ಬ್ರೇಕಿಂಗ್ ನ್ಯೂಸ್
30-08-24 03:31 pm HK News Desk ಕ್ರೈಂ
ಬೆಳಗಾವಿ, ಆ 29: ಕಿರಾತಕರ ಗ್ಯಾಂಗ್ವೊಂದು ಸಿನಿಮೀಯ ರೀತಿಯಲ್ಲಿ ರಾತೋರಾತ್ರಿ ಪಟ್ಟಣ ಪಂಚಾಯತ್ ಸದಸ್ಯನ ಅಪಹರಣ ಮಾಡಿದ್ದಾರೆ. ಬೆಳಗಾವಿ ಜಿಲ್ಲೆಯ ಕಿತ್ತೂರಿನ ಚೌಕಿಮಠ ಬಳಿ ಘಟನೆ ನಡೆದಿದೆ.
ಕಿತ್ತೂರು ಪಟ್ಟಣ ಪಂ ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಿಗದಿ ಆಗಿತ್ತು. ಬಿಜೆಪಿ ಸದಸ್ಯ ನಾಗರಾಜ್ ಅಸುಂಡಿ ಎಂಬಾತನನ್ನು ಕಾಂಗ್ರೆಸ್ ಸದಸ್ಯರು ಕಿಡ್ನ್ಯಾಪ್ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಸದ್ಯ ಈ ಸಂಬಂಧ ಅಶೋಕ್ ಮಾಳಗಿ, ಬಸವರಾಜ್ ಸಂಗೊಳ್ಳಿ, ಸುರೇಶ ಕಡೆಮನಿ ಎಂಬುವವರ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಈ ಮೂವರು ಸೇರಿ ನನ್ನ ಮಗನನ್ನು ಕಿಡ್ನ್ಯಾಪ್ ಮಾಡಿದ್ದಾರೆಂದು ನಾಗರಾಜ್ ತಂದೆ ಬಸವರಾಜ್ ಅಸುಂಡಿ ಕಿತ್ತೂರು ಠಾಣೆಗೆ ದೂರು ನೀಡಿದ್ದಾರೆ. ಸೆಪ್ಟಂಬರ್ 3 ರಂದು ಕಿತ್ತೂರು ಪಟ್ಟಣ ಪಂ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನದ ಚುನಾವಣೆ ನಿಗದಿಯಾಗಿತ್ತು.
ಕಿತ್ತೂರು ಪಟ್ಟಣ ಪಂಚಾಯತ್ ಬಿಜೆಪಿಯ 9 ಹಾಗೂ ಕಾಂಗ್ರೇಸ್ ನ 5 ಪಕ್ಷೇತರ 4 ಸದಸ್ಯರ ಬಲ ಹೊಂದಿದೆ. ಈ ವೇಳೆ ಬಿಜೆಪಿ ಸದಸ್ಯನ ಕಿಡ್ನ್ಯಾಪ್ ಮಾಡಿ ಕಾಂಗ್ರೆಸ್ ಸದಸ್ಯರು ಅಧ್ಯಕ್ಷ ಸ್ಥಾನಕ್ಕೇರುವ ಪ್ಲಾನ್ ಮಾಡಿದ್ದರು. ಸದ್ಯ ನಾಗರಾಜ್ನನ್ನು ಅಪಹರಿಸಿ ಅಜ್ಞಾತ ಸ್ಥಳದಲ್ಲಿ ಇರಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಕಿತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ದೂರು ದಾಖಲಾಗುತ್ತಿದ್ದಂತೆ ಅಲರ್ಟ್ ಆದ ಬೆಳಗಾವಿ ಪೊಲೀಸರು ಕಿಡ್ನ್ಯಾಪ್ ಮಾಡಿದವರಿಗೆ ತಲಾಶ್ ನಡೆಸಲು ಬೆಳಗಾವಿ ಎಸ್ಪಿ ಡಾ.ಭೀಮಾಶಂಕರ್ ಗುಳೇದ ಅವರು ಮೂರು ತಂಡಗಳ ರಚನೆ ಮಾಡಿದ್ದಾರೆ.
ಸುದ್ದಿ ತಿಳಿಯುತ್ತಿದ್ದಂತೆ ಬಿಜೆಪಿಯ ಕಾರ್ಯಕರ್ತರು ತಡರಾತ್ರಿಯೇ ಕಿತ್ತೂರು ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಈ ಸಂಬಂಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ ಮಾಹಿತಿ ನೀಡಿದ್ದು, ಬಿಜೆಪಿ ಸದಸ್ಯರೊಬ್ಬರ ಅಪಹರಣ ಸಂಬಂಧ ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A BJP member of the Town Panchayat, Nagaraj Asundi, was kidnapped from the town on Thursday night in the wake of election for the posts of president and vice president to be held on September 3.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm