ಬ್ರೇಕಿಂಗ್ ನ್ಯೂಸ್
27-08-24 10:11 pm HK News Desk ಕ್ರೈಂ
ಹುಬ್ಬಳ್ಳಿ , ಆ 26: ತಂತ್ರಜ್ಞಾನ ಬೆಳೆದಂತೆ ಸೈಬರ್ ಕಳ್ಳರು ಅಮಾಯಕರನ್ನು ವಂಚಿಸಲು ವಿಚಿತ್ರ ದಾರಿಗಳನ್ನು ಕಂಡುಕೊಳ್ಳುತ್ತಿದ್ದಾರೆ. ಸೈಬರ್ ಕಳ್ಳರ ಹಾವಳಿಯಿಂದ ಅನೇಕ ಜನರು ಹಣ ಕಳೆದುಕೊಂಡು ಕಂಗಾಲಾಗುತ್ತಿದ್ದಾರೆ. ಈ ಮಧ್ಯೆ ಹುಬ್ಬಳ್ಳಿ ನಿವಾಸಿಯೊಬ್ಬರು ಸುಮಾರು 64 ಲಕ್ಷ ರೂ. ಕಳೆದುಕೊಂಡು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ನಿವೃತ್ತ ಬ್ಯಾಂಕ್ ಉದ್ಯೋಗಿಯಾಗಿರುವ ಸುತ್ತೂರಿನ ನಿವಾಸಿ ಶಿವರಾಮ್ ಪುರೋಹಿತ್ ವಂಚನೆಗೊಳಗಾದವರು.
ದೂರಿನಲ್ಲೇನಿದೆ?:
01 ಏಪ್ರಿಲ್ 2024 ರಂದು ಇನ್ಸ್ಟಾಗ್ರಾಂನಲ್ಲಿ SNS Investment Old Coin Gallery, Mumbai ಎಂಬ ಕಂಪನಿಯ ಜಾಹೀರಾತು ನೋಡಿದ್ದೆ. ಇದರಲ್ಲಿ ಹಳೆಯ ನೋಟು ಹಾಗೂ ನಾಣ್ಯಗಳನ್ನು ಪಡೆದುಕೊಂಡು ಅದಕ್ಕೆ ಒಳ್ಳೆಯ ಬೆಲೆಯನ್ನು ಕೊಡುವುದಾಗಿ ಪ್ರಕಟಿಸಲಾಗಿತ್ತು. ಆ ಜಾಹೀರಾತು ನಿಜವೆಂದು ನಂಬಿದ ಅದರಲ್ಲಿನ ವಾಟ್ಸಾಪ್ ನಂಬರಿಗೆ ತಮ್ಮ ಬಳಿ ಇರುವ 5 ರೂಪಾಯಿಯ ಫೋಟೋವನ್ನು ಕಳುಹಿಸಿದ್ದೆ.
ಕಂಪನಿಯವರು ಈ ಐದು ರೂಪಾಯಿ ನೋಟಿಗೆ 11 ಲಕ್ಷ ಬೆಲೆಯನ್ನು ನಿಗದಿಪಡಿಸಿದ್ದರು. ಆದ್ರೆ ಈ 11 ಲಕ್ಷ ರೂಪಾಯಿಯನ್ನು ಪಡೆಯಲು ವಿವಿಧ ಶುಲ್ಕ ಪಾವತಿಸಬೇಕು ಎಂದು ನಂಬಿಸಿದ್ದರು. ವಿವಿಧ ಚಾರ್ಜ್ಗಳ ರೂಪದಲ್ಲಿ ನನ್ನ ವಿವಿಧ ಬ್ಯಾಂಕ್ ಖಾತೆಗಳಿಂದ ಆರೋಪಿಗಳು ತಮ್ಮ ವಿವಿಧ ಬ್ಯಾಂಕ್ ಖಾತೆಗಳಿಗೆ ಹಂತ ಹಂತವಾಗಿ ಒಟ್ಟು ರೂ. 52,12,654 ಲಕ್ಷ ಹಣವನ್ನ ವರ್ಗಾಯಿಸಿಕೊಂಡಿದ್ದಾರೆ ಎಂದು ಶಿವರಾಮ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
Quikr Company, Kolkota ಸಹ ವಿವಿಧ ಚಾರ್ಜ್ ಗಳ ರೂಪದಲ್ಲಿ ವಿವಿಧ ಬ್ಯಾಂಕ್ ಖಾತೆಗಳಿಂದ ತಮ್ಮ ವಿವಿಧ ಬ್ಯಾಂಕ್ ಖಾತೆಗಳಿಗೆ ಹಂತ ಹಂತವಾಗಿ ಒಟ್ಟು ರೂ. 10,89,766 ಹಣವನ್ನು ವರ್ಗಾಯಿಸಿಕೊಂಡು ವಂಚಿಸಿದ್ದಾರೆ ಎಂದು ಶಿವರಾಮ್ ದೂರಿನಲ್ಲಿ ತಿಳಿಸಿದ್ದಾರೆ.
ಹಂತ ಹಂತವಾಗಿ ಒಟ್ಟು 63,02,423 ಲಕ್ಷ ರೂ. ವರ್ಗಾಯಿಸಿಕೊಂಡು ವಂಚಿಸಿದ್ದಾರೆ ಎಂದು ಆರೋಪಿಸಿ ದೂರುದಾರ ಶಿವರಾಮ್ ಅವರು ಮುಂಬೈನ ಶಿವರಾಜ್ ರಾವ್, ಎಸ್ಎನ್ಎಸ್ ಇನ್ವೆಸ್ಟ್ಮೆಂಟ್ ಓಲ್ಡ್ ಕ್ವಾಯಿನ್ ಗ್ಯಾಲರಿ, ಶಹಿಲ್ಮುಂಬೈ, ಪಂಕಜ್ಸಿಂಗ್ ಮುಂಬೈ, ಕ್ವಿಕರ್ ಕೋಲ್ಕತ್ತಾ ಹಾಗೂ ಟ್ಯಾನಮೆ ಸನ್ಬೋಟ್ ಕೋಲ್ಕತ್ತಾ ಅವರ ಮೇಲೆ ಹುಬ್ಬಳ್ಳಿಯ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದಾರೆ.
Former bank employee from Hubballi looses 64 lakhs in old note exchange fraud. A case has been registered at the cyber crime police station
02-01-26 04:13 pm
HK News Desk
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
ಬೆಂಗಳೂರಿನಿಂದ ಕನ್ಯಾಕುಮಾರಿಗೆ ಸೈಕಲ್ ಸವಾರಿ ; 70ರ...
01-01-26 03:05 pm
01-01-26 09:34 pm
HK News Desk
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
02-01-26 02:02 pm
Mangalore Correspondent
Dr Vinaya Hegde Death, NItte Mangalore: ನಿಟ್ಟ...
01-01-26 09:43 am
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm