ಬ್ರೇಕಿಂಗ್ ನ್ಯೂಸ್
29-08-24 09:02 pm Udupi Correspondent ಕ್ರೈಂ
ಉಡುಪಿ, ಆಗಸ್ಟ್.29: ಯುವತಿಯೊಬ್ಬಳು ಕೃಷ್ಣಾಷ್ಟಮಿ ಪ್ರಯುಕ್ತ ರೈಲಿನಲ್ಲಿ ಬೆಂಗಳೂರಿನಿಂದ ಊರಿಗೆ ಬರುತ್ತಿದ್ದಾಗ ಯುವಕನೊಬ್ಬ ಮಾನಭಂಗಕ್ಕೆ ಯತ್ನಿಸಿದ್ದು ದೂರು ದಾಖಲಾದ 24 ಗಂಟೆಯಲ್ಲೇ ಮಣಿಪಾಲ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಭಟ್ಕಳ ಮೂಲದ ಮೊಹಮ್ಮದ್ ಶುರೈಮ್ (22) ಬಂಧಿತ ಆರೋಪಿ.
ಮೂಲತಃ ಉಡುಪಿ ತಾಲೂಕಿನ ಮಣಿಪಾಲದ ಯುವತಿ ಬೆಂಗಳೂರಿನಲ್ಲಿ ಐಟಿ ಕಂಪನಿಯಲ್ಲಿ ಉದ್ಯೋಗದಲ್ಲಿದ್ದು ಕೃಷ್ಣ ಜನ್ಮಾಷ್ಟಮಿ ಹಿನ್ನೆಲೆ ಶನಿವಾರ ರಾತ್ರಿ ಊರಿಗೆ ಹೊರಟಿದ್ದರು. ಭಾನುವಾರ ಮುಂಜಾನೆ ರೈಲು ಸಂಚರಿಸುತ್ತಿದ್ದಾಗಲೇ ಯುವಕನೋರ್ವ ಅಸಭ್ಯ ವರ್ತನೆ ತೋರಿದ್ದಾನೆ. ಇನ್ನೇನು ಉಡುಪಿ ತಲುಪಲು ಅರ್ಧ ಗಂಟೆ ಇರುವಾಗ ಮೈಗೆ ಕೈಹಾಕಿ ಮಾನಭಂಗಕ್ಕೆ ಯತ್ನಿಸಿದ್ದಾನೆ. ಯುವತಿ ಆಕ್ಷೇಪ ವ್ಯಕ್ತಪಡಿಸಿದ್ದು ಜೋರು ಮಾಡುತ್ತಲೇ ಆರೋಪಿ ಶುರೈಮ್ ಕ್ಷಮೆ ಯಾಚಿಸಿದ್ದಾನೆ. ಇದೇ ವೇಳೆ, ಯುವತಿ ಆತನ ಫೋಟೊವನ್ನು ಕ್ಲಿಕ್ಕಿಸಿಕೊಂಡಿದ್ದರು.
ಉಡುಪಿಯಲ್ಲಿ ರೈಲಿನಿಂದ ಇಳಿಯುತ್ತಲೇ ರೈಲ್ವೆ ಪೊಲೀಸ್ಗೆ ಯುವತಿ ಮಾಹಿತಿ ನೀಡಿದ್ದಾರೆ. ರೈಲ್ವೆ ಆ್ಯಪ್ ಮೂಲಕವೂ ದೂರು ದಾಖಲಿಸಿದ್ದರು. ಯುವತಿ ನೀಡಿದ ಮಾಹಿತಿ ಆಧರಿಸಿ ಮಣಿಪಾಲ ಪೊಲೀಸರು ಆರೋಪಿ ಪತ್ತೆಗೆ ಕಾರ್ಯಾಚರಣೆ ನಡೆಸಿದ್ದಾರೆ.
ದೂರು ಮತ್ತು ಫೋಟೊ ಹಿಡಿದು ಶೋಧಕ್ಕಿಳಿದ ಪೊಲೀಸರು ಮೊದಲಿಗೆ ಅಂದು ರೈಲಿನಲ್ಲಿ ಪ್ರಯಾಣಿಸಿದ್ದ ಎಲ್ಲ ಪ್ರಯಾಣಿಕರ ವಿವರ ಪಡೆದಿದ್ದಾರೆ. ಘಟನೆ ನಡೆದದ್ದು ವೀಕೆಂಡ್ ಆದ ಹಿನ್ನೆಲೆ ಬೆಂಗಳೂರು-ಮುರ್ಡೇಶ್ವರ ನಡುವೆ ಸಂಚರಿಸುವ ಮುರ್ಡೇಶ್ವರ ಎಕ್ಸ್ ಪ್ರೆಸ್ ರೈಲಿನಲ್ಲಿ ಶನಿವಾರ ಸಾವಿರಕ್ಕೂ ಹೆಚ್ಚು ಮಂದಿ ಪ್ರಯಾಣಿಸಿದ್ದರು. ದೂರಿನಲ್ಲಿ ನೀಡಿದ್ದ ಮಾಹಿತಿ ಆಧರಿಸಿ ಮೂರು ಹಂತಗಳಲ್ಲಿ ಶಾರ್ಟ್ ಲಿಸ್ಟ್ ಮಾಡಿ ಶೋಧ ನಡೆಸಿದ್ದಾರೆ. ಜೊತೆಗೆ, ಉಡುಪಿ ಮತ್ತು ಆನಂತರದ ನಿಲ್ದಾಣಗಳಲ್ಲಿ ಇಳಿದು ಹೋದವರನ್ನು ಸಿಸಿಟಿವಿಯಲ್ಲಿ ಪರಿಶೀಲನೆ ನಡೆಸಿದ್ದಾರೆ.
ಆರೋಪಿ ಭಟ್ಕಳದಲ್ಲಿ ಇಳಿದಿದ್ದನ್ನ ಪತ್ತೆಹಚ್ಚಿದ ಪೊಲೀಸರು ಆತನ ಮಾಹಿತಿ ಪಡೆದು ನೇರವಾಗಿ ಭಟ್ಕಳದ ನಿವಾಸದಿಂದಲೇ ಬಂಧಿಸಿದ್ದಾರೆ. ಹೆಸರು, ಮಾಹಿತಿ ಇಲ್ಲದಿದ್ದರೂ ಪೊಲೀಸರು ಕರಾರುವಾಕ್ಕಾಗಿ ಕಾರ್ಯಾಚರಣೆ ನಡೆಸಿದ್ದು ಶ್ಲಾಘನೆಗೆ ಪಾತ್ರವಾಗಿದೆ.
The 22-year-old man, who tried to sexually assault a woman software professional on a running train in the Udupi district of Karnataka, has been arrested, said officials here on Thursday. The incident happened on an express train on Sunday as the woman was travelling from Bengaluru to Manipal town near Udupi City.
02-01-26 04:13 pm
HK News Desk
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
ಬೆಂಗಳೂರಿನಿಂದ ಕನ್ಯಾಕುಮಾರಿಗೆ ಸೈಕಲ್ ಸವಾರಿ ; 70ರ...
01-01-26 03:05 pm
01-01-26 09:34 pm
HK News Desk
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
02-01-26 02:02 pm
Mangalore Correspondent
Dr Vinaya Hegde Death, NItte Mangalore: ನಿಟ್ಟ...
01-01-26 09:43 am
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm