ಬ್ರೇಕಿಂಗ್ ನ್ಯೂಸ್
23-08-24 08:20 pm Bangalore Correspondent ಕ್ರೈಂ
ಬೆಂಗಳೂರು, ಆಗಸ್ಟ್ 23: ಪುರುಷರ ವೇಷ ಧರಿಸಿ ಮನೆ, ಅಂಗಡಿಗಳಲ್ಲಿ ಕಳ್ಳತನ ಮಾಡುತ್ತಿದ್ದ ಆರೋಪಿಗಳ ಗುಂಪಿನ ಓರ್ವ ಮಹಿಳೆಯೊಬ್ಬಳನ್ನು ಬಗಲಗುಂಟೆ ಠಾಣಾ ಪೊಲೀಸರು ಬಂಧಿಸಿದ್ದಾರೆ. ನಿಲೂಪರ್ (22) ಬಂಧಿತೆ. ಆರೋಪಿತಳಿಂದ 4.9 ಲಕ್ಷ ಮೌಲ್ಯದ 70 ಗ್ರಾಂ ಚಿನ್ನಾಭರಣಗಳನ್ನು ವಶಕ್ಕೆ ಪಡೆಯಲಾಗಿದೆ.
ಆರೋಪಿಯು ಅಪ್ರಾಪ್ತ ಬಾಲಕಿಸಹಿತ ನಾಲ್ವರು ಸದಸ್ಯರ ತಂಡ ಹೊಂದಿದ್ದಳು. ಮೋಜು-ಮಸ್ತಿಯ ಹವ್ಯಾಸ ಹೊಂದಿದ್ದ ಆರೋಪಿಗಳ ಪೈಕಿ ಮೂವರು ಮಹಿಳೆಯರು ಪುರುಷರ ವೇಷ ಧರಿಸಿ ಆಟೋ ಚಲಾಯಿಸಿಕೊಂಡು ಬಂದು ಅಂಗಡಿ ಮನೆಗಳಲ್ಲಿ ಮಾಲೀಕರೊಂದಿಗೆ ಮಾತುಕತೆಗಿಳಿಯುತ್ತಿದ್ದರು. ಅದೇ ಸಮಯದಲ್ಲಿ ಆರೋಪಿಗಳ ಗುಂಪಿನಲ್ಲಿರುವ ಬಾಲಕಿ ಮನೆ/ಅಂಗಡಿಗಳಲ್ಲಿರುವ ಚಿನ್ನಾಭರಣ, ನಗದು ಕಳವು ಮಾಡುತ್ತಿದ್ದಳು. ಆರೋಪಿಗಳು ಇದೇ ರೀತಿ ಆಗಸ್ಟ್ 2ರಂದು ಬಗಲಗುಂಟೆ ವ್ಯಾಪ್ತಿಯೊಂದರಲ್ಲಿ ಅಂಗಡಿಗೆ ಹೊಂದಿಕೊಂಡಿರುವ ಮನೆಯೊಂದರಲ್ಲಿ ಕಳ್ಳತನ ಮಾಡಿ ಪರಾರಿಯಾಗಿದ್ದರು. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು, ಆಗಸ್ಟ್ 15ರಂದು ಡಿ.ಜೆ.ಹಳ್ಳಿ ಸಮೀಪದ ಶಾಂಪುರ ಬಳಿ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಆಕೆ ತಪ್ಪೊಪ್ಪಿಕೊಂಡಿದ್ದಾಳೆ. ಉಳಿದ ಮೂವರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.

ಬಂಧಿತಳಿಂದ 4.9 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ಇನ್ನೂ 55 ಗ್ರಾಂ ಚಿನ್ನದ ಒಡವೆಗಳನ್ನು ತಲೆಮರೆಸಿಕೊಂಡಿರುವ ಆರೋಪಿತೆಯರ ಪೈಕಿ ಓರ್ವಳು ತೆಗೆದುಕೊಂಡು ಹೋಗಿರುವುದಾಗಿ ಆರೋಪಿ ಮಾಹಿತಿ ನೀಡಿದ್ದಾಳೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
22 year old girl arrested for stealing gold from house and shops in Bangalore. The accused has been identified as Nilupar.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 07:18 pm
HK News Staffer
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am
ಬಾಂಬ್ ಮಾದರಿಯ ವಸ್ತು ಸ್ಫೋಟಿಸಿ ರೀಲ್ಸ್ ಶೂಟಿಂಗ್ ;...
01-05-26 10:30 am