದರು, ಅಲ್ಲದೆ, ಮೋತಿಲಾಲ್ ಓಸ್ವಾಲ್ ಪ್ರೈವೇಟ್ ವೆಲ್ತ್ ಮ್ಯಾನೇಜ್ಮೆಂಟ್ ಗ್ರೂಪ್ ನ ಅಕೌಂಟ್ ನಂಬರ್ ನೀಡಿದ್ದಾರೆ. ವಾಟ್ಸ್ಯಾಪ್ ನಲ್ಲಿ ಟ್ರೇಡಿಂಗ್ ಹಾಗೂ ಲಾಭಾಂಶಗಳ ಬಗ್ಗೆ ನಂಬಿಸಿ, ಹೆಚ್ಚಿನ ಲಾಭಾಂಶ ಪಡೆಯಬಹುದೆಂದು ಆಸೆ ತೋರಿಸಿ, ಒಟ್ಟು 33,10,000 ಹಣ ಡೆಪಾಸಿಟ್ ಮಾಡಿಸಿದ್ದಾರೆ. ಆದರೆ ಹಣ ಹಿಂಪಡೆಯಲು ಸಾಧ್ಯವಾಗದೆ ಉಪೇಂದ್ರ ಭಟ್ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.
ಈ ಬಗ್ಗೆ ವಿಶೇಷ ತಂಡ ರಚಿಸಿದ ಉಡುಪಿ ಪೊಲೀಸರು, ಆರೋಪಿಗಳ ಪೈಕಿ ಪುತ್ತೂರಿನ ಮಹಮ್ಮದ್ ಮುಸ್ತಫಾ ಪಿ. (36), ಕುಂಬ್ಳೆಯ ಖಾಲಿದ್ ಬಿ. (39 ), ಕಾಸರಗೋಡಿನ ಮೊಹಮ್ಮದ್ ಸಫಾನ್ ಕೆ.ಎ., (22) , ಮಂಗಳೂರಿನ ಸತೀಶ್ ಶೇಟ್(22 ) ಎಂಬವರನ್ನು ವಶಕ್ಕೆ ಪಡೆದು ಅವರಿಂದ 5 ಮೊಬೈಲ್ ಹಾಗೂ 13 ಲಕ್ಷ ರೂ. ನಗದು ವಶಪಡಿಸಿದ್ದಾರೆ. ಪ್ರಕರಣದ ಪ್ರಮುಖ ಸೂತ್ರಧಾರಿಗಳು ತಲೆಮರೆಸಿಕೊಂಡಿದ್ದಾರೆ.
ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಕುಮಾರ್ ಮಾರ್ಗದರ್ಶನದಲ್ಕಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಲಿಂಗಯ್ಯ ಟಿ.ಎಸ್., ಪರಮೇಶ್ವರ ಹೆಗಡೆ , ಸೆನ್ ಠಾಣೆಯ ನಿರೀಕ್ಷಕ ರಾಮಚಂದ್ರ ನಾಯಕ್, ಎಎಸ್ಐ ರಾಜೇಶ್ , ಸಿಬ್ಬಂದಿಗಳಾದ ಪ್ರವೀಣ ಕುಮಾರ್, ಅರುಣ ಕುಮಾರ್, ವೆಂಕಟೇಶ್, ಯತೀನ್ ಕುಮಾರ್, ರಾಘವೇಂದ್ರ, ಪ್ರಶಾಂತ್ ಪ್ರಸನ್ನ ಸಿ ಸಲ್ಮಾನ್, ಚಾಲಕ ಸುದೀಪ್ ಕಾರ್ಯಾಚರಣೆ ನಡೆಸಿದ್ದಾರೆ.
The Udupi police have arrested four persons and seized Rs 13 lakh from them in connection with the online fraud case. The cash has been seized.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 02:45 pm
Mangalore Correspondent
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
Headline Karnataka, Social Campaigning, Manga...
11-09-25 11:34 am
ಧರ್ಮಸ್ಥಳ ಕೇಸ್ ; ವಿಚಾರಣೆ ಮುಗಿಸಿ ಸತ್ಯಕ್ಕೆ ಜಯ ಎನ...
10-09-25 10:50 pm
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
11-09-25 02:25 pm
HK STAFF
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm