ಬ್ರೇಕಿಂಗ್ ನ್ಯೂಸ್
23-08-24 06:15 pm Udupi Correspondent ಕ್ರೈಂ
ಉಡುಪಿ, ಆಗಸ್ಟ್.23: ಆನ್ಲೈನ್ ಮೂಲಕ ಷೇರು ಮಾರ್ಕೆಟ್ ನಲ್ಲಿ ಹಣ ಹೂಡಿಕೆ ಮಾಡಿಸಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಉಡುಪಿ ಪೊಲೀಸರು ಬಂಧಿಸಿ 13 ಲಕ್ಷ ರೂ. ನಗದು ವಶಕ್ಕೆ ಪಡೆದಿದ್ದಾರೆ.
ಉಪೇಂದ್ರ ಭಟ್ ಎಂಬವರಿಗೆ ಅಪರಿಚಿತ ವ್ಯಕ್ತಿಗಳು ಕರೆ ಮಾಡಿ ವಾಟ್ಸ್ಯಾಪ್ ನಲ್ಲಿ ಮೋತಿಲಾಲ್ ಓಸ್ವಾಲ್ ಪ್ರೈವೇಟ್ ವೆಲ್ತ್ ಮ್ಯಾನೇಜ್ ಮೆಂಟ್ ಗ್ರೂಪ್ ಗೆ ಸೇರಿಸಿ ಹಣ ಹೂಡುವಂತೆ ನಂಬಿಸಿದ್ದರು, ಅಲ್ಲದೆ, ಮೋತಿಲಾಲ್ ಓಸ್ವಾಲ್ ಪ್ರೈವೇಟ್ ವೆಲ್ತ್ ಮ್ಯಾನೇಜ್ಮೆಂಟ್ ಗ್ರೂಪ್ ನ ಅಕೌಂಟ್ ನಂಬರ್ ನೀಡಿದ್ದಾರೆ. ವಾಟ್ಸ್ಯಾಪ್ ನಲ್ಲಿ ಟ್ರೇಡಿಂಗ್ ಹಾಗೂ ಲಾಭಾಂಶಗಳ ಬಗ್ಗೆ ನಂಬಿಸಿ, ಹೆಚ್ಚಿನ ಲಾಭಾಂಶ ಪಡೆಯಬಹುದೆಂದು ಆಸೆ ತೋರಿಸಿ, ಒಟ್ಟು 33,10,000 ಹಣ ಡೆಪಾಸಿಟ್ ಮಾಡಿಸಿದ್ದಾರೆ. ಆದರೆ ಹಣ ಹಿಂಪಡೆಯಲು ಸಾಧ್ಯವಾಗದೆ ಉಪೇಂದ್ರ ಭಟ್ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.
ಈ ಬಗ್ಗೆ ವಿಶೇಷ ತಂಡ ರಚಿಸಿದ ಉಡುಪಿ ಪೊಲೀಸರು, ಆರೋಪಿಗಳ ಪೈಕಿ ಪುತ್ತೂರಿನ ಮಹಮ್ಮದ್ ಮುಸ್ತಫಾ ಪಿ. (36), ಕುಂಬ್ಳೆಯ ಖಾಲಿದ್ ಬಿ. (39 ), ಕಾಸರಗೋಡಿನ ಮೊಹಮ್ಮದ್ ಸಫಾನ್ ಕೆ.ಎ., (22) , ಮಂಗಳೂರಿನ ಸತೀಶ್ ಶೇಟ್(22 ) ಎಂಬವರನ್ನು ವಶಕ್ಕೆ ಪಡೆದು ಅವರಿಂದ 5 ಮೊಬೈಲ್ ಹಾಗೂ 13 ಲಕ್ಷ ರೂ. ನಗದು ವಶಪಡಿಸಿದ್ದಾರೆ. ಪ್ರಕರಣದ ಪ್ರಮುಖ ಸೂತ್ರಧಾರಿಗಳು ತಲೆಮರೆಸಿಕೊಂಡಿದ್ದಾರೆ.
ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಕುಮಾರ್ ಮಾರ್ಗದರ್ಶನದಲ್ಕಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಲಿಂಗಯ್ಯ ಟಿ.ಎಸ್., ಪರಮೇಶ್ವರ ಹೆಗಡೆ , ಸೆನ್ ಠಾಣೆಯ ನಿರೀಕ್ಷಕ ರಾಮಚಂದ್ರ ನಾಯಕ್, ಎಎಸ್ಐ ರಾಜೇಶ್ , ಸಿಬ್ಬಂದಿಗಳಾದ ಪ್ರವೀಣ ಕುಮಾರ್, ಅರುಣ ಕುಮಾರ್, ವೆಂಕಟೇಶ್, ಯತೀನ್ ಕುಮಾರ್, ರಾಘವೇಂದ್ರ, ಪ್ರಶಾಂತ್ ಪ್ರಸನ್ನ ಸಿ ಸಲ್ಮಾನ್, ಚಾಲಕ ಸುದೀಪ್ ಕಾರ್ಯಾಚರಣೆ ನಡೆಸಿದ್ದಾರೆ.
The Udupi police have arrested four persons and seized Rs 13 lakh from them in connection with the online fraud case. The cash has been seized.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm