ಬ್ರೇಕಿಂಗ್ ನ್ಯೂಸ್
09-12-20 02:58 pm Mangalore Correspondent ಕ್ರೈಂ
ಮಂಗಳೂರು, ಡಿ.9 : ಸೋಮವಾರ ರಾತ್ರಿ ಮದುವೆ ಮನೆಯಲ್ಲಿ ನಡೆದ ದಾಂಧಲೆಗೆ ಸಂಬಂಧಿಸಿ ರೌಡಿಶೀಟರ್ ಸಹಿತ ನಾಲ್ವರನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ.
ಸ್ಥಳೀಯ ನಿವಾಸಿ ರೌಡಿಶೀಟರ್ ಗೌರೀಶ್, ಆತನ ಸ್ನೇಹಿತರಾದ ತಲಪಾಡಿಯ ಸುಮಂತ್, ಬಜಾಲ್ ನಿವಾಸಿ ಸುಮಂತ್ ಮತ್ತು ಆಶಿತ್ ಬಂಧಿತರು.
ಮುಂಬೈಯಿಂದ ಮದುವೆ ಕಾರ್ಯಕ್ರಮಕ್ಕೆ ಆಗಮಿಸಿದವರು, ಗೌರೀಶ್ ಬಳಿ ದಾರಿ ಕೇಳಿದ ವಿಚಾರದಲ್ಲಿ ಮಾತಿಗೆ ಮಾತು ಬೆಳೆದು ದಾಂಧಲೆ ನಡೆದಿದೆ. ಈ ಸಂದರ್ಭ ಗೌರೀಶ್ ತನ್ನ ಗೆಳೆಯರನ್ನು ಕರೆಯಿಸಿ ಮಹಿಳೆಯರನ್ನು ಎಳೆದಾಡಿ, ಹೆಲ್ಮೆಟ್ನಿಂದ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ.
ಈ ಬಗ್ಗೆ ಕಂಟ್ರೋಲ್ ರೂಮಿನಿಂದ ಬಂದ ಸೂಚನೆಯಂತೆ ಸಾಗರ ವಾಹನದಲ್ಲಿ ಕರ್ತವ್ಯದಲ್ಲಿದ್ದ ಕಂಕನಾಡಿ ನಗರ ಠಾಣೆಯ ಹೆಡ್ ಕಾನ್ಸ್ಟೇಬಲ್ ನಾರಾಯಣ ಎಂ.ಕೆ. ಸ್ಥಳಕ್ಕೆ ತೆರಳಿ ಗೌರೀಶ್ ನನ್ನು ವಶಕ್ಕೆ ಪಡೆಯಲು ಮುಂದಾದಾಗ ಆರೋಪಿಗಳು ಪೊಲೀಸರ ಸಮವಸ್ತ್ರಕ್ಕೆ ಕೈ ಹಾಕಿ ಕರ್ತವ್ಯಕ್ಕೆ ಅಡ್ಡಿ ಉಂಟು ಮಾಡಿದ್ದರು. ಅಲ್ಲದೆ, ಬೆದರಿಕೆಯೊಡ್ಡಿ ಪರಾರಿಯಾಗಿದ್ದಾರೆ ಎಂದು ದೂರು ನೀಡಲಾಗಿದ್ದು, ಪ್ರಕರಣ ದಾಖಲಾಗಿದೆ.
ಕಂಕನಾಡಿ ನಗರ ಠಾಣೆ ಪೊಲೀಸರು ಅಂದು ರಾತ್ರಿಯೇ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ರೌಡಿಶೀಟರ್ ಗೌರೀಶ್ ಹಲವು ಪ್ರಕರಣಗಳಲ್ಲಿ ಆರೋಪಿಯಾಗಿದ್ದು, ಕಳೆದ ವರ್ಷವೂ ಬಂಧಿಸಲು ಹೋಗಿದ್ದ ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದ. ಈ ಸಂದರ್ಭ ಆತನ ಕಾಲಿಗೆ ಗುಂಡು ಹೊಡೆದು ಪೊಲೀಸರು ಬಂಧಿಸಿದ್ದರು.
Mangalore Rowdy Shetter Gowrish and three others arrested for creating Chaos in Marriage House in Padil and also for assaulting cop who came to solve the issue.
28-03-26 08:39 pm
HK News Staffer
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
28-03-26 09:08 pm
HK News Staffer
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
28-03-26 07:21 pm
HK News Staffer
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm