ಬ್ರೇಕಿಂಗ್ ನ್ಯೂಸ್
09-12-20 02:58 pm Mangalore Correspondent ಕ್ರೈಂ
ಮಂಗಳೂರು, ಡಿ.9 : ಸೋಮವಾರ ರಾತ್ರಿ ಮದುವೆ ಮನೆಯಲ್ಲಿ ನಡೆದ ದಾಂಧಲೆಗೆ ಸಂಬಂಧಿಸಿ ರೌಡಿಶೀಟರ್ ಸಹಿತ ನಾಲ್ವರನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ.
ಸ್ಥಳೀಯ ನಿವಾಸಿ ರೌಡಿಶೀಟರ್ ಗೌರೀಶ್, ಆತನ ಸ್ನೇಹಿತರಾದ ತಲಪಾಡಿಯ ಸುಮಂತ್, ಬಜಾಲ್ ನಿವಾಸಿ ಸುಮಂತ್ ಮತ್ತು ಆಶಿತ್ ಬಂಧಿತರು.
ಮುಂಬೈಯಿಂದ ಮದುವೆ ಕಾರ್ಯಕ್ರಮಕ್ಕೆ ಆಗಮಿಸಿದವರು, ಗೌರೀಶ್ ಬಳಿ ದಾರಿ ಕೇಳಿದ ವಿಚಾರದಲ್ಲಿ ಮಾತಿಗೆ ಮಾತು ಬೆಳೆದು ದಾಂಧಲೆ ನಡೆದಿದೆ. ಈ ಸಂದರ್ಭ ಗೌರೀಶ್ ತನ್ನ ಗೆಳೆಯರನ್ನು ಕರೆಯಿಸಿ ಮಹಿಳೆಯರನ್ನು ಎಳೆದಾಡಿ, ಹೆಲ್ಮೆಟ್ನಿಂದ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ.
ಈ ಬಗ್ಗೆ ಕಂಟ್ರೋಲ್ ರೂಮಿನಿಂದ ಬಂದ ಸೂಚನೆಯಂತೆ ಸಾಗರ ವಾಹನದಲ್ಲಿ ಕರ್ತವ್ಯದಲ್ಲಿದ್ದ ಕಂಕನಾಡಿ ನಗರ ಠಾಣೆಯ ಹೆಡ್ ಕಾನ್ಸ್ಟೇಬಲ್ ನಾರಾಯಣ ಎಂ.ಕೆ. ಸ್ಥಳಕ್ಕೆ ತೆರಳಿ ಗೌರೀಶ್ ನನ್ನು ವಶಕ್ಕೆ ಪಡೆಯಲು ಮುಂದಾದಾಗ ಆರೋಪಿಗಳು ಪೊಲೀಸರ ಸಮವಸ್ತ್ರಕ್ಕೆ ಕೈ ಹಾಕಿ ಕರ್ತವ್ಯಕ್ಕೆ ಅಡ್ಡಿ ಉಂಟು ಮಾಡಿದ್ದರು. ಅಲ್ಲದೆ, ಬೆದರಿಕೆಯೊಡ್ಡಿ ಪರಾರಿಯಾಗಿದ್ದಾರೆ ಎಂದು ದೂರು ನೀಡಲಾಗಿದ್ದು, ಪ್ರಕರಣ ದಾಖಲಾಗಿದೆ.
ಕಂಕನಾಡಿ ನಗರ ಠಾಣೆ ಪೊಲೀಸರು ಅಂದು ರಾತ್ರಿಯೇ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ರೌಡಿಶೀಟರ್ ಗೌರೀಶ್ ಹಲವು ಪ್ರಕರಣಗಳಲ್ಲಿ ಆರೋಪಿಯಾಗಿದ್ದು, ಕಳೆದ ವರ್ಷವೂ ಬಂಧಿಸಲು ಹೋಗಿದ್ದ ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದ. ಈ ಸಂದರ್ಭ ಆತನ ಕಾಲಿಗೆ ಗುಂಡು ಹೊಡೆದು ಪೊಲೀಸರು ಬಂಧಿಸಿದ್ದರು.
Mangalore Rowdy Shetter Gowrish and three others arrested for creating Chaos in Marriage House in Padil and also for assaulting cop who came to solve the issue.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm