ಬ್ರೇಕಿಂಗ್ ನ್ಯೂಸ್
23-08-24 08:20 pm Bangalore Correspondent ಕ್ರೈಂ
ಬೆಂಗಳೂರು, ಆಗಸ್ಟ್ 23: ಪುರುಷರ ವೇಷ ಧರಿಸಿ ಮನೆ, ಅಂಗಡಿಗಳಲ್ಲಿ ಕಳ್ಳತನ ಮಾಡುತ್ತಿದ್ದ ಆರೋಪಿಗಳ ಗುಂಪಿನ ಓರ್ವ ಮಹಿಳೆಯೊಬ್ಬಳನ್ನು ಬಗಲಗುಂಟೆ ಠಾಣಾ ಪೊಲೀಸರು ಬಂಧಿಸಿದ್ದಾರೆ. ನಿಲೂಪರ್ (22) ಬಂಧಿತೆ. ಆರೋಪಿತಳಿಂದ 4.9 ಲಕ್ಷ ಮೌಲ್ಯದ 70 ಗ್ರಾಂ ಚಿನ್ನಾಭರಣಗಳನ್ನು ವಶಕ್ಕೆ ಪಡೆಯಲಾಗಿದೆ.
ಆರೋಪಿಯು ಅಪ್ರಾಪ್ತ ಬಾಲಕಿಸಹಿತ ನಾಲ್ವರು ಸದಸ್ಯರ ತಂಡ ಹೊಂದಿದ್ದಳು. ಮೋಜು-ಮಸ್ತಿಯ ಹವ್ಯಾಸ ಹೊಂದಿದ್ದ ಆರೋಪಿಗಳ ಪೈಕಿ ಮೂವರು ಮಹಿಳೆಯರು ಪುರುಷರ ವೇಷ ಧರಿಸಿ ಆಟೋ ಚಲಾಯಿಸಿಕೊಂಡು ಬಂದು ಅಂಗಡಿ ಮನೆಗಳಲ್ಲಿ ಮಾಲೀಕರೊಂದಿಗೆ ಮಾತುಕತೆಗಿಳಿಯುತ್ತಿದ್ದರು. ಅದೇ ಸಮಯದಲ್ಲಿ ಆರೋಪಿಗಳ ಗುಂಪಿನಲ್ಲಿರುವ ಬಾಲಕಿ ಮನೆ/ಅಂಗಡಿಗಳಲ್ಲಿರುವ ಚಿನ್ನಾಭರಣ, ನಗದು ಕಳವು ಮಾಡುತ್ತಿದ್ದಳು. ಆರೋಪಿಗಳು ಇದೇ ರೀತಿ ಆಗಸ್ಟ್ 2ರಂದು ಬಗಲಗುಂಟೆ ವ್ಯಾಪ್ತಿಯೊಂದರಲ್ಲಿ ಅಂಗಡಿಗೆ ಹೊಂದಿಕೊಂಡಿರುವ ಮನೆಯೊಂದರಲ್ಲಿ ಕಳ್ಳತನ ಮಾಡಿ ಪರಾರಿಯಾಗಿದ್ದರು. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು, ಆಗಸ್ಟ್ 15ರಂದು ಡಿ.ಜೆ.ಹಳ್ಳಿ ಸಮೀಪದ ಶಾಂಪುರ ಬಳಿ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಆಕೆ ತಪ್ಪೊಪ್ಪಿಕೊಂಡಿದ್ದಾಳೆ. ಉಳಿದ ಮೂವರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.

ಬಂಧಿತಳಿಂದ 4.9 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ಇನ್ನೂ 55 ಗ್ರಾಂ ಚಿನ್ನದ ಒಡವೆಗಳನ್ನು ತಲೆಮರೆಸಿಕೊಂಡಿರುವ ಆರೋಪಿತೆಯರ ಪೈಕಿ ಓರ್ವಳು ತೆಗೆದುಕೊಂಡು ಹೋಗಿರುವುದಾಗಿ ಆರೋಪಿ ಮಾಹಿತಿ ನೀಡಿದ್ದಾಳೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
22 year old girl arrested for stealing gold from house and shops in Bangalore. The accused has been identified as Nilupar.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm